ಹಿಮಾಚಲ ಪ್ರದೇಶ ಸಿಜೆ, ಯಡಿಯೂರಪ್ಪ ಭೇಟಿ
Team Udayavani, Oct 29, 2019, 3:00 AM IST
ಬೆಂಗಳೂರು: ಹಿಮಾಚಲ ಪ್ರದೇಶದ ಹೈಕೋರ್ಟ್ ಮುಖ್ಯ ನಾಯ್ಯಮೂರ್ತಿ ಎಲ್.ನಾರಾಯಣ ಸ್ವಾಮಿಯವರು ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಹಿಮಾಚಲ ಪ್ರದೇಶದ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿ ಅ.6ರಂದು ನೇಮಕಗೊಂಡಿರುವ ಎಲ್.ನಾರಾಯಣ ಸ್ವಾಮಿಯವರು ಸೋಮವಾರ ಬೆಳಗ್ಗೆ ನಗರದ ಡಾಲರ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ, ಮುಖ್ಯಮಂತ್ರಿಯವರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ನಂತರ ಯಡಿಯೂರಪ್ಪ ಅವರು ತಮ್ಮ ಮನೆಯಿಂದ ಹೊರಗೆ ಬಂದು ಮುಖ್ಯ ನ್ಯಾಯಮೂರ್ತಿಗಳನ್ನು ಬೀಳ್ಕೊಟ್ಟರು.