ನಮ್ಮಲ್ಲಿ ಬಂಡವಾಳ ಹೂಡಬನ್ನಿ

ಸೌದಿ ಹೂಡಿಕೆದಾರರಿಗೆ ಮೋದಿ ಆಹ್ವಾನ ತೈಲ ಕ್ಷೇತ್ರದಲ್ಲಿ 7 ಲ.ಕೋ.ರೂ. ಹೂಡಿಕೆ

Team Udayavani, Oct 30, 2019, 6:50 AM IST

r-37

ಪ್ರಧಾನಿ ಮೋದಿ ಅವರು ಸೌದಿ ದೊರೆ ಸಲ್ಮಾನ್‌ರನ್ನು ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ರಿಯಾದ್‌: ದೇಶದ ಅರ್ಥ ವ್ಯವಸ್ಥೆಯನ್ನು ಐದು ಶತಕೋಟಿ ಡಾಲರ್‌ಗೆ ಏರಿಸುವ ಸರಕಾರದ ಸಂಕಲ್ಪಕ್ಕೆ ಪೂರಕವಾಗಿ ಅನಿಲ ಮತ್ತು ಪೆಟ್ರೋಲಿಯಂ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆ ಮಾಡಲು ಮುಂದೆ ಬರಬೇಕು ಎಂದು ಸೌದಿ ಅರೇಬಿಯಾದ ಕಂಪೆನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಸೌದಿ ಅರೇಬಿಯಾ ರಾಜಧಾನಿ ರಿಯಾದ್‌ನಲ್ಲಿ ಮಂಗಳವಾರ ಆರಂಭವಾಗಿರುವ 3 ದಿನಗಳ ಫ್ಯೂಚರ್‌ ಇನ್ವೆಸ್ಟ್‌ಮೆಂಟ್‌ ಇನಿಶಿ ಯೇಟಿವ್‌ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣದಲ್ಲಿ ಅವರು ಈ ವಿಚಾರ ಪ್ರಸ್ತಾವಿಸಿದ್ದಾರೆ. ಅನಿಲ, ಪೆಟ್ರೋಲಿಯಂ ಕ್ಷೇತ್ರಗಳಲ್ಲಿ 7.08 ಲಕ್ಷ ಕೋಟಿ ರೂ.ಗಳಷ್ಟು ಬಂಡವಾಳ ಹೂಡಿಕೆ ಮಾಡುವ ಗುರಿ ಇದೆ. ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡುವ ಕಂಪೆನಿಗಳಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಕೌಶಲಯುಕ್ತ ಸಿಬಂದಿಯ ಅಗತ್ಯ ಪೂರೈಸಲು 40 ಕೋಟಿ ಮಂದಿಗೆ ತರಬೇತಿ ನೀಡಲಾಗುತ್ತದೆ. ಸೌದಿ ಅರೇಬಿಯಾದ ತೈಲ ಉತ್ಪಾದನ ಸಂಸ್ಥೆ ಅರಾಮೊRà ದೇಶದ ತೈಲೋತ್ಪಾದನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದು ಸಂತಸ ತಂದಿದೆ ಎಂದು ಪ್ರಧಾನಿ ಹೇಳಿದ್ದಾರೆ. ಸ್ಟಾರ್ಟಪ್‌ ಮೂಲ ಸೌಕರ್ಯಕ್ಕಾಗಿ ವಿಶ್ವದಲ್ಲಿಯೇ 3ನೇ ಅತ್ಯಂತ ದೊಡ್ಡ ವ್ಯವಸ್ಥೆ ಭಾರತದಲ್ಲಿ ಇದೆ ಎಂದಿದ್ದಾರೆ.

ಒಂದೇ ವ್ಯವಸ್ಥೆ
ಚರಿತ್ರೆಯ ದಿನಗಳಿಂದಲೂ ಎರಡು ದೇಶಗಳು ಉತ್ತಮ ಸೌಹಾರ್ದಯುತ ಬಾಂಧವ್ಯ ಹೊಂದಿವೆ. ಹಾಲಿ ಕಾಲಘಟ್ಟದಲ್ಲಿಯೂ ವ್ಯೂಹಾತ್ಮಕ ಬಾಂಧವ್ಯ ಕಾಪಿಟ್ಟುಕೊಳ್ಳಲು ಆ ಉತ್ತಮ ತಳಹದಿ ನೆರವಾಗಿದೆ ಎಂದು ಮೋದಿ ಹೇಳಿದ್ದಾರೆ.

1.06 ಲ.ಕೋ.ರೂ. ಮೊತ್ತದ 23 ಒಪ್ಪಂದಗಳಿಗೆ ಸಹಿ
ರಿಯಾದ್‌ನಲ್ಲಿ ಮಂಗಳವಾರ ಆರಂಭವಾಗಿರುವ, ಮರುಭೂಮಿಯ ದಾವೋಸ್‌ ಆರ್ಥಿಕ ಶೃಂಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ 3 ದಿನಗಳ ಶೃಂಗದಲ್ಲಿ 1.06 ಲಕ್ಷ ಕೋಟಿ ರೂ. ಮೌಲ್ಯದ 23 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಸೌದಿ ರಾಜಕುಮಾರ ಮೊಹಮ್ಮದ್‌ ಬಿನ್‌ ಅದಕ್ಕೆ ಆಸಕ್ತಿ ವಹಿಸಿದ್ದಾರೆ. 2030ರ ಸೌದಿ ದಿಕ್ಸೂಚಿ ದಾಖಲೆಯ ಅನ್ವಯ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಅಧ್ಯಕ್ಷ ಮುಕೇಶ್‌ ಅಂಬಾನಿ ಸೇರಿದಂತೆ ಹಲವು ಮಂದಿ ಭಾರತದ ಮತ್ತು ಇತರ ದೇಶಗಳ ಪ್ರಮುಖ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಭಾರತೀಯರಿಗೆ 2ನೇ ಮನೆ: ಪ್ರಧಾನಿ ಬಣ್ಣನೆ
ಕೋಟ್ಯಂತರ ಭಾರತೀಯರಿಗೆ ಸೌದಿ ಅರೇಬಿಯಾ ಎನ್ನುವುದು 2ನೇ ಮನೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಅರಬ್‌ ನ್ಯೂಸ್‌’ ಜತೆಗೆ ಮಾತನಾಡಿದ ಅವರು, ಲಕ್ಷಾಂತರ ಮಂದಿ ಭಾರತೀಯರು ಪ್ರತಿ ವರ್ಷ ಹಜ್‌ ಮತ್ತು ಉಮ್ರಾ ಯಾತ್ರೆಗೆ ಸೌದಿಗೆ ಆಗಮಿಸುತ್ತಾರೆ ಎಂದಿದ್ದಾರೆ. ಸೌದಿಯಲ್ಲಿರುವ ಭಾರತೀಯರಿಗೆ ಸಂದೇಶ ನೀಡಿದ ಅವರು, ನಿಮ್ಮ ನಿಸ್ವಾರ್ಥ ಮತ್ತು ಕಠಿನ ದುಡಿಮೆಯಿಂದ ಈ ದೇಶವನ್ನು ಶ್ರೀಮಂತಗೊಳಿಸಿದ್ದೀರಿ. ಜತೆಗೆ ಎರಡೂ ದೇಶಗಳ ಬಾಂಧವ್ಯ ವೃದ್ಧಿಗೆ ಕಾರಣರಾಗಿದ್ದೀರಿ ಎಂದಿದ್ದಾರೆ.

ಹೊಸ ಶಕೆಯತ್ತ
ಫೆಬ್ರವರಿಯಲ್ಲಿ 2 ದೇಶಗಳು ಸಹಿ ಹಾಕಿದ ವ್ಯೂಹಾತ್ಮಕ ಸಹಕಾರ ಮಂಡಳಿಯು ಮುಂದಿನ ದಿನಗಳಲ್ಲಿ ಹೊಸ ಮಾದರಿಯ ಸಹಕಾರ ಸ್ಥಾಪಿಸಿಕೊಳ್ಳಲು ನೆರವಾಗಲಿದೆ ಮತ್ತು ಅದರಿಂದ ಎರಡೂ ದೇಶಗಳ ನಡುವಣ ಬಾಂಧವ್ಯದಲ್ಲಿ ವಿಶೇಷ ಅಧ್ಯಾಯ ಆರಂಭವಾಗಲಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ ಸೌದಿ ಅರೇಬಿಯಾದ 2030ರ ದಿಕ್ಸೂಚಿ ದಾಖಲೆಯಲ್ಲಿನ ಅಂಶಗಳಿಗೆ ಬೆಂಬಲ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ.

ವ್ಯೂಹಾತ್ಮಕ ಸಹಕಾರ ಒಪ್ಪಂದ
ಸೌದಿ ಜತೆಗೆ ವ್ಯೂಹಾತ್ಮಕ ಬಾಂಧವ್ಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ವ್ಯೂಹಾತ್ಮಕ ಸಹಕಾರ ಮಂಡಳಿ ಸ್ಥಾಪನೆಗೆ ಒಪ್ಪಂದ ಮಾಡಿ ಕೊಂಡಿದ್ದಾರೆ. ಇದರಿಂದ ಉಡುಪಿ ಬಳಿಯ ಪಾದೂರಿನ ಭೂಗತ ತೈಲ ಸಂಗ್ರಹಾಗಾರದಲ್ಲಿ ಕಚ್ಚಾ ತೈಲ ಸಂಗ್ರಹಕ್ಕೆ ಅನುಕೂಲವಾಗಲಿದೆ. ರುಪೇ ಕಾರ್ಡ್‌ ಅನ್ನು ಸೌದಿ ಅರೇಬಿಯಾದಲ್ಲಿ ಆರಂಭಿಸುವ ಬಗ್ಗೆ, ಸೌದಿಯ ಅಲ್‌ ಜೀರಿ ಕಂಪೆನಿ ಮತ್ತು ಐಒಸಿ ಜತೆಗೆ ಜಂಟಿ ಉದ್ದಿಮೆ ಸ್ಥಾಪಿಸುವ ಬಗ್ಗೆಯೂ ಸಹಿ ಹಾಕಲಾಗಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.