ಇನ್ನು 20 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರ: ರಾಮುಲು
ಮೋದಿ ಜನಪರ ಕಾರ್ಯಗಳಿಗೆ ಜನರ ಆಶೀರ್ವಾದ; ಡಿಕೆಶಿಗೆ ಯಾವತ್ತೂ ಕೇಡು ಬಯಸಿಲ್ಲ
Team Udayavani, Oct 24, 2019, 9:20 PM IST
ಚಿತ್ರದುರ್ಗ: ಮೋದಿ ಜನೋಪಯೋಗಿ ಕಾರ್ಯಕ್ರಮಗಳಿಂದ ಜನಾಶೀರ್ವಾದ ಸಿಕ್ಕಿದ್ದು ದೇಶಾದ್ಯಂತ ಕಮಲ ಅರಳುತ್ತಿದೆ. ಕರ್ನಾಟಕದಲ್ಲಿ ಮೂರು ವರ್ಷ ಮಾತ್ರವಲ್ಲ, ಮುಂದಿನ 20 ವರ್ಷ ಬಿಜೆಪಿ ಸರ್ಕಾರವೇ ಇರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಭವಿಷ್ಯ ನುಡಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷ ನೆಲಸಮವಾಗುತ್ತಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಬಿಜೆಪಿ ಜನಪ್ರಿಯತೆ ಗಳಿಸುತ್ತಿದೆ. ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿ ಮುಖ್ಯಮಂತ್ರಿಗಳು ಜನಪ್ರಿಯತೆ ಗಳಿಸಿದ್ದಾರೆ ಎಂಬುದಕ್ಕೆ ಅಲ್ಲಿನ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದರು.
ಡಿಕೆಶಿ ಜೈಲಿನಿಂದ ಬಿಡುಗಡೆಯಾಗಲಿ ಎಂದು ಪ್ರಾರ್ಥಿಸಿದ್ದೇವೆ. ಶಿವಕುಮಾರ್ ಅವರು ಕಾನೂನು ಪ್ರಕಾರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಶತ್ರುವೇ ಆಗಿದ್ದರೂ ಕಷ್ಟದಿಂದ ಪಾರು ಮಾಡಲು ಪ್ರಯತ್ನಿಸುತ್ತೇವೆ. ಬಿಜೆಪಿ ಯಾರಿಗೂ ಕೇಡು ಬಯಸಿಲ್ಲ ಮತ್ತು ಬಯಸುವುದೂ ಇಲ್ಲ. ಮತ್ತೂಬ್ಬರಿಗೆ ಕೇಡು ಬಯಸುವುದು ಹಿಂದೂ ಧರ್ಮದಲ್ಲಿ ಇಲ್ಲ. ಕೇಡು ಬಯಸಿದರೆ ಹಿಂದೂಗಳಲ್ಲ ಎಂದರು.
ಸಿದ್ದರಾಮಯ್ಯ ಎಲ್ಲಿಯೂ ಸಮಾಧಾನವಾಗಿರಲ್ಲ. ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸುತ್ತಾರೆ. ಸದಾ ಕೆಣಕುವ, ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಸಮ್ಮಿಶ್ರ ಸರ್ಕಾರ ಇದ್ದಾಗಲೂ ಹೀಗೆಯೇ ಮಾತನಾಡಿ ಸರ್ಕಾರ ಪತನಕ್ಕೆ ಕಾರಣವಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು
MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್ಡಿಕೆ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್, ಎವರೆಸ್ಟ್ ಉತ್ಪನ್ನಗಳು ಪಾಸ್!
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ