ರೈಲ್ವೆ ವಿಚಕ್ಷಣಾ ಸಪ್ತಾಹಕ್ಕೆ ಚಾಲನೆ
Team Udayavani, Oct 30, 2019, 10:45 AM IST
ಹುಬ್ಬಳ್ಳಿ: ನೈಋತ್ಯ ರೈಲ್ವೆ ವತಿಯಿಂದ ಆಯೋಜಿಸಿದ ವಿಚಕ್ಷಣಾ ಜಾಗೃತಿ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಇಲ್ಲಿನ ರೈಲ್ ಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನ ವ್ಯವಸ್ಥಾಪಕ ಎ.ಕೆ. ಸಿಂಗ್ ಮಾತನಾಡಿ, ಒಗ್ಗಟ್ಟು ನಮ್ಮ ಬಲವಾಗಿದೆ. ಒಗ್ಗಟ್ಟಿನಿಂದ ನಾವು ಪ್ರಗತಿ ಹೊಂದಲು ಸಾಧ್ಯ. ಪ್ರಾಮಾಣಿಕತೆ ಹಾಗೂ ಏಕತೆ ನಮ್ಮ ಅಸ್ತ್ರಗಳಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಎ.ಕೆ. ಸಿಂಗ್ ವಿಚಕ್ಷಣಾ ಸಪ್ತಾಹದ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿದರು. ರೈಲ್ ಸೌಧ ಆವರಣದ ಇಂಟಿಗ್ರಿಟಿ ಗಾರ್ಡನ್ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿ ಅನಾವರಣಗೊಳಿಸಿದರು.
ಉಪ ಪ್ರಧಾನ ವ್ಯವಸ್ಥಾಪಕ ರಾಜೀವ ಸಕ್ಸೇನಾ ಮಾತನಾಡಿ, ದೈನಂದಿನ ಕಾರ್ಯದಲ್ಲಿ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯ ಅವಶ್ಯಕತೆ ಕುರಿತು ತಿಳಿಸಿದರು. ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಕೆ. ಮಿಶ್ರಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ