ಮಾರುಕಟ್ಟೆಯಲ್ಲಿ ರಾರಾಜಿಸುತ್ತಿದೆ ಗೂಡುದೀಪ,ಹಣತೆ

ದೀಪಾವಳಿ ಆಚರಣೆಗೆ ಸಿದ್ಧತೆ

Team Udayavani, Oct 26, 2019, 5:00 AM IST

2410KKRAM1

ಕಾರ್ಕಳ: ದೀಪಾವಳಿ ಆಚರಣೆಗೆ ನಗರದಲ್ಲಿ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಗೂಡುದೀಪಗಳು, ಹಣತೆಗಳು, ಪಟಾಕಿಗಳು ದೀಪಾವಳಿಯ ಪ್ರಮುಖ ಆಕರ್ಷಣೆಯಾಗಿದ್ದು, ವಿವಿಧ ಮಾದರಿಯ ಗೂಡುದೀಪ, ಹಣತೆಗಳು ನಗರದ ಅಂಗಡಿ ಮಳಿಗೆಗಳಲ್ಲಿ ರಾರಾಜಿಸುತ್ತಿವೆ.

ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳೊಂದಿಗೆ ನವೀನ ವಿನ್ಯಾಸದ ಗೂಡುದೀಪ ಮಳಿಗೆಗಳಲ್ಲಿ ಗ್ರಾಹಕರನ್ನು ಆಕರ್ಷಿಸುತ್ತಿದೆ. ಬಟ್ಟೆ, ಪ್ಲಾಸ್ಟಿಕ್‌ ಮತ್ತು ಬಣ್ಣದ ಕಾಗದಗಳಿಂದ ಮಾಡಿದ ಗೂಡು ದೀಪಗಳು ಮಾರುಕಟ್ಟೆಯಲ್ಲಿವೆ. ಇವುಗಳ ಪೈಕಿ ಬಣ್ಣದ ಕಾಗದದ ಗೂಡುದೀಪಗಳಿಗೆ ಹೆಚ್ಚಿನ ಬೇಡಿಕೆಯಿದೆ.

ಬಹುತೇಕ ಅಂಗಡಿ ಮಳಿಗೆಗಳಿಗೆ ಗೂಡುದೀಪಗಳನ್ನು ಬೆಂಗಳೂರಿನಿಂದ ತರಿಸಲಾಗುತ್ತಿದೆ. ಬಟ್ಟೆಯಿಂದ ಮಾಡಿದ ಗೂಡುದೀಪಗಳಲ್ಲಿ ಸುಮಾರು 25ಕ್ಕೂ ಮಿಕ್ಕಿದ ವಿನ್ಯಾಸಗಳಿದ್ದು, 60 ರೂ.ಗಳಿಂದ 350 ರೂ. ಬೆಲೆಯಿರುವ ಬಗೆಬಗೆಯ ಗೂಡುದೀಪಗಳಿವೆ.

ಹಣತೆಗಳ ಆಕರ್ಷಣೆ
ಮಣ್ಣಿನಿಂದ ತಯಾರಿಸಿದ ಹಾಗೂ ಪಿಂಗಾಣಿ ಹಣತೆಗಳ ಖರೀದಿಯೂ ಮಾರುಕಟ್ಟೆಯಲ್ಲಿ ಜೋರಾಗಿದೆ. ಪಿಂಗಾಣಿ ಹಣತೆಗಳಿಗೆ ಹೋಲಿಕೆ ಮಾಡಿದಲ್ಲಿ ಮಣ್ಣಿನ ಹಣತೆಗಳ ಬೆಲೆ ತುಸು ಕಡಿಮೆ. ಮಣ್ಣಿನ ಒಂದು ಹಣತೆಗೆ ಅದರ ವಿನ್ಯಾಸಕ್ಕೆ ಅನುಗುಣವಾಗಿ ರೂ. 3ರಿಂದ 10 ರೂ. ಬೆಲೆಯಿದೆ. ಹಣತೆಗಳನ್ನು ಅಂದವಾಗಿ ಜೋಡಿಸಿಟ್ಟ ಸೆಟ್‌ ಕೂಡ ಮಾರುಕಟ್ಟೆಯಲ್ಲಿ ಲಭ್ಯವಿದೆ.

ಹಣತೆಗಳ ಬದಲು ಬಣ್ಣದ ಬಣ್ಣದ ಲೈಟಿಂಗ್ಸ್‌ ಖರೀದಿಸುವತ್ತ ಕೆಲ ಗ್ರಾಹಕರು ಮುಂದಾಗಿರುವುದು ಕಂಡುಬರುತ್ತಿದೆ.

ಬಟ್ಟೆ ಅಂಗಡಿಗಳಲ್ಲೂ ಜನಸಂದಣಿ
ದೀಪಾವಳಿ ಪ್ರಯುಕ್ತ ಹೊಸ ಬಟ್ಟೆ ಖರೀದಿಸಲು ಗ್ರಾಹಕರು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಹಲವು ಬಟ್ಟೆ ಮಳಿಗೆಗಳು ದರ ಕಡಿತಗೊಳಿಸಿ ಗ್ರಾಹಕರನ್ನು ಆಕರ್ಷಿಸುತ್ತಿದೆ. ಕಾರ್ಕಳದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಬ್ಬದ ಸಂಭ್ರಕ್ಕೆ ಕೊಂಚ ಮಂಕಾಗಿಸುವ ಲಕ್ಷಣಗಳು ಗೋಚರಿಸುತ್ತಿವೆ. ಹಬ್ಬದ ಹಿನ್ನೆಲೆಯಲ್ಲಿ ಹಣ್ಣಿನ ಮತ್ತು ಹೂವಿನ ದರದಲ್ಲಿ ಇಂದಿನ ತನಕ ಏರಿಕೆಯಾಗಿಲ್ಲ. ನಾಳೆಯಿಂದ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ತಿಳಿಸುತ್ತಾರೆ.

ಪಟಾಕಿಗಳತ್ತ ಮಕ್ಕಳ ಚಿತ್ತ ಹರಿದಿದ್ದು, ಪಟಾಕಿ ಪರವಾನಿಗೆ ಹೊಂದಿದವರು ಮಾತ್ರ ಮಾರಾಟ ಮಾಡಲು ಅವಕಾಶವಿದೆ ಎಂದು ಕಾರ್ಕಳ ತಹಶೀಲ್ದಾರ್‌ ಪುರಂದರ ಹೆಗ್ಡೆ ತಿಳಿಸಿದ್ದಾರೆ.

ಪರಿಸರಸ್ನೇಹಿ ಗೂಡುದೀಪ
ಕಣ್ಣು ಕೋರೈಸುವ, ಪರಿಸರಕ್ಕೆ ಹಾನಿ ಮಾಡುವ ಕೃತಕ ಬೆಳಕು, ಅಲಂಕಾರಿಕಗಳ ಮಧ್ಯೆ ಸಾಂಪ್ರದಾಯಿಕ ಆಚರಣೆಗಳು ಉಳಿಯಬೇಕು ಎನ್ನುವ ಉದ್ದೇಶದೊಂದಿಗೆ ಜಾಗೃತಿ ನಿರಂತರವಾಗಿ ನಡೆಯುತ್ತಿರುವುದರಿಂದ ಪರಿಸರ ಸ್ನೇಹಿ ಸಾಂಪ್ರದಾಯಿಕ ಗೂಡುದೀಪಗಳಿಗೂ ಬೇಡಿಕೆ ಕುದುರಿದೆ.

ಗೂಡುದೀಪಗಳಲ್ಲಿ ಆಧುನಿಕ ಹಾಗೂ ಸಾಂಪ್ರದಾಯಿಕ ಎಂಬ ವಿಭಾಗವಿದ್ದು, ಸಿಡಿ, ಬಲ್ಬ್, ಆಲಂಕಾರಿಕ ವಸ್ತುಗಳನ್ನು ಬಳಸಿ ರಚಿಸುವುದು ಆಧುನಿಕ ಶೈಲಿಯಾದರೆ, ಬಿದಿರು, ಬಣ್ಣದ ಕಾಗದ, ನೂಲು, ಮಣಿ, ಕಾಳು, ಬೀಜ, ಐಸ್‌ಕ್ರೀಂ ಕಡ್ಡಿ, ಭತ್ತದ ತೆನೆ ಬಳಸಿ ಪರಿಸರಸ್ನೇಹಿ ಗೂಡುದೀಪಗಳನ್ನು ವಿವಿಧ ವಿನ್ಯಾಸಗಳೊಂದಿಗೆ ತಯಾರಿಸುವುದು ಸಾಂಪ್ರದಾಯಿಕ ಶೈಲಿ.

ಆಧುನಿಕ ಶೈಲಿಯ ಗೂಡುದೀಪಗಳು ಅಂಗಡಿ ಮುಂಗಟ್ಟುಗಳಲ್ಲಿ ಹೇರಳವಾಗಿ ಲಭ್ಯವಿವೆ. ಸಾಂಪ್ರದಾಯಿಕ ಗೂಡುದೀಪಗಳನ್ನು ಮನೆಗಳಲ್ಲಿ ತಯಾರಿಸುವವರೂ ಇದ್ದಾರೆ.

ಧಾರ್ಮಿಕ ಹಿನ್ನೆಲೆ
ದೀಪಾವಳಿ ಹಾಗೂ ಲಕ್ಷದೀಪ ಉತ್ಸವಗಳಲ್ಲಿ ಮಣ್ಣಿನ ಹಣತೆಗೆ ಹೆಚ್ಚಿನ ಬೇಡಿಕೆ ಇದೆ. ದೇವಾಲಯ, ಶ್ರದ್ಧಾಕೇಂದ್ರಗಳಲ್ಲಿ ಧಾರ್ಮಿಕ ಹಿನ್ನೆಲೆಯಲ್ಲೂ ಹಣತೆಗೆ ಒತ್ತು ನೀಡಲಾಗುತ್ತಿದೆ.

ಟಾಪ್ ನ್ಯೂಸ್

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.