ಗ್ರಂಥಪಾಲಕಿ ಮನೆ ಸೇರಿದ ಪುಸ್ತಕ


Team Udayavani, Oct 25, 2019, 2:36 PM IST

kopala-tdy-1

ದೋಟಿಹಾಳ: ಜುಮಲಾಪೂರದಲ್ಲಿ ಸಮುದಾಯ ಭವನದಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಗ್ರಂಥಾಲಯ ಶಿಥಿಲಗೊಂಡಿದ್ದರಿಂದ ಪುಸ್ತಕಗಳು ಸೇರಿದಂತೆ ಸಾಮಗ್ರಿಗಳು ಗ್ರಂಥಪಾಲಕಿಯ ಮನೆ ಸೇರಿವೆ.

ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲದ್ದರಿಂದ 2007-08ರಿಂದ ಸಮುದಾಯ ಭವನದಲ್ಲೇ ಕಾರ್ಯ ನಿರ್ವಹಿಸುತ್ತಿತ್ತು. ಸಮುದಾಯ ಭವನ ಈಗ ಶಿಥಿಲಗೊಂಡಿದ್ದು, ಮೇಲ್ಛಾವಣಿ ಇಂದೆಯೋ, ನಾಳೆಯೋ ಬೀಳುವ ಸ್ಥಿತಿಯಲ್ಲಿದೆ. ಮಳೆ ಬಂದರೆ ನೀರು ಕೇಂದ್ರದೊಳಗೆ ಬರುತ್ತವೆ. ಮಳೆ ಬಂದರೆ ಪುಸ್ತಕಗಳು ಹಾಳಾಗಿ ಹೋಗುತ್ತವೆ ಎಂಬ ಕಾರಣದಿಂದ ಪುಸ್ತಕ ಹಾಗೂ ಇತರೆ ಸಾಮಗ್ರಿಗಳು ಗ್ರಂಥಪಾಲಕರ ಮನೆ ಸೇರಿವೆ. ಹೀಗಾಗಿ ಗ್ರಂಥಾಲಯ ಬಂದಾಗಿ ಮೂರ್‍ನಾಲ್ಕು ತಿಂಗಳುಗಳು ಕಳೆದಿವೆ.

ಅದು ಅಲ್ಲದೇ ತಿಪ್ಪೆಗಳ ಮಧ್ಯೆಯೇ ಗ್ರಂಥಾಲಯವಿದ್ದಿದ್ದರಿಂದ ಓದುಗರು ವಾಸನೆ ಸಹಿಸಲಾಗದೇ ದೂರ ಹೋಗುವಂಥ ಸ್ಥಿತಿ ನಿರ್ಮಾಣವಾಗಿತ್ತು. ಸಾರ್ವಜನಿಕರು ದನಕರುಗಳ ಸೆಗಣಿ, ಮೂತ್ರ, ಕಸಕಡ್ಡಿ ಮತ್ತು ಇನ್ನಿತರ ನಿರುಪಯುಕ್ತ ವಸ್ತುಗಳನ್ನು ಹಾಕುತ್ತಿದ್ದರಿಂದ ಓದುಗರಿಗೆ ಗಬ್ಬು ವಾಸನೆ ಉಂಟಾಗಿ ಕಿರಿಕಿರಿಯಾಗಿತ್ತು. ಸುಮಾರು 2500 ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಕೇವಲ 50 ಜನ ಮಾತ್ರ ಗ್ರಂಥಾಲಯ ಸದಸ್ಯತ್ವ ಹೊಂದಿದ್ದು, ಎರಡು ಪತ್ರಿಕೆ, ಮೂರು ಮಾಸಪತ್ರಿಕೆ ಬರುತ್ತಿದ್ದವು. 2152 ಪುಸ್ತಕಗಳು ಈ ಗ್ರಂಥಾಲಯದಲ್ಲಿ ಇವೆ. ಆದರೆ ಅವು ಸಹ ಈಗ ಉಪಯೋಗಕ್ಕೆ ಬಾರದಂತಾಗಿವೆ.

ಗ್ರಾಮದ ಸಮುದಾಯ ಭವನದಲ್ಲಿ ಕಳೆದ 7-8 ವರ್ಷಗಳಿಂದ ನಡೆಯುತ್ತಿದ ಗ್ರಂಥಾಲಯ ಕಟ್ಟಡ ಶಿಥಿಲಗೊಂಡಿದೆ. ಮಳೆ ಬಂದರೆ ನೀರು ಕೇಂದ್ರದೊಳಗೆ ನೀರು ಬರುತ್ತವೆ. ಬೇರೆ ಕಟ್ಟಡ ವ್ಯವಸ್ಥೆ ಮಾಡಿಕೊಡಲು ಗ್ರಾಪಂ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಅನಿವಾರ್ಯವಾಗಿ ಮೂರು ತಿಂಗಳಿಂದ ನಮ್ಮ ಮನೆಯಲ್ಲೇ ಗ್ರಂಥಾಲಯ ಸಾಮಗ್ರಿ ಇಟ್ಟುಕೊಂಡಿದ್ದೇವೆ ಅಕ್ಕಮಹಾದೇವಿ, ಗ್ರಂಥಪಾಲಕಿ.

 

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.