ಪಟಾಕಿ ಅನಾಹುತ: ದೇಶಾದ್ಯಂತ 14 ಬಲಿ
Team Udayavani, Oct 28, 2019, 10:34 PM IST
ನವದೆಹಲಿ: ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಅನಾಹುತಗಳು ಸಂಭವಿಸಿ ದೇಶಾದ್ಯಂತ 9 ಮಂದಿ ಬಲಿಯಾಗಿದ್ದಾರೆ.
ನೂರಾರು ಮಂದಿ ಕಣ್ಣಿಗೆ ಹಾನಿ, ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಹಚ್ಚುವಾಗ, ಮನೆಗಳು, ಅಂಗಡಿಗಳಿಗೆ ಬೆಂಕಿ ಹತ್ತಿಕೊಂಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟಾರೆ 7 ಮಂದಿ ಮೃತಪಟ್ಟಿದ್ದಾರೆ. ಆದರೆ, ದೆಹಲಿಯಲ್ಲಿ 2017ರಲ್ಲಿ ಸುಡುಮದ್ದುಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹಾನಿಯ ಪ್ರಮಾಣ ಈ ಬಾರಿ ಕಡಿಮೆಯಾಗಿದೆ.
ಇನ್ನು ಒಡಿಶಾದಲ್ಲಿ ಪಟಾಕಿ ಸಂಬಂಧಿ ಘಟನೆಗಳಿಗೆ 5 ಮಂದಿ ಬಲಿಯಾಗಿದ್ದರೆ, ಪಶ್ಚಿಮ ಬಂಗಾಳದಲ್ಲಿ 2 ವರ್ಷದ ಬಾಲಕ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಸುಟ್ಟಗಾಯಗಳು, ಕಣ್ಣಿಗೆ ಹಾನಿಯಾಗಿ 498 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನಲ್ಲಿ 31 ರೋಗಿಗಳು, ಹೈದರಾಬಾದ್ನಲ್ಲಿ 77 ಮಂದಿಗೆ ಚಿಕಿತ್ಸೆ ನೀಡಲಾಗಿದೆ.
ದೆಹಲಿಯೊಂದರಲ್ಲೇ 200 ಅಗ್ನಿ ಅನಾಹುತದ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್ ಸಲಹೆ
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ