ಮೂಡಂಬೈಲು: ಕನ್ನಡಿಗರ ಪ್ರತಿಭಟನೆ

ಕನ್ನಡ ತರಗತಿಗೆ ಮಲಯಾಳ ಅಧ್ಯಾಪಕರ‌ ನೇಮಕ

Team Udayavani, Oct 29, 2019, 5:57 AM IST

28MJS2

ಮಂಜೇಶ್ವರ: ಬೇಕಲ, ಉದುಮ ಇದೀಗ ಮೂಡಂಬೈಲು ಶಾಲೆಗೆ ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡ ಅರಿಯದ ಮಲಯಾಳ ಅಧ್ಯಾಪಕರನ್ನು ನೇಮಿಸುವ ಮೂಲಕ ಮತ್ತೆ ಕನ್ನಡಿಗರಿಗೆ ಕೊಡಲಿಯೇಟು ನೀಡಿದೆ.

ಮೀಂಜ ಪಂಚಾಯತ್‌ನ ಅಚ್ಚಗನ್ನಡ ಪ್ರದೇಶವಾದ ಮೂಡಂಬೈಲು ಸರಕಾರಿ ಶಾಲೆಯಲ್ಲಿ ಹೈಸ್ಕೂಲ್‌ ವಿಭಾಗ ಎಚ್‌.ಎಸ್‌.ಟಿ. (ಫಿಸಿಕಲ್‌ ಸಯನ್ಸ್‌) ಕನ್ನಡ ಹುದ್ದೆಗೆ ಕನ್ನಡ ಅರಿಯದ ಮಲ ಯಾಳಿ ತಿರುವನಂತಪುರದ ಆಟಿಂಗಲ್‌ ಅಲಾಂಕೋಡು ಪೆರುಮಕುಲಂ ಟೊಪ್ಪಿಚಂತದ ಮೊಹಮ್ಮದ್‌ ಶಿಜೀರ್‌ ಎಸ್‌. ನೇಮಕಗೊಂಡಿದ್ದು, ಅ.31 ರೊಳಗೆ ಹಾಜರಾಗುವಂತೆ ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ. ಕನ್ನಡದ ಗಂಧಗಾಳಿ ತಿಳಿಯದ ಅಧ್ಯಾಪಕನನ್ನು ನೇಮಿಸಿದ್ದು, ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡ ಅರಿಯದ ಮಲಯಾಳಿ ಅಧ್ಯಾಪಕರ‌ ನೇಮಕವನ್ನು ಪ್ರತಿಭಟಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಮುಷ್ಕರ ನಡೆಸಿದರು.

ಕನ್ನಡಿಗರು ನಿರಂತರವಾಗಿ ನಡೆಸುವ ಪ್ರತಿಭಟನೆಗಳನ್ನು ತೃಣ ಸಮಾನವಾಗಿಸಿ ಕೇರಳ ಲೋಕಸೇವಾ ಆಯೋಗ ಮತ್ತೆ ಮತ್ತೆ ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಅರಿಯದ ಮಲಯಾಳಿ ಅಧ್ಯಾಪಕರನ್ನು ನೇಮಿಸುವ ಮೂಲಕ ಕನ್ನಡ ವಿರೋಧಿ ಧೋರಣೆಯನ್ನು ತೋರಿದೆ. ಕೆಲವು ದಿನಗಳ ಹಿಂದೆ ಬೇಕಲ, ಉದುಮ ಶಾಲೆಗಳಲ್ಲಿ ಸಮಾಜ ವಿಜ್ಞಾನ ತರಗತಿಗೆ ಕನ್ನಡ ಅರಿಯದ ಮಲಯಾಳಿ ಅಧ್ಯಾಪಕರನ್ನು ನೇಮಿಸಲಾಗಿತ್ತು. ಇದರ ವಿರುದ್ಧ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಲ್ಲಿ ನೇಮಕಗೊಂಡಿದ್ದ ಅಧ್ಯಾಪಕರು ರಜೆಯಲ್ಲಿ ತೆರಳಿದ್ದಾರೆ. ಹೀಗಿರುವಂತೆ ಮೂಡಂಬೈಲು ಶಾಲೆಯಲ್ಲಿ ಕನ್ನಡ ವಿದ್ಯಾರ್ಥಿಗಳಿಗೆ ಮಲಯಾಳಿ ಅಧ್ಯಾಪಕರ‌ನ್ನು ನೇಮಿಸಿ ಕನ್ನಡಿಗರನ್ನು ಹತ್ತಿಕ್ಕಲು ಪಿಎಸ್‌ಸಿ ಯತ್ನಿಸುತ್ತಿದೆ.ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಸಹಿತ ಸಮಿತಿ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ನೇತಾರರು ಸಭೆಯಲ್ಲಿ ಭಾಗವಹಿಸಿದರು.

ತರಗತಿ,ಬಹಿಷ್ಕಾರ,ಪ್ರತಿಭಟನೆ
ತರಗತಿ ಬಹಿಷ್ಕಾರ, ಪ್ರತಿಭಟನೆ ಮುಂತಾದ ಕಾರ್ಯಗಳ ಸಹಿತ ಸ್ಥಳೀಯ ಕನ್ನಡಿಗರು ಶಾಲೆಯಲ್ಲಿ ಜತೆಗೂಡಿದ್ದಾರೆ. ಕನ್ನಡ ಅರಿಯದ ಮಲಯಾಳಿ ಅಧ್ಯಾಪಕನ ನೇಮಕಾತಿ ಹಿನ್ನೆಲೆಯಲ್ಲಿ ಅಧ್ಯಾಪಕ ಕೆಲಸಕ್ಕೆ ಹಾಜರಾಗುವುದನ್ನು ತಡೆಯುವುದಕ್ಕಾಗಿ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಪದಾಧಿಕಾರಿಗಳು,ಬಿಜೆಪಿ ಮುಖಂಡ ರವೀಶ ತಂತ್ರಿ ಕುಂಟಾರು,ಜಿಲ್ಲಾ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷದ್‌ ಮೊದಲಾದವರು ಜತೆಯಾಗಿ ಸಭೆ ನಡೆಸಿದ್ದಾರೆ. ಪಿಟಿಎ,ವಿದ್ಯಾರ್ಥಿಗಳು,ಕನ್ನಡಾಭಿಮಾನಿಗಳು ಶಾಲೆಯಲ್ಲಿ ಸೇರಿದ್ದಾರೆ. ಯಾವುದೇ ಕಾರಣಕ್ಕೂ ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡ ತಿಳಿಯದ ಅಧ್ಯಾಪಕ ತರಗತಿ ನಡೆಸಲು ಬಿಡುವುದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಧ್ಯಾಪಕ ಹಾಜರಾಗಲು ಬರುವಾಗ ಪ್ರತಿಭಟನೆ ನಡೆಸುವುದಾಗಿ ಕನ್ನಡಿಗರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.