ಸುಳ್ಯ ತಾ.ಪಂ. ಹೊಸ ಕಟ್ಟಡ ಕಾಮಗಾರಿ ಅಂತಿಮ ಹಂತಕ್ಕೆ


Team Udayavani, Oct 24, 2019, 4:41 AM IST

z-20

ಸುಳ್ಯ: ಸುಮಾರು 2.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾ.ಪಂ. ನೂತನ ಕಟ್ಟಡ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಕೆಲವು ದಿನಗಳಲ್ಲಿ ಉದ್ಘಾಟನೆಗೆ ಸಿದ್ಧಗೊಳ್ಳಲಿದೆ. ಒಂದು ವರ್ಷದ ಹಿಂದೆ ಕಾಮಗಾರಿ ಪ್ರಾರಂಭಗೊಂಡು ವೇಗವಾಗಿ ಪ್ರಗತಿ ಕಂಡಿತ್ತು. ಎಲ್ಲವೂ ನಿರೀಕ್ಷೆಯಂತೆ ಸಾಗಿದರೆ ಒಂದು ತಿಂಗಳೊಳಗೆ ಹೊಸ ಕಟ್ಟಡ ಉಪಯೋಗಕ್ಕೆ ಸಿದ್ಧಗೊಳ್ಳಲಿದೆ.

ಎರಡು ಮಹಡಿಗಳ ಕಟ್ಟಡ
ಹೊಸ ಕಟ್ಟಡ ಎರಡು ಮಹಡಿಗಳನ್ನು ಹೊಂದಿದೆ. ನೆಲ ಅಂತಸ್ತಿನಲ್ಲಿ ತಾ.ಪಂ. ಸಿಇಒ ಕೈಗಾರಿಕಾ ವಿಸ್ತರಣಾಧಿಕಾರಿ, ಅಕ್ಷರ ದಾಸೋಹ, ಎನ್‌ಆರ್‌ಇಜಿ, ವಸತಿ ಯೋಜನೆ ಕೊಠಡಿಗಳು ಇರಲಿವೆ. ಪ್ರಥಮ ಮಹಡಿಯಲ್ಲಿ ಶಾಸಕ, ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯೀ ಸಮಿತಿ ಅಧ್ಯಕ್ಷರಿಗೆ ಪ್ರತ್ಯೇಕ ಕೊಠಡಿ, ತಾ.ಪಂ. ಸರ್ವ ಸದಸ್ಯರಿಗೆ ಒಂದು ಕೊಠಡಿ, 100 ಮಂದಿ ಕುಳಿತುಕೊಳ್ಳಬಹುದಾದ ಮಿನಿ ಸಭಾಂಗಣ ನಿರ್ಮಾಣವಾಗಲಿದೆ. 2ನೇ ಮಹಡಿಯ ಮೇಲೆ ಶೀಟ್‌ ಅಳವಡಿಸಿ 250-300 ಮಂದಿ ಕುಳಿತುಕೊಳ್ಳಬಹುದಾದ ವಿಶಾಲ ಸಭಾಭವನ ನಿರ್ಮಾಣವಾಗಿದೆ.

ಇನ್ನೊಂದು ಕಟ್ಟಡ ತೆರವು?
ಹೊಸ ಕಟ್ಟಡದ ಸನಿಹದಲ್ಲಿರುವ ಹಿಂದುಳಿದ ಕಲ್ಯಾಣ ಇಲಾಖೆ, ಯುವಜನ ಇಲಾಖೆ ಇರುವ ಎರಡು ಮಹಡಿಯ ಕಟ್ಟಡ ತೆರವು ಮಾಡಿ ಪಾರ್ಕಿಂಗ್‌ಗೆ ಸ್ಥಳಾವಕಾಶ ಕಲ್ಪಿಸುವ ಪ್ರಸ್ತಾವನೆ ಕಳುಹಿಸಲಾಗಿದೆ ಎಂಬ ಮಾಹಿತಿ ಇದೆ. ಕೆಲವು ವರ್ಷಗಳ ಹಿಂದೆಯಷ್ಟೇ ಈ ಕಟ್ಟಡ ಕಟ್ಟಲಾಗಿದ್ದು, ಸ್ಥಳಾವಕಾಶದ ನೆಪದಲ್ಲಿ ಜನರ ತೆರಿಗೆ ಹಣದಲ್ಲಿ ನಿರ್ಮಿಸಿದ ಕಟ್ಟಡ ತೆರವು ಸಲ್ಲದು ಎನ್ನುವ ಅಭಿಪ್ರಾಯವೂ ಕೇಳಿ ಬಂದಿದೆ.

ಹಳೆ ಕಟ್ಟಡದ ಇತಿಹಾಸ
1965ರಲ್ಲಿ ಸುಳ್ಯ ತಾಲೂಕಾಗಿ ರೂಪುಗೊಂಡ ಬಳಿಕ 2018ರ ತನಕವೂ ಹೆಂಚು ಹಾಕಿದ ಹಳೆ ಕಟ್ಟಡವೇ ತಾ.ಪಂ. ಕಚೇರಿ ಕೇಂದ್ರವಾಗಿತ್ತು. ಈ ಹಳೆ ಕಟ್ಟಡ ಕೆಡವಿ ಜಿ.ಪಂ. ಕಚೇರಿ ಕಟ್ಟಡ ಮತ್ತು ನಿರ್ವಹಣ ಯೋಜನೆ ಅನುದಾನದಡಿ ಹೊಸ ಕಟ್ಟಡಕ್ಕೆ ಚಾಲನೆ ನೀಡಲಾಗಿತ್ತು. ಹಳೆ ಕಟ್ಟಡದ ಇತಿಹಾಸ ಅವಲೋಕಿಸುವುದಾದರೆ 1965ರಲ್ಲಿ 1966ರಲ್ಲಿ ತಾಲೂಕು ಅಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ ಬಂತು. ತಾಲೂಕು ಬೋರ್ಡ್‌ ಎಂದು ಅದನ್ನು ಕರೆಯಲಾಗುತ್ತಿತ್ತು. ಇದರ ಕಚೇರಿ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. 1987ರಲ್ಲಿ ಅಸ್ತಿತ್ವಕ್ಕೆ ಬಂದ ಜಿಲ್ಲಾ ಪರಿಷತ್‌, ಮಂಡಲ ಪಂಚಾಯತ್‌ ವ್ಯವಸ್ಥೆಯಲ್ಲಿ ಶಾಸಕರಿಗೆ, ಜಿಲ್ಲಾ ಪರಿಷತ್‌ ಸದಸ್ಯರಿಗೆ ಮತ್ತು ಮಂಡಲ ಪ್ರಧಾನರಿಗೆ ಸಂಪರ್ಕ ಕಲ್ಪಿ³ಸುವುದಕ್ಕಾಗಿ ತಾ.ಪಂ. ರಚಿಸಲಾಗಿತ್ತು. ಇದೇ ಕಟ್ಟಡದಲ್ಲಿ ಸಭೆ ನಡೆಯುತ್ತಿತ್ತು.

ತಿಂಗಳಲ್ಲಿ ಪೂರ್ಣ
ಹೊಸ ಕಟ್ಟಡ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಇನ್ನೂ ಪೈಂಟಿಂಗ್‌ ಸಹಿತ ಅಂತಿಮ ಹಂತದ ಕೆಲಸ ಮಾತ್ರ ಬಾಕಿ ಇದೆ. ಒಂದು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಟ್ಟಡ ಸಿದ್ಧಗೊಳ್ಳಲಿದೆ.
– ಭವಾನಿಶಂಕರ ಎನ್‌. ಇಒ, ತಾ.ಪಂ. ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.