ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಿ


Team Udayavani, Oct 30, 2019, 3:00 AM IST

pathyadashte

ಮೈಸೂರು: ಮಕ್ಕಳು ಪಠ್ಯದ ಕಲಿಕೆಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಿ, ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಂಡು ಸಾಧಕರಾಗಬೇಕು ಎಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು.

ಮೈಸೂರು ಆರ್ಟ್‌ ಗ್ಯಾಲರಿ ಆಶ್ರಯದಲ್ಲಿ ಅಗ್ರಹಾರದ ಅಕ್ಕನ ಬಳಗ ಶಾಲೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬಸವಣ್ಣನ ಭಾವಚಿತ್ರಗಳಿಗೆ ಬಣ್ಣ ತುಂಬುವ ಸ್ಪರ್ಧೆ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಠ್ಯದಲ್ಲಷ್ಟೇ ಮ್ಕಕಳು ಮುಳುಗಿ ಹೋಗದೆ ಕಲೆ, ಸಾಹಿತ್ಯ, ಚಿತ್ರಕಲೆ, ಸಂಗೀತ, ಕ್ರೀಡೆ ಸೇರಿದಂತೆ ಪಠ್ಯೇತರವಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡು ಸದಾ ಕ್ರಿಯಾಶೀಲರಾಗಿದ್ದುಕೊಂಡು ಯಾವುದಾದರೂ ಒಂದು ಕ್ಷೇತ್ರವನ್ನು ಪ್ರಧಾನವಾಗಿ ಆಯ್ಕೆ ಮಾಡಿಕೊಂಡು ಓದಿನ ಜೊತೆಯಲ್ಲೇ ಸಾಧನೆ ಮಾಡಬೇಕೆಂದರು.

ಜಾತ್ಯತೀತ ಸಮಾಜದ ಆಶಯದಲ್ಲಿ ವಚನಗಳ ಮೂಲಕ ಹೊಸದೊಂದು ಕ್ರಾಂತಿಯನ್ನು ಮಾಡಿದ ಕ್ರಾಂತಿಯೋಗಿ ಬಸವಣ್ಣನವರ ಭಾವಚಿತ್ರಕ್ಕೆ ಬಣ್ಣಹಚ್ಚುವ ಸ್ಪರ್ಧೆಯೊಡನೆ ಬಸವತತ್ವವನ್ನು ಮಕ್ಕಳಲ್ಲಿ ಬಿತ್ತುವ ಮತ್ತು ಚಿತ್ರಕಲಾಸಕ್ತಿಯನ್ನು ಬೆಳೆಸುವ ಕೈಂಕರ್ಯವನ್ನು ಮಾಡುತ್ತಿರುವ ಕಲಾವಿದ ಎಲ್‌. ಶಿವಲಿಂಗಪ್ಪನವರ ಬಸವ ಚಿಂತನೆ ಪ್ರತಿಯೊಬ್ಬರಿಗೂ ಪ್ರೇರಣೆಯಾಗಬೇಕು.

ಜಾತಿ, ಮತ, ಧರ್ಮ ಮೀರಿದ ಮಾನವ ಬಂಧುತ್ವದ ಬದುಕು ನಮ್ಮದಾಗಬೇಕು. ಈ ದಿಸೆಯಲ್ಲಿ ಶರಣರ ವಚನಗಳನ್ನು ಅದರಲ್ಲೂ ವಿಶೇಷವಾಗಿ ಬಸವಣ್ಣನವರ ವಚನಗಳನ್ನು ಓದಿ ಅರ್ಥ ಮಾಡಿಕೊಳ್ಳಬೇಕು. ಮಕ್ಕಳು ದಿನಕ್ಕೊಂದು ವಚನ ಓದಿ ಕಂಠಪಾಠ ಮಾಡಿಕೊಂಡರೂ ಸಾಕು.

ವರ್ಷದಲ್ಲಿ ನೂರಾರು ವಚನಗಳನ್ನು ತಮ್ಮ ಜ್ಞಾನ ಭಂಡಾರದಲ್ಲಿ ತುಂಬಿಕೊಂಡು ಜ್ಞಾನಶೀಲರಾಗಬಹುದೆಂದು ಹೇಳಿದರು. ಬಸವಣ್ಣನವರ ವಿವಿಧ ಬಗೆಯ ರೇಖಾಚಿತ್ರಗಳಿಗೆ ಬಣ್ಣ ಹಚ್ಚಿ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಮೈಸೂರು ಆರ್ಟ್‌ ಗ್ಯಾಲರಿಯಿಂದ ಸಂಸ್ಥಾಪಕ ಅಧ್ಯಕ್ಷ ಎಲ್‌. ಶಿವಲಿಂಗಪ್ಪ ಬಹುಮಾನ ನೀಡಿ ಗೌರವಿಸಿದರು.

ಅಕ್ಕನ ಬಳಗ ಶಾಲೆ ಮುಖ್ಯ ಶಿಕ್ಷಕಿ ಎಂ.ಜಿ. ಸುಗುಣಾವತಿ ಅಧ್ಯಕ್ಷತೆವಹಿಸಿದ್ದರು. ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ.ಸಂಗಪ್ಪ, ಮೈಸೂರು ಆರ್ಟ್‌ ಗ್ಯಾಲರಿಯ ಸಂಚಾಲಕ ಬಿ.ಕೆ.ಶ್ರೀಕಂಠಸ್ವಾಮಿ, ಎನ್‌.ಶ್ರೀಕಂಠಮೂರ್ತಿ, ಶಿಕ್ಷಕ ಶಿವಯ್ಯ, ಶಿಕ್ಷಕಿಯರಾದ ಜಿ. ಪುಷ್ಪಾವತಿ, ಶಿಲ್ಪಾ, ನಾಗರತ್ನ, ಬೃಂದಾ ಮುಂತಾದವರು ಉಪಸ್ಥಿತರಿದ್ದರು.

ಚಿತ್ರಕಲಾ ಸ್ಪರ್ಧೆ ವಿಜೇತರು: ಎ ಗುಂಪಿನಲ್ಲಿ ಅಕ್ಕನ ಬಳಗ ಶಾಲೆಯ ದೀಕ್ಷಿತಾ (ಪ್ರಥಮ), ಅನುಷಾ (ದ್ವಿತೀಯ), ಲಿಖೀತ್‌ ನಾಯಕ್‌ (ತೃತೀಯ), ಮಹಾಲಕ್ಷ್ಮೀ(ಸಮಾಧಾನಕರ). ಬಿ ಗುಂಪಿನಲ್ಲಿ ಲಕ್ಷ್ಮೀ(ಪ್ರಥಮ), ಸಲ್ಮಾ (ದ್ವಿತೀಯ), ಚಂದನ್‌ (ತೃತೀಯ), ಅಫ್ರಿದ್‌ ಅಹಮದ್‌ ಮತ್ತು ಜೋಯಾಹುಡ್‌ (ಸಮಾಧಾನಕರ).

ಎ ಗುಂಪಿನಲ್ಲಿ ಜಯಲಕ್ಷ್ಮೀ ವಿಲಾಸ ಶಾಲೆಯ ದಿಶಾ (ಪ್ರ), ಜಾರಾ (ದ್ವಿ) ಮಹೇಂದ್ರ (ತೃ), ಸಾಜಿಯಾಬಾನು (ಸ). ಬಿ ಗುಂಪಿನಲ್ಲಿ ಆರ್ಪಿಯಾ (ಪ್ರ), ದೀಪಕ್‌ (ದ್ವಿ), ಜೆಹಾರಬಿ (ತೃ), ತುಳಸಿ (ಸ).

ಎ ಗುಂಪಿನಲ್ಲಿ ಶ್ರೀಕೃಷ್ಣ ಲಲಿತಕಲಾ ಮಂದಿರ ಶಾಲೆಯ ಗೌತಮ್‌ (ಪ್ರ), ರಿನಾಯಕ್‌ (ದ್ವಿ), ಲಕ್ಷ್ಮೀ(ತೃ), ಪ್ರಜ್ವಲ್‌ (ಸ). ಬಿ ಗುಂಪಿನಲ್ಲಿ ಸುಮಾ (ಪ್ರ) ಸಿಂಚನಾ (ದ್ವಿ), ಭರತ್‌ (ತೃ), ಪಲ್ಲ (ಸ). ಸಿ ಗುಂಪಿನಲ್ಲಿ ಎಂ. ಮಹಂತೇಶ್‌ (ಪ್ರ), ಕೆ. ಪವನ್‌ಕುಮಾರ್‌ (ದ್ವಿ), ಎನ್‌.ವಿನೋದ್‌ (ತೃ) ಎನ್‌.ಜ್ಯೋತಿ (ಸ).

ಎ ಗುಂಪಿನಲ್ಲಿ ಶ್ರೀಕಾಂತ ಶಾಲೆಯ ಎಸ್‌.ವಿದ್ಯಾಶ್ರೀ (ಪ್ರ), ಎಚ್‌.ಎಲ್‌. ಜ್ಯೋತಿ (ದ್ವಿ), ಪಿ. ಸಂಜನಾ (ತೃ), ಎಸ್‌. ಅವಿನಾಶ್‌ (ಸ).

ಟಾಪ್ ನ್ಯೂಸ್

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.