ಕುಕ್ಕೆ ಜಲಸಂಗ್ರಹ ಘಟಕದಲ್ಲಿ ಕ್ಲೋರಿನ್ ಸೋರಿಕೆ, ಆತಂಕ
Team Udayavani, Oct 30, 2019, 3:00 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಕಲ್ಲಪಣೆಯ ಜಲಸಂಗ್ರಹ ಘಟಕದಲ್ಲಿ ಕ್ಲೋರಿನ್ ಸೋರಿಕೆಯಾಗಿ ಉಸಿರಾಟದ ತೊಂದರೆ ಕಂಡುಬಂದು ದರಿಂದ ಸ್ಥಳೀಯರು ಮನೆ ತೊರೆದು ಹೊರಬಂದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ತಡರಾತ್ರಿ 1 ಗಂಟೆ ವೇಳೆಗೆ ಕ್ಲೋರಿನ್ ಸೋರಿಕೆಯಾಗುತ್ತಿದ್ದಂತೆ ಪರಿಸರದಲ್ಲಿ ದುರ್ವಾಸನೆ ಪಸರಿಸಿತು. ಉಸಿರಾಟದ ತೊಂದರೆಗೊಳಗಾದ ಜನರು ಭಯದಿಂದ ರಾತೋರಾತ್ರಿ ಮನೆ ತೊರೆದು ಸಂಬಂಧಿಕರಲ್ಲಿ, ಪರಿಚಯಸ್ಥರಲ್ಲಿ ಆಶ್ರಯ ಪಡೆದರು.
ಘಟನೆ ವೇಳೆ ಘಟಕದಲ್ಲಿ ಇಬ್ಬರು ಸಿಬ್ಬಂದಿ ಮಾತ್ರ ಕರ್ತವ್ಯದಲ್ಲಿದ್ದರು. ಕೂಡಲೇ ದೇವಸ್ಥಾನ ಹಾಗೂ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಸುಳ್ಯದಿಂದ ಅಗ್ನಿಶಾಮಕ ದವರು ಬಂದು ಮುಂಜಾನೆ 5ರ ಹೊತ್ತಿಗೆ ಸೋರಿಕೆ ತಡೆಗಟ್ಟಿದರು.
50 ಕುಟುಂಬಗಳಲ್ಲಿ ಭೀತಿ: ದೀಪಾವಳಿ ಸಂಭ್ರಮಾಚರಿಸಿ ನಿದ್ರೆಗೆ ಜಾರಿದ್ದ 50ಕ್ಕೂ ಅಧಿಕ ಕುಟುಂಬಗಳ ಜನರು ಏಕಾಏಕಿ ನಡೆದ ಘಟನೆಯಿಂದ ಆತಂಕಕ್ಕೊಳಗಾಗಿದ್ದರು. ಸ್ಥಳೀಯರೆಲ್ಲರೂ ಬೆಳಗಿನ ತನಕವೂ ಭಯದಲ್ಲೇ ಇರುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ