ಕಬ್ಬು ಕಟಾವಿಗೆ ಕೊಡಲಿ ಏಟು ಕೊಟ್ಟ ಮಳೆ


Team Udayavani, Oct 30, 2019, 10:36 AM IST

huballi-tdy-1

ಧಾರವಾಡ: ಧೋ ಎಂದು ಸುರಿಯುವ ಮಳೆ.. ಸೋ ಎಂದು ಬೀಸುವ ಬಿರುಗಾಳಿ.. ಸದ್ಯಕ್ಕೆ ಇವರಿಗೆ ತಾಡಪತ್ರಿಗಳೇ ಮನೆಗಳು.. ದುಡಿಯಲು ಗುಳೇ ಬಂದರೂ ತಪ್ಪುತ್ತಿಲ್ಲ ಇವರ ಬಾಳಿನ ಗೋಳು.. ಒಟ್ಟಿನಲ್ಲಿ ಮಳೆರಾಯನಿಗೆ ಹಿಡಿಶಾಪ..ಇವರ ಬದುಕು ಅಯ್ಯೋ ಪಾಪ.

ಹೌದು, ತುತ್ತಿನ ಚೀಲ ತುಂಬಿಸಿಕೊಳ್ಳಲು ದೂರದ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದು ವರುಣನ ಆರ್ಭಟದಲ್ಲಿ ಸಿಲುಕಿ ಬದುಕುತ್ತಿರುವುದು ಒಂದು ಕಡೆಯಾದರೆ, 4 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದು ನಿಂತ ಕಬ್ಬನ್ನು ಕಟಾವು ಮಾಡದ ಸ್ಥಿತಿನಿರ್ಮಾಣವಾಗಿದ್ದು ಕಿತ್ತೂರು ಕರ್ನಾಟಕ ಭಾಗದ ಕಬ್ಬು ಬೆಳೆಗಾರರು ಮಳೆಗೆ ಹಿಡಿಶಾಪ ಹಾಕುವಂತಾಗಿದೆ.

ಪ್ರತಿವರ್ಷದಂತೆ ಈ ವರ್ಷವೂ ಮಹಾರಾಷ್ಟ್ರದ ನಾಗ್ಪುರ, ಔರಂಗಾಬಾದ್‌, ಸತಾರಾ, ಮರಾಠಾವಾಡ ಪ್ರಾಂತ್ಯಗಳಿಂದ ದಸರಾ-ದೀಪಾವಳಿ ಸಮಯಕ್ಕೆ ಕಬ್ಬು ಕಟಾವು ಗ್ಯಾಂಗ್‌ಗಳು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಬಂದು ಬಿಡಾರ ಹೂಡಿದ್ದಾರೆ. 2 ಸಾವಿರಕ್ಕೂ ಹೆಚ್ಚು ಕುಟುಂಬಗಳು ಈ ಭಾಗದಲ್ಲಿ ಪ್ರತಿವರ್ಷ ಅಕ್ಟೋಬರ್‌ನಿಂದ ಆರು ತಿಂಗಳ ಕಾಲ ಕಬ್ಬು ಕಟಾವು ಮಾಡುವ ಕೂಲಿ ಅರಸಿ ಇಲ್ಲಿಯೇ ಉಳಿದು ದುಡಿಮೆ ಮಾಡುತ್ತವೆ. ದೊಡ್ಡ ದೊಡ್ಡ ಲಾರಿ ಮತ್ತು ಟ್ರಾಕ್ಟರ್‌ಗಳಲ್ಲಿಯೇಕುಟುಂಬ ಪರಿವಾರದೊಡನೆ ದುಡಿಯಲು ಬರುವ ಇವರಿಗೆ ಈ ವರ್ಷದ ಮಳೆ ಛಡಿ ಏಟು ಕೊಟ್ಟಿದೆ.

ಕೂಲಿ ಮೈಮೇಲೆ: ಅಕಾಲಿಕ ಮಳೆ ಆರ್ಭಟ ಈ ಕೂಲಿ ಕುಟುಂಬಗಳನ್ನುಕಂಗಾಲು ಮಾಡಿದ್ದು, ಸಣ್ಣ ಸಣ್ಣ ಮಕ್ಕಳೊಂದಿಗೆ ಸುರಿಯುವ ಮಳೆಯಲ್ಲಿ ಬದುಕಿದ್ದಾರೆ. ಕೇವಲ ಹತ್ತು ಅಡಿಯಲ್ಲಿ ತಾಡಪತ್ರಿಗಳ ಟೆಂಟ್‌ಗಳನ್ನು ಹಾಕಿಕೊಂಡು ಬದುಕುತ್ತಿರುವ ಈ ಕುಟುಂಬಗಳು ಸದ್ಯಕ್ಕೆ ತಮ್ಮ ಕೈಯಿಂದಲೇ ಹಣ ಹಾಕಿಕೊಂಡು ಇಲ್ಲಿ ಜೀವನ ನಡೆಸುತ್ತಿದ್ದಾರೆ. ಕಬ್ಬು ಕಟಾವು ಆರಂಭಗೊಂಡರೆ ರೈತರು ಲಾರಿಗಳಿಗೆ ಎಂಟ್ರಿ ಹಣ ಕೊಡುತ್ತಾರೆ. ಈ ಹಣದಿಂದಲೇ ಜೀವನಾವಶ್ಯಕ ವಸ್ತುಗಳನ್ನು ಕೊಳ್ಳುತ್ತಾರೆ. ಆದರೆ ಇದೀಗ ಮಳೆಯಿಂದಾಗಿ ಕಬ್ಬು ಕಟಾವು ವಿಳಂಬವಾಗಿದ್ದು, ಕಳೆದ 15 ದಿನಗಳಿಂದ ಕೂಲಿಯೂ ಇಲ್ಲದೇ ಇತ್ತ ಹಣವೂ ಇಲ್ಲದೆಪರದಾಡುತ್ತಿದ್ದಾರೆ.

ಕಬ್ಬು ಬೆಳೆಗಾರರಿಗೂ ನಷ್ಟ: ಕಿತ್ತೂರು ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ ಸದ್ಯಕ್ಕೆ ಇನ್ನೂ 15 ದಿನಗಳ ಕಾಲವಾದರೂ ಕಬ್ಬು ಕಟಾವು ಮಾಡುವಂತಿಲ್ಲ. ಕಬ್ಬಿನ ಗದ್ದೆಗಳಲ್ಲಿ ಒಂದೆರಡು ಅಡಿಯಷ್ಟು ನೀರು ಶೇಖರಣೆಯಾಗಿದ್ದು,  ಸತತ ಬಿಸಿಲು ಬಿದ್ದರೂ ಇನ್ನು ಎರಡು ವಾರಗಳ ಕಾಲವಾದರೂ ಭೂಮಿ ಒಣಗದ ಸ್ಥಿತಿ ತಲುಪಿದೆ. ಕಟಾವು ಮಾಡಿದರೂ ಅದನ್ನು ಸಾಗಿಸಲು ರೈತರ ಹೊಲಗಳಲ್ಲಿ ಲಾರಿ ಅಥವಾ ಟ್ರಾಕ್ಟರ್‌ಗಳು ಚಲಿಸದಷ್ಟು ಕೆಸರು ತುಂಬಿಕೊಂಡಿದೆ.

ಹೀಗಾಗಿ ರೈತರು ಕೂಡ ಕೊಂಚ ಕಂಗಾಲಾಗಿದ್ದಾರೆ. ಮಳೆ ಹೀಗೆ ಮುಂದುವರಿದರೆ ಕಬ್ಬಿನ ಕಾರ್ಖಾನೆಗಳಿಗೆ ನಂತರ ಒಮ್ಮೆ ಅಧಿಕ ಕಬ್ಬು ನುರಿಸುವ ಒತ್ತಡ ಬೀಳುವ ಸಾಧ್ಯತೆ ಇದೆ. ಸಾಮಾನ್ಯವಾಗಿ ದಸರಾ ಮರುದಿನಂದಲೇ ಕಿತ್ತೂರು ಕರ್ನಾಟಕ ಭಾಗದ ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿನ ಕಬ್ಬು ಕಟಾವು ಪ್ರತಿವರ್ಷ ಆರಂಭಗೊಳ್ಳುತ್ತದೆ. ಆದರೆ ಈ ವರ್ಷದ ಅಕಾಲಿಕ ಮಳೆಯು ಭತ್ತ ಮತ್ತು ಕಬ್ಬು ಎರಡನ್ನು ನೆಲಕ್ಕುರುಳಿಸಿದೆ.

ವರ್ಷ ಭತ್ತ, ಸೋಯಾಬಿನ್‌, ಗೋವಿನಜೋಳವಂತೂ ಮಳೆಯಿಂದಾಗಿ ಹಾಳಾಗಿ ಹೋದವು. ಇದೀಗ ಕಬ್ಬಿನ ಬೆಳೆ ಒಂದಿಷ್ಟು ಉಳಿದಿತ್ತು. ಈ ಮಳೆ ಅದಕ್ಕೂ ಕಲ್ಲು ಹಾಕಿ ರೈತರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಕಬ್ಬು ಬೆಳೆಹಾನಿಗೂ ಸರ್ಕಾರ ಪರಿಹಾರ ಕೊಡಬೇಕು.-ಶಿವಪ್ಪ ಬಡಿಗೇರ, ರೈತ ಮುಖಂಡ

 

-ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.