ಶರಣರ ವಚನಗಳ ಧ್ವನಿಗೆ ರಾಜ್ಯೋತ್ಸವದ ಗರಿ

ಅಲಬನೂರು ಗ್ರಾಮದ ಜನಪದ-ತತ್ವಪದ ಗಾಯಕ ಉಸ್ಮಾನಸಾಬ್‌ „ ಜನಪದ ಹಾಡು ರಚಿಸಿ ಹಾಡುವ ಕಲಾವಿದ

Team Udayavani, Oct 30, 2019, 10:45 AM IST

27-October-38

ಚಂದ್ರಶೇಖರ ಯರದಿಹಾಳ
ಸಿಂಧನೂರು:
ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ತಾಲೂಕಿನ ಅಲಬನೂರು ಗ್ರಾಮದ ಜನಪದ ಹಾಡುಗಾರ ಉಸ್ಮಾನಸಾಬ್‌ ಖಾದರಸಾಬ್‌ ಅಲಬನೂರು ಭಾಜನರಾಗಿದ್ದಾರೆ. ಉಸ್ಮಾನಸಾಬ್‌ ಮೂಲತಃ ಭಾವೈಕ್ಯ ಸಾರುವ ಜನಪದ ಗೀತೆಗಳನ್ನು ಹಾಡುತ್ತ ಜನಪದ ಲೋಕಕ್ಕೆ ಕಾಲಿರಿಸಿದವರು. ಡೊಳ್ಳಿನ ಹಾಡು, ಭಜನಾ ಪದ, ಶರಣರ ವಚನ, ದಾಸರ ಪದ, ತತ್ವಪದಗಳನ್ನು ಹಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ತಂದೆ ಖಾದರಸಾಬ್‌ ಹಾಗೂ ದೊಡ್ಡಪ್ಪ ಹುಸೇನಸಾಬ್‌ ಮೂಲತಃ ರಂಗಭೂಮಿ ಕಲಾವಿದರು. ಅವರು ನಾಟಕಗಳಿಗೆ ತಮ್ಮದೇ ಆದ ಶೈಲಿಯಲ್ಲಿ ಹಾಡು ರಚಿಸಿ ಹಾಡುವ ಜತೆಗೆ ಅಭಿನಯಿಸುತ್ತಿದ್ದರು.

ಪಾಂಡುವಿಜಯ, ಕೀಚಕನ ವಧೆ, ಕೌರವರ ದರ್ಬಾರ, ಶ್ರೀಕೃಷ್ಣ ಸಂಧಾನ, ಸತ್ಯಭಾಮ ನಾಟಕಗಳಲ್ಲಿ ಪಾತ್ರ ನಿರ್ವಹಿಸಿ ರಾಯಚೂರು ಜಿಲ್ಲೆಯಲ್ಲಿ ಹೆಸರುವಾಸಿಯಾಗಿದ್ದರು. ರಂಗಭೂಮಿ ಹಿನ್ನೆಲೆಯ ಕುಟುಂಬದಲ್ಲಿ ಜನಿಸಿದ ಉಸ್ಮಾನ್‌ಸಾಬ್‌ ಓದಿದ್ದು ಕೇವಲ ಪಿಯುಸಿ. 1ರಿಂದ 10ನೇ ತರಗತಿವರೆಗೆ ಅಲಬನೂರಿನ ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿದ ಇವರು, ನಂತರ ಗದಗ ತಾಲೂಕಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದಾರೆ. 7 ಜನ ಮಕ್ಕಳಿದ್ದು, ಅದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದ ಮೂವರು ಪುತ್ರಿಯರಿದ್ದಾರೆ.

ಬೆಂಗಳೂರಿನಲ್ಲಿ ನೆಲೆ: ಉಸ್ಮಾನಸಾಬ್‌ ಹೊಟ್ಟೆಪಾಡಿಗಾಗಿ ಬೆಂಗಳೂರಿನ ಯಲಹಂಕಕ್ಕೆ ತೆರಳಿ ಅಲ್ಲಿಯೇ ಒಂದು ಡಿಟಿಪಿ ಹಾಗೂ ಝೆರಾಕ್ಸ್‌ ಸೆಂಟರ್‌ ಆರಂಭಿಸಿದ್ದಾರೆ. ಉಳಿದ ಸಮಯದಲ್ಲಿ ರಾಜ್ಯದ ಮೂಲೆ-ಮೂಲೆಗಳಲ್ಲಿ ಸಂಚರಿಸಿ ಜನಪದ ಸಂಗೀತ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

ವಿಶೇಷವಾಗಿ ಇವರು ಶರಣರ ವಚನಗಳು, ದಾಸರ ಪದಗಳು, ತತ್ವಪದಗಳು, ಶ್ರೀಕೃಷ್ಣ ಹರಿಹರನ ಪದಗಳು, ಜನಪದ ಲೋಕದ ಜೀವನ ಸೊಗಡು, ಅಣ್ಣ -ತಂಗಿ ಬಾಂಧವ್ಯ, ಅಕ್ಕ-ತಂಗಿ ಮಮತೆಯ ಪದಗಳು ರಚನೆ ಮಾಡಿ ಹಾಡುತ್ತಾರೆ. ಭಾಗ್ಯದ ಬಳೆಗಾರ, ಸೋಭಾನೆ ಪದಗಳನ್ನು ಸುಶ್ರಾವ್ಯವಾಗಿ ಹಾಡುವುದನ್ನು ರೂಢಿಸಿಕೊಂಡಿರುವ ಉಸ್ಮಾನಸಾಬ್‌ಗ ನಾಡಿನ ಖ್ಯಾತ ಮಠ-ಮಾನ್ಯಗಳಿಂದ ಹಾಗೂ ಸಂಘ ಸಂಸ್ಥೆಗಳಿಂದ ಕೆಂಪೇಗೌಡ ಪ್ರಶಸ್ತಿ, ಕನ್ನಡ ಸೇವಾರತ್ನ ಪ್ರಶಸ್ತಿ, ಕನ್ನಡದ ಪರಿಚಾರಕ ಪ್ರಶಸ್ತಿ, ಕನ್ನಡ ಜಂಗಮ ಪ್ರಶಸ್ತಿ ಹೀಗೆ ನಾನಾ ಪ್ರಶಸ್ತಿಗಳು ಅರಸಿ ಬಂದಿವೆ.

ನಮ್ಮ ಅಜ್ಜಿ ಊರಾದ ಮಾನ್ವಿ ತಾಲೂಕಿನ ಮಾಡಿಗೇರಿಯಲ್ಲಿ ಅಜ್ಜಿ ಚಾಂದಬಿಯೊಂದಿಗೆ ಚಿಕ್ಕ ವಯಸ್ಸಿನಲ್ಲಿಯೇ ಜಾನಪದ ಗೀತೆಗಳಲ್ಲಿ ಆಸಕ್ತಿ ತೋರಿ ಹಾಡುತ್ತಾ ಬಂದಿದ್ದೇನೆ. ಮುಂದೆ ಅನೇಕರ ಸಹಾಯ ಸಹಕಾರದಿಂದ ಬೆಳೆಯಲು ಸಾಧ್ಯವಾಗಿದೆ. ನನಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ಅತ್ಯಂತ ಸಂತಸ ತಂದಿದೆ. ಈ ಪ್ರಶಸ್ತಿಯನ್ನು ಈಚೆಗೆ ರಾಜ್ಯಾದ್ಯಂತ ನೆರೆ ಹಾಗೂ ಮಳೆಯಿಂದಾಗಿ ಜಲ ಸಂಕಷ್ಟಕ್ಕೀಡಾಗಿ ಮೃತಪಟ್ಟ ಬಂಧುಗಳಿಗೆ ಅರ್ಪಿಸುತ್ತೇನೆ.
ಉಸ್ಮಾನ್‌ಸಾಬ್‌ ಅಲಬನೂರು,
ಜನಪದ ಕಲಾವಿದ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.