ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿ
Team Udayavani, Oct 29, 2019, 11:02 AM IST
ಹರಿಹರ: ಸೂಳೆಕೆರೆ ಹಳ್ಳದ ಪ್ರವಾಹದಿಂದ ಕೊಚ್ಚಿ ಹೋಗಿದ್ದ ತಾಲೂಕಿನ ಬೆಳ್ಳೂಡಿ ಗ್ರಾಮದ ರಸ್ತೆಯನ್ನು ಭಾನುವಾರ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪರಿಶೀಲಿಸಿದರು.
ಸುಮಾರು 40 ಮೀ. ರಸ್ತೆಯೇ ನೀರಿನ ಸೆಳವಿಗೆ ಕೊಚ್ಚಿ ಹೋಗಿರುವುದನ್ನು ಕಂಡು ಆಶ್ಚರ್ಯಗೊಂಡ ಅವರು, ಸೇತುವೆ ನಿರ್ವಹಣೆ ಸಣ್ಣ ನೀರಾವರಿ ಇಲಾಖೆಗೆ ಹಾಗೂ ರಸ್ತೆ ನಿರ್ವಹಣೆ ಜಿಪಂ ಇಂಜಿನಿಯರಿಂಗ್ ವಿಭಾಗಕ್ಕೆ ಸೇರಿದ್ದಾಗಿದ್ದು, ಎರಡೂ ಇಲಾಖೆಗಳ ಕಾರ್ಯಪಾಲಕ ಅಭಿಯಂತರರಿಗೆ ದೂರವಾಣಿಯಲ್ಲಿ ಮಾತನಾಡಿ, ಕೂಡಲೇ ಜನ, ವಾಹನ ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿ, ನಂತರ ನಾಲ್ಕೈದು ದಿನಗಳಲ್ಲಿ ಪುನರ್ ನಿರ್ಮಾಣ ಕುರಿತು ವಿಸ್ತೃತ ವರದಿ ನೀಡಿವಂತೆ ಸೂಚಿಸಿದರು.
ಅಕ್ಕಪಕ್ಕದ ಎಲೆಬಳ್ಳಿ ತೋಟಗಳಿಗೆ ಭೇಟಿ ನೀಡಿದ ಡಿಸಿ, ನೀರು ನಿಂತು ಎಲೆಬಳ್ಳಿ ಸೊರಗಿರುವುದನ್ನು ಗಮನಿಸಿದರು. ಸತತವಾಗಿ ನೀರು ನಿಂತಿರುವುದರಿಂದ ಬಹುತೇಕ ಎಲೆಬಳ್ಳಿಗಳನ್ನು ಬದಲಿಸಬೇಕಾಗಿದೆ. ಇದರಿಂದ ಅಂದಾಜು ಎರಡು ವರ್ಷ ಬೆಳೆ ಇಲ್ಲದಂತಾಗುತ್ತದೆ. ಎಲೆಬಳ್ಳಿ ಮೇಲೆ ನಿರ್ಭರರಾದ ರೈತರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು. ಆಗ ಡಿಸಿ ನಷ್ಟಕ್ಕೀಡಾದ ರೈತರಿಗೆ ನಿಯಮದಂತೆ ಪರಿಹಾರ ಒದಗಿಸಲಾಗುವುದು. ಯಾವ ರೈತರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಧೆ„ರ್ಯ ತುಂಬಿದರು.
ಮಾಜಿ ಶಾಸಕ ಬಿ.ಪಿ. ಹರೀಶ್, ತಾಪಂ ಮಾಜಿ ಸದಸ್ಯ ಎಚ್.ಎಚ್. ಬಸವರಾಜ್ ಬೆಳ್ಳೂಡಿ, ಎಪಿಎಂಸಿ ಅಧ್ಯಕ್ಷ ನರೇಂದ್ರ ಬೆಳ್ಳೂಡಿ, ಗ್ರಾಪಂ ಅಧ್ಯಕ್ಷ ಮರುಳಸಿದ್ದಯ್ಯ, ಸದಸ್ಯ ರಾಜು, ತಹಸೀಲ್ದಾರ್ ಕೆ.ಬಿ.ರಾಮಚಂದ್ರಪ್ಪ, ಉಪನ್ಯಾಸಕ ಶಂಭುನಾಥ್, ಜಿಪಂ ಎಇಇ ಡೊಂಕಪ್ಪ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!
Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!
Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ