ಲಾರಿ – ಬೊಲೆರೊ ಡಿಕ್ಕಿ; ಮೂವರ ದುರ್ಮರಣ, ಮೂವರು ಗಂಭೀರ
Team Udayavani, Oct 28, 2019, 11:26 AM IST
ಬಳ್ಳಾರಿ: ದೀಪಾವಳಿ ಪಾಡ್ಯ ದಿನದಂದು ಗಣಿನಾಡು ಬಳ್ಳಾರಿಯಲ್ಲಿ ಸೂತಕ ಛಾಯೆ ಆವರಿಸಿದೆ.
ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಬೊಲೆರೊ- ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದು, ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಂಡೂರು ತಾಲೂಕಿನ ಯಶವಂತನಗರದ ನಿವಾಸಿಗಳಾದ ಬುಸ್ಸಿ (21), ದಾದಾ ಕಲಂದರ (31), ಅಸ್ಲಾಂ (25) ಮೃತರೆಂದು ಗುರುತಿಸಲಾಗಿದೆ. ಪರಶುರಾಮ (28) ಮತ್ತು ಮನ್ಸೂರ್ (30) ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇರ್ಫಾನ್ (32) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಂಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಯಶವಂತ ನಗರದಿಂದ ತೋರಣಗಲ್ಲಿನ ಜಿಂದಾಲ್ ಉಕ್ಕು ಕಾರ್ಖಾನೆಗೆ ಹೋಗುತ್ತಿರುವಾಗ ಈ ಅಪಘಾತ ಸಂಭಿಸಿದೆ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್