ಯಶಸ್ವಿ ಜೈಸ್ವಾಲ್‌ನ ಸಾಧನೆ, ಅದರೊಂದಿಗಿನ ವೇದನೆ…


Team Udayavani, Oct 26, 2019, 4:02 AM IST

yasashvi

ಭಾರತ ಕ್ರಿಕೆಟ್‌ನಲ್ಲಿ ಒಬ್ಬ ಹೊಸ ಹುಡುಗನ ಹೆಸರು ಕೇಳಿ ಬರುತ್ತಿದೆ. ಕೆಲವು ತಿಂಗಳ ಹಿಂದೆ 17 ವರ್ಷದ ಈ ಹುಡುಗನ ಹೆಸರು ಬಹಳ ದೊಡ್ಡದಾಗಿಯೇನು ಕೇಳುತ್ತಿರಲಿಲ್ಲ. ಆತ ಪ್ರತಿಭಾವಂತನಾಗಿದ್ದರೂ, ಪ್ರಭಾವೀ ವೇದಿಕೆಯಲ್ಲಿ ಆತ ಕಾಣಿಸಿಕೊಳ್ಳದೇ ಹೋಗಿದ್ದರಿಂದ ಅದಕ್ಕಷ್ಟು ಮಹತ್ವ ಬಂದಿರಲಿಲ್ಲ. ವಿಜಯ್‌ ಹಜಾರೆ ಏಕದಿನ ಕೂಟದಲ್ಲಿ ಮುಂಬೈ ಪರ ಯಶಸ್ವಿ ಜೈಸ್ವಾಲ್‌ ಎಂಬ ಹುಡುಗ 203 ರನ್‌ ಬಾರಿಸಿ ವಿಶ್ವದಾಖಲೆ ನಿರ್ಮಿಸಿದ್ದೇ ತಡ, ಎಲ್ಲ ಮಾಧ್ಯಮಗಳಲ್ಲೂ ಆತನದ್ದೇ ಹೆಸರು ರಾರಾಜಿಸುತ್ತಿದೆ.

ದೇಶೀಯ ಏಕದಿನ ಪಂದ್ಯವೊಂದರಲ್ಲಿ ಅತೀ ಕಿರಿಯ ವಯಸ್ಸಿನಲ್ಲಿ ದ್ವಿಶತಕ ಬಾರಿಸಿದ ಆಟಗಾರ ಇವರು. ಜಾರ್ಖಂಡ್‌ ವಿರುದ್ಧ 154 ಎಸೆತಗಳಲ್ಲಿ 17 ಬೌಂಡರಿ, 12 ಸಿಕ್ಸರ್‌ ಸಮೇತ 203 ರನ್‌ ಚಚ್ಚಿದ್ದೇ ತಡ, ಜೈಸ್ವಾಲ್‌ ಸಾಧನೆಯ ಹಿಂದಿನ ವೇದನೆಯ ಕಥೆಗಳು ಹೊರಬಿದ್ದವು. ಬರೀ 11 ವರ್ಷಕ್ಕೆ ಉತ್ತರಪ್ರದೇಶದ ಬಡಕುಟುಂಬವನ್ನು ಬಿಟ್ಟು, ಕ್ರಿಕೆಟ್‌ ಆಡಲು ಜೈಸ್ವಾಲ್‌ ಮುಂಬೈಗೆ ಬಂದರು. ಅಲ್ಲಿ ಉಳಿದುಕೊಳ್ಳಲು ಜಾಗವಿಲ್ಲದೇ ಒಂದು ಡೈರಿಯಲ್ಲಿದ್ದರು. ಹಗಲಿಡೀ ಕ್ರಿಕೆಟ್‌ ಅಭ್ಯಾಸ ನಡೆಸಿ ಸುಸ್ತಾಗಿದ್ದ ಅವರಿಗೆ ರಾತ್ರಿ ಡೈರಿಯಲ್ಲಿ ಮಲಗಿ ನಿದ್ರೆ ಹೋಗಿದ್ದೇ ತಿಳಿಯುತ್ತಿರಲಿಲ್ಲ.

ಒಂದು ದಿನ ಡೈರಿಯಿಂದ ಅವರನ್ನು ಹೊರಹಾಕಿದರು. ಕಡೆಗೆ ಮುಸ್ಲಿಮ್‌ ಯುನೈಟೆಡ್‌ ಕ್ಲಬ್‌ನ ಟೆಂಟ್‌ನಲ್ಲಿ ಆಶ್ರಯ ಪಡೆದರು. ಇಲ್ಲಿ ಎಷ್ಟೋ ದಿನ ರಾತ್ರಿ ಹಸಿದು ಮಲಗಿದ್ದಾರೆ. ವಾರವಿಡೀ ದಿನದೂಡಲು ರಾಮಲೀಲಾ ಮೈದಾನದಲ್ಲಿ ಪಾನಿಪೂರಿ ಮಾರಿದ್ದಾರೆ. ಆಗ ತನ್ನ ತಂಡದ ಸಹ ಆಟಗಾರರು ನೋಡಿದರೇನು ಮಾಡುವುದು ಎಂದು ಅಂಜಿಕೊಂಡಿದ್ದಾರೆ. ಅಷ್ಟೆಲ್ಲ ಬೇಗೆಯಲ್ಲಿ ಬೆಂದ ಹುಡುಗ ಈಗ ತನ್ನ ಸಾಧನೆಗೆ ಫ‌ಲ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.