ಮಳೆ ಹಾನಿ ಪ್ರದೇಶಗಳ ಪರಿಶೀಲನೆ, ಮಾಹಿತಿ ಸಂಗ್ರಹ
Team Udayavani, Oct 25, 2019, 3:49 PM IST
ಕೆ.ಆರ್.ಪೇಟೆ: ತಾಲೂಕಿನಲ್ಲಿ ನಿರಂತರ ಮಳೆಯಿಂದ ನಷ್ಟ ಸಂಭವಿಸಿರುವ ಗ್ರಾಮಗಳಿಗೆ ಅಧಿಕಾರಿಗಳು ತೆರಳಿ ಮಾಹಿತಿ ಸಂಗ್ರಹಿಸಿ ಸೂಕ್ತ ಪರಿಹಾರ ನೀಡುವುದಾಗಿ ಕಂದಾಯ ನಿರೀಕ್ಷಕಿ ಚಂದ್ರಕಲಾ ತಿಳಿಸಿದರು.
ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ಮಳೆಗೆ ಕುಸಿದಿರುವ ನಂಜೇಗೌಡರ ಮನೆ ಪರಿಶೀಲಿಸಿ ಮಾತನಾಡಿದ ಅವರು, ಹದಿನೈದು ವರ್ಷಗಳ ಬಳಿಕ ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ. ಈ ಮಹಾಮಳೆಗೆ ತಾಲೂಕಾದ್ಯಂತ ಅನೇಕ ಗ್ರಾಮಗಳಲ್ಲಿ ಮನೆ, ಬೆಳೆಗೆ ಹಾನಿ ಉಂಟಾಗಿ ನಷ್ಟ ಸಂಭವಿಸಿದೆ. ಆದ್ದರಿಂದ ತಾಲೂಕು ಆಡಳಿತ ಸಂತ್ರಸ್ತರಿಗೆ ಪರಿಹಾರ ನೀಡುವ ದೃಷ್ಟಿಯಿಂದ ನಷ್ಟ ಪರಿಶೀಲನೆಗೆ ಮಾಹಿತಿ ಸಂಗ್ರಹಿಸ ವರದಿ ನೀಡಲಾಗುವುದು.
ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಾಂತ್ವನ ಹೇಳಿದರು. ತೊಂದರೆಗೆ ಒಳಗಾದವರು ಕೂಡಲೇ ನೇರವಾಗಿ ತಾಲೂಕು ಕಚೇರಿ ಅಥವಾ ಸ್ಥಳೀಯ ನಾಡ ಕಚೇರಿಗಳಿಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಕಳುಹಿಸುವ ಜೊತೆಗೆ ಸೂಕ್ತ ಪರಿಹಾರ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕೃಷ್ಣೇಗೌಡ, ಸಮಾಜ ಸೇವಕ ಎಂ.ದಿನೇಶ್, ಮನೆ ಮಾಲೀಕ ನಂಜೇಗೌಡ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್