1,383 ಕೋಟಿ ರೂ. ರೈಲು ಯೋಜನೆ ನನೆಗುದಿಗೆ


Team Udayavani, Oct 25, 2019, 3:11 PM IST

cn-tdy-1

ಚಾಮರಾಜನಗರ: ಬೆಂಗಳೂರಿನ ಹೆಜ್ಜಾಲ-ಕನಕಪುರಮಳ್ಳವಳ್ಳಿ-ಕೊಳ್ಳೇಗಾಲ ಮಾರ್ಗ ಚಾಮರಾಜ ನಗರ ಸಂಪರ್ಕಿಸುವ 142 ಕಿ.ಮೀ. ದೂರದ, 1383 ಕೋಟಿ ರೂ. ವೆಚ್ಚದ ರೈಲ್ವೆ ಮಾರ್ಗದ ಯೋಜನೆ ನನೆಗುದಿಗೆ ಬಿದ್ದಿದೆ.

ಮೂಲತಃ ಈ ಯೋಜನೆ ಬೆಂಗಳೂರಿನಿಂದ ಚಾಮರಾಜನಗರ ಮಾರ್ಗ ತಮಿಳುನಾಡಿನ ಸತ್ಯ ಮಂಗಲಕ್ಕೆ ರೈಲ್ವೆ ಮಾರ್ಗ ಸಂಪರ್ಕ ಕಲ್ಪಿಸುವ ಯೋಜ ನೆಯಾಗಿತ್ತು. ಇದರ ದೂರ 260 ಕಿ.ಮೀ. ಸತ್ಯಮಂಗಲ ಅರಣ್ಯದಲ್ಲಿ ರೈಲ್ವೆ ಮಾರ್ಗ ಹಾಯು ವುದರಿಂದ ತಮಿಳುನಾಡು ಮತ್ತು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಈ ಮಾರ್ಗಕ್ಕೆ ಒಪ್ಪಿಗೆ ನೀಡಲಿಲ್ಲ. ಮಾರ್ಗದ ನವೀಕರಣ: ಹೀಗಾಗಿ ಇದನ್ನು ಹೆಜ್ಜಾಲ ಚಾಮರಾಜನಗರ ಮಾರ್ಗವನ್ನಾಗಿ ನವೀಕರಿಸಲಾಯಿತು. ಇದಕ್ಕಾಗಿ ಅಂದಿನ ಸಂಸದ ಆರ್‌. ಧ್ರುವ ನಾರಾಯಣ ಅವರು 2012-13ರಲ್ಲಿ ಕೇಂದ್ರ ಸರ್ಕಾರ ಹಾಗೂ ಅಂದಿನ ರೈಲ್ವೆ ಸಚಿವ ಮಲ್ಲಿ ಕಾರ್ಜುನ ಖರ್ಗೆ ಅವರಿಗೆ ಈ ಮಾರ್ಗದ ಬಗ್ಗೆ ಮನವರಿಕೆ ಮಾಡಿಕೊಟ್ಟು ಯೋಜನೆ ಮಾರ್ಪಾಡು ಮಾಡಲು ಶ್ರಮಿಸಿದ್ದರು.

ತದನಂತರ ರೈಲ್ವೆ ಮಂಡಳಿ ಈ ಮಾರ್ಗಕ್ಕೆ ಅನುಮೋದನೆ ನೀಡಿ, ಮಾರ್ಗದ ಸರ್ವೆ ಕಾರ್ಯ ನಡೆಸಿತ್ತು. ಅದರ ಫ‌ಲವಾಗಿ 2013ರಲ್ಲಿ ಕೇಂದ್ರ ಸರ್ಕಾರ 1382.78 ಕೋಟಿ ರೂ. ಹಣವನ್ನು ಮೊದಲ ಹಂತವಾಗಿ ಮಂಜೂರು ಮಾಡಿತ್ತು. ಯೋಜನೆ ಒಟ್ಟು ವೆಚ್ಚದಲ್ಲಿ ಶೇ.50ರಷ್ಟು ಹಣವನ್ನು ಹಾಗೂ ಇದಕ್ಕೆ ಬೇಕಾದ ಭೂಮಿಯನ್ನು ರಾಜ್ಯ ಸರ್ಕಾರ ನೀಡಬೇಕೆಂದು ರೈಲ್ವೆ ಇಲಾಖೆ ತಿಳಿಸಿತ್ತು. ಪ್ರಥಮ ಕಂತಿನಲ್ಲಿ 18 ಕೋಟಿ ರೂ. ಹಣ ಸಹ ಯೋಜನೆಗೆ ಬಿಡುಗಡೆಯಾಗಿತ್ತು. 2014ರ ಡಿಸೆಂಬರ್‌ನಲ್ಲಿ ಚಾಮರಾಜನಗರ ರೈಲ್ವೆ ನಿಲ್ದಾಣದಲ್ಲಿ ಒಂದಷ್ಟು ಕಾಮಗಾರಿ ಆರಂಭಿಸಲಾಗಿತ್ತು.

ಬೊಕ್ಕಸಕ್ಕೆ ಹೊರೆ ಸಂಬಂಧ ಚಾಲನೆ ಸಿಕ್ಕಿರಲಿಲ್ಲ: ರಾಜ್ಯ ಸರ್ಕಾರ ಈ ಯೋಜನೆಗೆ ತನ್ನ ಪಾಲಿನ ಶೇ. 50ರಷ್ಟು ಅನುದಾನ ಹಾಗೂ ಭೂಸ್ವಾಧೀನ ಮಾಡಿಕೊಡಬೇಕಾಗಿತ್ತು. ಆಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿತ್ತು. ಎರಡು ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿರಲಿಲ್ಲ. ಮೂರನೇ ಸಂಪುಟ ಸಭೆಯಲ್ಲಿ ಯೋಜನೆಗೆ ಬೇಕಾದ ತನ್ನ ಪಾಲಿನ ಶೇ.50ರಷ್ಟು ಅನುದಾನ ನೀಡುವುದಾಗಿ ರಾಜ್ಯ ಸರ್ಕಾರ ಒಪ್ಪಿಗೆ ನೀಡಿತ್ತು.

ಸಂಪುಟದಲ್ಲಿ ಒಪ್ಪಿಗೆಯೇನೋ ದೊರೆಯಿತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಅಂದಿನ ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಶೇ.50ರಷ್ಟು ವೆಚ್ಚ ಮತ್ತು ಭೂಸ್ವಾಧೀನ ಎರಡಕ್ಕೂ ಅನುದಾನ ನೀಡಲು ರಾಜ್ಯ ಸರ್ಕಾರಕ್ಕೆ ಹೊರೆ ಯಾಗುತ್ತದೆ ಎಂದು ಚಾಲನೆ ನೀಡಿರಲಿಲ್ಲ ಎನ್ನಲಾಗಿದೆ.

ಈ ಯೋಜನೆಯಿಂದ ಕನಕಪುರ, ಮಂಡ್ಯ ಜಿಲ್ಲೆಗಳಿಗೆ ಪ್ರಯೋಜನ ದೊರಕುತ್ತಿದ್ದರೂ ಅಂದಿನ ಸಚಿವ ಡಿ.ಕೆ. ಶಿವಕುಮಾರ್‌ ಅವರು ಸಹ ಇದರ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಲಿಲ್ಲ ಎನ್ನಲಾಗಿದೆ. ಯೋಜನೆಗೆ ಬೇಕಾದ ಭೂಮಿ ಇಲ್ಲದೇ ಈ ರೈಲ್ವೆ ಮಾರ್ಗದ ಕಾಮಗಾರಿ ನಡೆಯುವಂತಿಲ್ಲ. ಹಾಗಾಗಿ ಈ ಯೋಜನೆಗೆ ಪ್ರಸ್ತುತ ನನೆಗುದಿಗೆ ಬಿದ್ದಿದೆ.

ಚಾ.ನಗರ-ಬೆಂಗಳೂರು ನೇರ ಮಾರ್ಗ: ರೈಲ್ವೆ ಮಾರ್ಗ ಒಂದು ವೇಳೆ ಕಾರ್ಯರೂಪಕ್ಕೆ ಬಂದರೆ, ಅದು ಚಾಮರಾಜನಗರ ಮತ್ತು ಬೆಂಗಳೂರು ನಡುವಿನ ಅತಿ ಹತ್ತಿರದ ಮಾರ್ಗವಾಗಲಿದೆ. ಪ್ರಸ್ತುತ ಚಾಮರಾಜನಗರದಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸಲು  ಮೈಸೂರು ಮೂಲಕವೇ ಹೋಗಬೇಕು. ಇದರ ಒಟ್ಟು ದೂರ 190 ಕಿ.ಮೀ. ಆಗುತ್ತದೆ. ಚಾಮರಾಜನಗರ ಕೊಳ್ಳೇಗಾಲ, ಕನಕಪುರ ಹೆಜ್ಜಾಲ ರೈಲ್ವೆ ಯೋಜನೆ ಕಾರ್ಯಗತವಾದರೆ, ಚಾಮರಾಜನಗರದಿಂದ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ 165 ಕಿ.ಮೀ. ದೂರವಾಗುತ್ತದೆ. ಕೇವಲ ಅಂತರ ಕಡಿಮೆಯಾಗುವುದಷ್ಟೇ ಅಲ್ಲ, ಪ್ರಸ್ತುತ ಚಾಮರಾಜನಗರದಿಂದ ಬೆಂಗಳೂರಿಗೆ (ಮೈಸೂರು ಮಾರ್ಗ) ಕೇವಲ ಎರಡು ರೈಲುಗಳು ಮಾತ್ರ ಇವೆ. ಈ ರೈಲುಗಳು ಮೈಸೂರಿಗೆ ಬಂದಾಗ ಲೆವೆಲ್‌ ಕ್ರಾಸಿಂಗ್‌ ಮಾಡಿ, ಮಾರ್ಗ ಕಾದು ಬರಲು ಮೈಸೂರಿನಲ್ಲಿ ಕನಿಷ್ಠ 30 ರಿಂದ 45 ನಿಮಿಷ ಕಾಯಬೇಕು.

ಹೀಗಾಗಿ ಪ್ರಯಾಣಿಕರಿಗೆ ಸಮಯವೂ ಉಳಿತಾಯವಾಗಲಿದೆ. ನೇರ ಮಾರ್ಗವಾದಾಗ ಈ ಮಾರ್ಗದಲ್ಲಿ ಬೆಂಗಳೂರಿಗೆ ಹೆಚ್ಚಿನ ರೈಲುಗಳು ಓಡಾಟ ನಡೆಸುವುದರಿಂದ ಪ್ರಯಾಣಿಕರಿಗೆ ಬಹಳ ಅನುಕೂಲವಾಗಿದೆ. ಮೈಸೂರು ಮಾರ್ಗದ ಒತ್ತಡವೂ ಕಡಿಮೆಯಾಗುತ್ತದೆ. ಮಂಡ್ಯ ಜಿಲ್ಲೆಯ ಮಳವಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ಪಟ್ಟಣಗಳಿಗೆ ಹೊಸದಾಗಿ ರೈಲ್ವೆ ಮಾರ್ಗ ದೊರಕಲಿದೆ. ಈ ಪಟ್ಟಣಗಳಿಗೆ ಈಗ ರೈಲ್ವೆ ಸೌಲಭ್ಯವಿಲ್ಲ. ಇದರಿಂದ ಮೂರು ಜಿಲ್ಲೆಯ ಜನರಿಗೆ ಬಹಳ ಅನುಕೂಲವಾಗಲಿದೆ.

 

-ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.