ಮಕ್ಕಳಲ್ಲಿ ದೇಶಾಭಿಮಾನ ಮೂಡಿಸುವ ಅಗತ್ಯವಿದೆ


Team Udayavani, Oct 30, 2019, 3:00 AM IST

makkalali

ಮೈಸೂರು: ಇಂದಿನ ಮಕ್ಕಳಿಗೆ ಇತಿಹಾಸದ ಸಂಪೂರ್ಣ ಅರಿವು ಮೂಡಿಸುವ ಮೂಲಕ ದೇಶಾಭಿಮಾನ ಹೆಚ್ಚಿಸುವ ಅಗತ್ಯವಿದೆ ಎಂದು ಮೈಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾಮಂದಿರದ ಮನೆಯಂಗಳದಲ್ಲಿ ಏರ್ಪಡಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಚನ್ನಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಹಾಳಾಗಿರುವ ಕಿತ್ತೂರು ಕೋಟೆ: 2006ರಲ್ಲಿ ತಾನು ವಿಶೇಷ ತಹಶೀಲ್ದಾರ್‌ ಆಗಿ ನೇಮಕಗೊಂಡಾಗ ಕಿತ್ತೂರನ್ನು ಆಯ್ಕೆ ಮಾಡಿಕೊಂಡೆ. ಕಿತ್ತೂರಿಗೆ ನೇಮಕಗೊಂಡು ಹೋದಾಗ ಮೊದಲಿಗೆ ಕಿತ್ತೂರಿನ ಕೋಟೆಗೆ ಭೇಟಿ ನೀಡಿದರೆ, ಅದರ ಸಂರಕ್ಷಣೆ ಮಾಡದೆ ಹಾಳಾಗಿ ಅವನತಿಯತ್ತ ಸಾಗಿತ್ತು. ಚನ್ನಮ್ಮನ ಕೋಟೆಯ ತೊಲೆಗಳು ಊರಿನ ದೇಸಾಯಿಗಳ ಮನೆಗಳ ತೊಲೆಗಳಾಗಿದ್ದವು. ಇನ್ನು ಸಂಗೊಳ್ಳಿ ರಾಯಣ್ಣನ ಮನೆಯ ಪರಿಸ್ಥಿತಿ ಕೂಡ ಇದಕ್ಕಿಂತ ಭಿನ್ನವಾಗಿಲ್ಲ.

ಅದು ಕೂಡ ಹಾಳಾಗಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಉತ್ತರ ಭಾರತದವರ ಹೋರಾಟವೇ ಹೆಚ್ಚು ಬಿಂಬಿತವಾಗಿದೆ. ದಕ್ಷಿಣ ಭಾರತದ ಸ್ವಾತಂತ್ರ್ಯ ಚಳವಳಿಗಾರರಲ್ಲಿ ಕೆಲವೇ ಕೆಲವರನ್ನು ಇತಿಹಾಸದಲ್ಲಿ ದಾಖಲಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪೋಷಕರು ತಮ್ಮ ಮಕ್ಕಳಿಗೆ ಮೊಬೈಲ್‌ ಕೊಡಿಸುತ್ತೇವೆ. ಆದರೆ, ಇತಿಹಾಸವನ್ನು ತಿಳಿಸಲ್ಲ. ಮಕ್ಕಳಿಗೆ ಇತಿಹಾಸ ತಿಳಿಸಿದರೆ ಅವರಲ್ಲಿ ದೇಶಾಭಿಮಾನ ಅಚ್ಚಳಿಯದೆ ಉಳಿಯುತ್ತದೆ ಎಂದು ಹೇಳಿದರು.

ಚನ್ನಮ್ಮ ಪ್ರಮುಖ ಹೋರಾಟಗಾರ್ತಿ: ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್‌ ಮಾತನಾಡಿ, ಅನೇಕ ಮಹನೀಯರ ತ್ಯಾಗ-ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪುರುಷರಷ್ಟೇ ಪ್ರಧಾನರಾಗಿ ಮಹಿಳೆಯರೂ ಹೋರಾಡಿದ್ದಾರೆ. ಅವರಲ್ಲಿ ಕಿತ್ತೂರು ಚನ್ನಮ್ಮ ಪ್ರಮುಖರು. ಇಂದಿನ ಪೀಳಿಗೆಗೆ ಕಿತ್ತೂರು ಚನ್ನಮ್ಮ ಆದರ್ಶವಾಗಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ ಮಾತನಾಡಿ, ರಾಜ್ಯದಲ್ಲಿ ಮಳೆಯಿಂದ ಹಲವಾರು ಜಿಲ್ಲೆಗಳು ಪ್ರವಾಹ ಪರಿಸ್ಥಿತಿ ಎದುರಿಸಿವೆ. ಮೈಸೂರು ಜಿಲ್ಲೆ ಕೂಡ ಪ್ರವಾಹಕ್ಕೆ ಸಿಲುಕಿದ್ದರಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಿ ಉಳಿದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವ ಸಿದ್ಧತೆ ‌ಸಭೆಯಲ್ಲಿ ತೀರ್ಮಾನಿಸಲಾಗಿರುವುದರಿಂದ ವೇದಿಕೆ ಕಾರ್ಯಕ್ರಮವಿಲ್ಲದೆ, ಚನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ. ರಾಜಣ್ಣ, ಕನ್ನಡಪರ ಹೋರಾಟಗಾರರಾದ ತಾಯೂರು ವಿಠ್ಠಲಮೂರ್ತಿ,ಮೂಗೂರು ನಂಜುಂಡಸ್ವಾಮಿ, ಬಿ.ಎ.ಶಿವಶಂಕರ್‌, ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಸಮಿತಿಯ ಕಾನ್ಯ ಶಿವಮೂರ್ತಿ, ಗಿರೀಶ್‌, ವಿರೂಪಾಕ್ಷ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.