ಹುಬ್ಬಳ್ಳಿಯಿಂದ ಬೆಂಗಳೂರಿಗೆ “ಕೃಷಿ ಪೇಟೆ’ ಎತ್ತಂಗಡಿ!


Team Udayavani, Oct 30, 2019, 3:08 AM IST

hubballi-bang

ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸೌಲಭ್ಯ ನೀಡುವ ಬದಲು ಇದ್ದ ಸೌಲಭ್ಯಗಳನ್ನು ಕಿತ್ತುಕೊಳ್ಳುವ ಅನ್ಯಾ ಯದ ಪರ್ವ ಮುಂದುವರಿದಿದೆ. ಬಿಜೆಪಿಗೆ ಹೆಚ್ಚು ಬಲ ತುಂಬಿದ ನೆಲದಲ್ಲಿ 45 ವರ್ಷಗಳಿಂದ ಕಾರ್ಯನಿರ್ವಹಿ ಸುತ್ತಿರುವ “ಕೃಷಿಪೇಟೆ’ ಮಾಸಪತ್ರಿಕೆ ಕಚೇರಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಧಾರವನ್ನು ಬಿಜೆಪಿ ಆಡಳಿತದಲ್ಲಿ ಕೈಗೊಳ್ಳಲಾಗಿದೆ.

ರಾಜ್ಯದ ಎಲ್ಲ 165 ಎಪಿಎಂಸಿಗಳಿಗೆ ಮುದ್ರಣ ಸಾಮಗ್ರಿ ಪೂರೈಸುವ ಮುದ್ರಣಾಲಯವನ್ನು ಖಾಸಗಿ ನಿರ್ವಹಣೆಗೆ ನೀಡುವ ಹಾಗೂ ಇಡೀ ರಾಜ್ಯದ ರೈತರಿಗೆ, ಎಪಿಎಂಸಿಗೆ ಕೃಷಿ ಮಾರುಕಟ್ಟೆ ಮಾಹಿತಿ ನೀಡುವ ಮಾಸಪತ್ರಿಕೆಯ ಕಚೇರಿಯನ್ನು ಬೆಂಗಳೂರಿಗೆ ಹೊತ್ತೂಯ್ಯುವ ಯತ್ನ ನಡೆಯುತ್ತಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿಯಲ್ಲಿದ್ದ ಕೆಶಿಫ್ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರಿಸಿದಾಗ ಇದು ಉತ್ತರ ಕರ್ನಾಟಕಕ್ಕೆ ಮಾಡಿದ ಅನ್ಯಾಯ, ದ್ರೋಹ-ವಂಚನೆ ಎಂದೆಲ್ಲ ಬಿಜೆಪಿಯವರು ಅಬ್ಬರಿಸಿದ್ದರು. ಇದೀಗ ಅದೇ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಹುಬ್ಬಳ್ಳಿಯಲ್ಲಿ ಸುಮಾರು ನಾಲ್ಕೂವರೆ ದಶಕಗಳಿಂದ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಕೃಷಿಪೇಟೆ ಮಾಸಪತ್ರಿಕೆ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಣಯ ಕೈಗೊಳ್ಳಲಾಗಿದೆ.

ಮಾಮಲೆ ದೇಸಾಯಿ ಶ್ರಮಕ್ಕಿಲ್ಲವೇ ಬೆಲೆ?: ಕೃಷಿ, ಪತ್ರಿಕಾರಂಗ, ಶಿಕ್ಷಣ… ಹೀಗೆ ವಿವಿಧ ಕ್ಷೇತ್ರಗಳಿಗೆ ಅಮೂಲ್ಯ ಕೊಡುಗೆ ನೀಡಿದ್ದ ಆರ್‌.ಬಿ.ಮಾಮಲೆ ದೇಸಾಯಿಯವರ ಪರಿಶ್ರಮದ ಫ‌ಲವಾಗಿ ಕೃಷಿಪೇಟೆ ಪತ್ರಿಕೆ ಆರಂಭಗೊಂಡಿತ್ತು. 1955ರಲ್ಲಿ ದೇಸಾಯಿ ಯವರು ಕೆಆರ್‌ಎಂಎಸಿ ಅಡಿಯಲ್ಲಿ “ರೈತನಪೇಟೆ’ ತ್ತೈಮಾಸಿಕ ಪತ್ರಿಕೆ ಆರಂಭಿಸಿದ್ದರು. ನಂತರ ಅದು ಮಾಸಿಕ ಪತ್ರಿಕೆಯಾಗಿತ್ತು.

1978ರಲ್ಲಿ ಕೆಆರ್‌ಎಂಎಸಿ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ವಿಲೀನವಾಗಿ ದ್ದರಿಂದ, “ರೈತನಪೇಟೆ’ ಮಾಸಪತ್ರಿಕೆ “ಕೃಷಿಪೇಟೆ’ ಹೆಸರಲ್ಲಿ ಪ್ರಕಟಗೊಳ್ಳುತ್ತಿದೆ. ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿ ಅಂದಾಜು 3 ಕೋಟಿ ರೂ. ವೆಚ್ಚದಲ್ಲಿ ಆರ್‌.ಬಿ. ಮಾಮಲೆದೇಸಾಯಿ ಸ್ಮಾರಕ ಭವನ ನಿರ್ಮಾಣಗೊಂಡಿದೆ. ಇದೇ ಕಟ್ಟಡದಲ್ಲಿಯೇ ಪತ್ರಿಕಾ ಕಚೇರಿ ಹಾಗೂ ಮುದ್ರಣಾಲಯವಿದೆ.

ಉತ್ತರಕ್ಕಿಲ್ಲವೇ ಸಾಮರ್ಥ್ಯ?: 45 ವರ್ಷಗಳಿಂದ ನಿರಂ ತರವಾಗಿ ಪತ್ರಿಕೆ ಹುಬ್ಬಳ್ಳಿಯಿಂದ ಹೊರ ಬರುತ್ತಿದ್ದು, ಸುಮಾರು 25,000 ಪ್ರತಿಗಳು ಮುದ್ರಣವಾಗುತ್ತಿವೆ. ವಾರ್ಷಿಕ ಚಂದಾದಾರರನ್ನು ಹೊಂದಿದೆ. ಕೃಷಿಪೇಟೆ ಮಾಸಪತ್ರಿಕೆ ಮುದ್ರಣಕ್ಕೆ ಪೂರಕವಾಗಿಯೇ 1982ರಲ್ಲಿ ಹುಬ್ಬಳ್ಳಿಯಲ್ಲಿ ಮುದ್ರಣಾಲಯವೊಂದನ್ನು ಆರಂಭಿಸಲಾಗಿತ್ತು.

ಇದೇ ಮುದ್ರಣಾಲಯದಲ್ಲಿ ರಾಜ್ಯದ ಎಲ್ಲ 165 ಎಪಿಎಂಸಿಗಳಿಗೆ ಅಗತ್ಯವಿರುವ ಏಕರೂಪ ರಿಜಿಸ್ಟರ್‌, ಫಾರಂಗಳು, ಸಾಮಾನ್ಯ ರಸೀದಿ ಪುಸ್ತಕ, ತೂಕದ ಪಟ್ಟಿ, ಖರೀದಿದಾರರ ಬಿಲ್‌ ಬುಕ್‌, ಮಾರಾಟ ಪಟ್ಟಿ ಪುಸ್ತಕ, ಪ್ರವೇಶ ಪತ್ರ, ವಿಕ್ರಿ ಪಟ್ಟಿ ಪುಸ್ತಕ, ಟೆಂಡರ್‌ ಸ್ಲಿಪ್‌, ಸಾಗಣೆ ರಹದಾರಿ ಪತ್ರ ಇನ್ನಿತರ ಮುದ್ರಣ ಕಾರ್ಯ ಕೈಗೊಳ್ಳಲಾಗುತ್ತಿದೆ. ಕೃಷಿಪೇಟೆ ಮಾಸಪತ್ರಿಕೆ ಹಾಗೂ ಮುದ್ರಣಾಲಯ ಲಾಭ- ನಷ್ಟವಿಲ್ಲದ ಆಧಾರದಲ್ಲಿ ನಡೆಯುತ್ತಿವೆ.

ಹಿರಿಯ ಅಧಿಕಾರಿಗಳು ಮಾತ್ರ ಇದೊಂದು ನಷ್ಟದ ಬಾಬತ್ತು, ಹುಬ್ಬಳ್ಳಿಯ ಬದಲು ಅದನ್ನು ಬೆಂಗಳೂರಿಗೆ ಸ್ಥಳಾಂತರಿಸ ಬೇಕು. ಮುದ್ರಣಾಲಯದ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಿ, ಮಾಸಪತ್ರಿಕೆ ಮುದ್ರಣವನ್ನು ಹೊರಗುತ್ತಿಗೆ ನೀಡಬೇಕೆಂಬ ಹಠಕ್ಕೆ ಬಿದ್ದವರಂತೆ ವರ್ತಿಸತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

ಅ.11ರಂದು ಬೆಂಗಳೂರಿನಲ್ಲಿ ನಡೆದ ಮಂಡಳಿ ಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರು ಕೃಷಿಪೇಟೆ ಮಾಸ ಪತ್ರಿಕೆ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಗುಣಮಟ್ಟದ ಪತ್ರಿಕೆಯನ್ನು ಹುಬ್ಬಳ್ಳಿಯಿಂದ ಹೊರತರಲು ಸಾಧ್ಯವಿಲ್ಲವೇ ಅಥವಾ ಉತ್ತರ ಕರ್ನಾಟಕಕ್ಕೆ ಅಂತಹ ಸಾಮರ್ಥ್ಯ ಇಲ್ಲವೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು.

ಪತ್ರಿಕೆ ಕಚೇರಿಯಲ್ಲಿ ಕಳೆದ 20-25 ವರ್ಷಗಳಿಂದ ಅನುಕಂಪಾಧಾರಿತ ಹೊರತುಪಡಿಸಿ ಉಳಿದ ಯಾವುದೇ ಹುದ್ದೆ ಭರ್ತಿ ಮಾಡಿಲ್ಲ. ಪತ್ರಿಕೆ ಸಲಹಾ ಮಂಡಳಿ ಸಭೆ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕೆಂದು ನಿಯಮ ಇದ್ದರೂ ಹಲವು ವರ್ಷಗಳಿಂದ ಅದು ಸಮರ್ಪಕವಾಗಿ ನಡೆಯುತ್ತಿಲ್ಲ. ಮುದ್ರಣಾಲಯದ ಮೇಲ್ದರ್ಜೆಗೆಂದು ಅಂದಾಜು 1 ಕೋಟಿ ರೂ.ಮೌಲ್ಯದ ಎರಡು ಯಂತ್ರಗಳು ಬಂದು 3 ವರ್ಷವಾದರೂ ಅವುಗಳ ಅಳವಡಿಕೆ-ಬಳಕೆ ಮಾಡದೆ ಹಾಳಾಗುವಂತೆ ಮಾಡಲಾಗಿದೆ.

ಉ.ಕ.ಕ್ಕೆ ಹೊಸತೇನಲ್ಲ: ಉತ್ತರ ಕರ್ನಾಟಕಕ್ಕೆ ಅನ್ಯಾ ಯದ ಬರೆ ಹೊಸತಲ್ಲ. ಈ ಹಿಂದೆ ಹುಬ್ಬಳ್ಳಿಯಲ್ಲಿನ ನೈಋತ್ಯ ರೈಲ್ವೆ ವಲಯ ಕಚೇರಿ, ವಿವಿಧ ಉತ್ಪನ್ನಗಳಿಗೆ ಅಗ್‌ಮಾರ್ಕ್‌ ನೀಡಿಕೆಯ ಹುಬ್ಬಳ್ಳಿಯಲ್ಲಿನ ಪ್ರಯೋಗಾ ಲಯ, ಬೆಳಗಾವಿಯ ವ್ಯಾಕ್ಸಿನ್‌ ಡಿಪೋದಲ್ಲಿನ ಆಯುಷ್‌ ಔಷಧಿ ತಯಾರಿಕೆ ಘಟಕಗಳನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವ ಯತ್ನ ನಡೆದಿತ್ತು. ಸಕ್ಕರೆ ನಿರ್ದೇಶನಾಲಯ, ಲೋಕಾಯುಕ್ತ ಕಚೇರಿ,

ಕೆಬಿಜೆಎನ್‌ಎಲ್‌, ಕೆಎನ್‌ಎನ್‌ಎಲ್‌ ಹೀಗೆ ಸುಮಾರು 9 ಕಚೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸುವುದಾಗಿ ನೀಡಿದ್ದ ಭರವಸೆಗಳಿಗೆ ವರ್ಷಗಳೇ ಕಳೆದಿವೆ. ಜನವರಿಯಲ್ಲಿ ಸರ್ಕಾರಿ ಅಧಿಸೂಚನೆ ಹೊರಬಿದ್ದರೂ ಇಂದಿಗೂ ಅದು ಕಡತಕ್ಕೆ ಸೀಮಿತವಾಗಿದೆ. ಹೆಚ್ಚಿನ ಸೌಲಭ್ಯ ನೀಡುವುದು ಒತ್ತಟ್ಟಿಗಿರಲಿ, ಇದ್ದ ಸೌಲಭ್ಯವನ್ನು ಕಿತ್ತುಕೊಳ್ಳುವ ಯತ್ನವನ್ನಾದರೂ ಸರ್ಕಾರಗಳು ಕೈ ಬಿಡಲಿ ಎಂಬುದು ಉ.ಕ. ಜನತೆಯ ಹಕ್ಕೊತ್ತಾಯ.

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.