ಕಾರ್ಯಾಂಗದಲ್ಲಿನ ‘ಲಂಚ ಸಾಮ್ರಾಜ್ಯ’ಕ್ಕೆ ಶಾಕ್ ನೀಡಿದ ಅಚಲ ವ್ಯಕ್ತಿತ್ವ


Team Udayavani, Oct 30, 2019, 11:50 AM IST

Venkatachala-730

ಬೆಂಗಳೂರು: ‘ವೆಂಕಟಾಚಲ’ ಎಂಬ ಹೆಸರು ಕೆಳಿದರೆ ಸಾಕು ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟುತ್ತಿದ್ದ ಕಾಲವೊಂದಿತ್ತು. ಲೋಕಾಯುಕ್ತ ಎಂಬ ಇಲಾಖೆ ಒಂದಿದೆ, ಯಾವನೇ ಸರಕಾರಿ ಅಧಿಕಾರಿ ಲಂಚ ಕೇಳಿದರೆ ಈ ಸಂಸ್ಥೆಗೆ ದೂರನ್ನು ನೀಡಬಹುದು ಎಂದು ಕರ್ನಾಟಕದ ಜನಸಾಮಾನ್ಯರಿಗೆ ಗೊತ್ತಾಗಿದ್ದೇ ಎನ್. ವೆಂಕಟಾಚಲ ಅವರು ಲೋಕಾಯುಕ್ತರಾಗಿ ಬಂದ ಮೇಲೆಯೇ.

2001ರಲ್ಲಿ ವೆಂಕಟಾಚಲ ಅವರು ಕರ್ನಾಟಕ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭ್ರಷ್ಟಾಚಾರ ನಿಯಂತ್ರಣಕ್ಕಾಗಿರುವ ಈ ಇಲಾಖೆಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಪ್ರಯತ್ನವನ್ನು ವೆಂಕಟಾಚಲ ಅವರು ಮಾಡಿದ್ದರು. ಮತ್ತು ಈ ಮೂಲಕ ಸರಕಾರಿ ಕಛೇರಿಗಳ ಆಯಕಟ್ಟಿನ ಜಾಗದಲ್ಲಿದ್ದ ಮಾತ್ರವಲ್ಲದೇ ಗ್ರಾಮೀಣ ಪ್ರದೇಶಗಳಲ್ಲೂ ಜನರಿಂದ ಲಂಚ ಪಡೆದುಕೊಳ್ಳುತ್ತಿದ್ದ ಸರಕಾರಿ ಅಧಿಕಾರಿಗಳ ಪಾಲಿಗೆ ವೆಂಕಟಾಚಲ ಎನ್ನುವ ಹೆಸರು ಸಿಂಹಸ್ವಪ್ನವಾಗುತ್ತಾ ಹೋಯಿತು.

ರಾಜ್ಯದಲ್ಲಿ 1984ರಲ್ಲಿ ಸ್ಥಾಪನೆಗೊಂಡ ಲೋಕಾಯುಕ್ತ ಸಂಸ್ಥೆಯು ಕಾರ್ಯಾಂಗದಲ್ಲಿ ಆಳವಾಗಿ ಬೇರುಬಿಟ್ಟಿರುವ ಲಂಚಗುಳಿತನ ವ್ಯವಸ್ಥೆಯನ್ನು ಮಟ್ಟಹಾಕುವ ಉದ್ದೇಶವನ್ನೇನೋ ಹೊಂದಿತ್ತು. ಆದರೆ ಜನಸಾಮಾನ್ಯರಿಗೆ ಈ ಇಲಾಖೆ ಮತ್ತು ಇದರ ಕಾರ್ಯವೈಖರಿಯ ಕುರಿತಾಗಿ ಅರಿವಿನ ಕೊರತೆ ಇದ್ದುದರಿಂದ ಜನಸಾಮಾನ್ಯರಿಗಾಗಿ ಸ್ಥಾಪನೆಗೊಂಡಿದ್ದ ಲೋಕಾಯುಕ್ತ ಇಲಾಖೆ ಅವರಿಂದ ದೂರವಾಗಿಯೇ ಕಾರ್ಯನಿರ್ವಹಿಸುವ ಸ್ಥಿತಿ ನಿರ್ಮಾಣಗೊಂಡಿತ್ತು.

ಆದರೆ 2001ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸರಕಾರದಿಂದ ಲೋಕಾಯುಕ್ತರಾಗಿ ನೇಮಕಗೊಂಡ ಬಳಿಕ ಅವರು ತಮ್ಮ ಕಾರ್ಯಶೈಲಿಗೊಂದು ಹೊಸ ರೂಪವನ್ನೇ ನೀಡಿದರು. ಲೋಕಾಯುಕ್ತವನ್ನು ಜನಸ್ನೇಹಿಯಾಗಿಸಲು ಅವರು ಮಾಡಿದ ಪ್ರಯತ್ನ ಕೆಲವೇ ದಿನಗಳಲ್ಲಿ ಫಲನೀಡಲಾರಂಭಿಸಿತು. ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಳ್ಳುವುದಕ್ಕೆ ಮುನ್ನ ಲೋಕಾಯುಕ್ತ ಕಛೇರಿಗೆ 20 – 25 ದೂರುಗಳು ಬರುತ್ತಿದ್ದರೆ ಇವರು ಅಧಿಕಾರ ಸ್ವೀಕರಿಸಿದ ಬಳಿಕ ಈ ಸಂಖ್ಯೆ 200 ರಿಂದ 250ಕ್ಕೆ ಏರಿಕೆ ಕಂಡಿತ್ತು.

ಸರಕಾರಿ ಕಛೇರಿಗಳ ಮೇಲೆ ದಿಡೀರ್ ದಾಳಿ ಮತ್ತು ಅಲ್ಲಿನ ಕಾರ್ಯವೈಖರಿಯ ಪರಿಶೀಲನೆಗೆ ವೆಂಕಟಾಚಲ ಅವರು ಪ್ರಥಮ ಆದ್ಯತೆಯನ್ನು ನೀಡುತ್ತಿದ್ದರು. ಹಾಗಾಗಿ ಇವರ ನಾಲ್ಕೂವರೆ ವರ್ಷಗಳ ಕಾರ್ಯಾವಧಿಯಲ್ಲಿ ಸರಿಸುಮಾರು 50 ಸಾವಿರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಸರಕಾರಿ ಅಧಿಕಾರಿಗಳ ದುರ್ವರ್ತನೆ, ಬೇಜವಾಬ್ದಾರಿತನ, ನಿರ್ಲಕ್ಷ್ಯಗಳಿಗೆ ಉರಿದುಬೀಳುತ್ತಿದ್ದ ವೆಂಕಟಾಚಲ ಅವರು ಅಂತಹ ಅಧಿಕಾರಿಗಳಿಗೆ ಎಲ್ಲರ ಮುಂದೆಯೇ ಕ್ಲಾಸ್ ತೆಗೆದುಕೊಳ್ಳುತ್ತಿದ್ದರು.

ಇನ್ನು ಸರಕಾರಿ ಕಛೇರಿಗಳು ಮಾತ್ರವಲ್ಲದೇ ಜನರಿಗೆ ಸೌಲಭ್ಯ ನೀಡುವ ಸರಕಾರಿ ಆಸ್ಪತ್ರೆಗಳಿಗೂ ದಿಢೀರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದರು.

ಲೋಕಾಯುಕ್ತ ಕಾನೂನಿನ ಪ್ರಕಾರ ಲೋಕಾಯುಕ್ತರಿಗಿಂತಲೂ ಉಪಲೋಕಾಯುಕ್ತರಿಗೆ ಅಧಿಕಾರ ಹೆಚ್ಚು. ಆದರೆ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ಅವಧಿಯಲ್ಲಿ ಸರಕಾರ ಉಪಲೋಕಾಯುಕ್ತರ ನೇಮಕವನ್ನೇ ಮಾಡಿರಲಿಲ್ಲ. ಆದರೆ ಈ ಅಂಶ ವೆಂಕಟಾಚಲ ಅವರಿಗೆ ತಮ್ಮ ಕಾರ್ಯವನ್ನು ನಡೆಸಿಕೊಂಡು ಹೋಗುವಲ್ಲಿ ಯಾವುದೇ ರೀತಿಯಲ್ಲಿ ಅಡ್ಡಿಯಾಗಲಿಲ್ಲ ಎಂಬುದೇ ವಿಶೇಷ. ಕೆಲವು ಅತ್ಯಗತ್ಯ ಸಂದರ್ಭಗಳಲ್ಲಿ ಉಪಲೋಕಾಯುಕ್ತರ ಅಧಿಕಾರವನ್ನೂ ತಾವೇ ಚಲಾಯಿಸುವ ಮೂಲಕ ವೆಂಕಟಾಚಲ ಅವರು ಜನಸಾಮಾನ್ಯರ ದೂರುಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದರು.

ಬ್ರಿಟನ್ ನಲ್ಲಿರುವ ಭ್ರಷ್ಟಾಚಾರ ತಡೆ ಕಾನೂನು ನಮ್ಮ ದೇಶದಲ್ಲೂ ಜಾರಿಗೆ ಬರಬೇಕೆಂಬ ಅಭಿಪ್ರಾಯವನ್ನು ವೆಂಕಟಾಚಲ ಅವರು ಪದೇ ಪದೇ ವ್ಯಕ್ತಪಡಿಸುತ್ತಿದ್ದರು. ಭ್ರಷ್ಟಾಚಾರ ಆರೋಪಕ್ಕೆ ಗುರಿಯಾದಲ್ಲಿ ಪ್ರಧಾನಿಯನ್ನೂ ಸಹ ಸ್ವತಂತ್ರ ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸುವಂತಹ ಕಾನೂನು ಬ್ರಿಟನ್ ನಲ್ಲಿದೆ ಮತ್ತು ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಪ್ರತ್ಯೇಕ ನ್ಯಾಯಾಲಯದ ಅಗತ್ಯತೆಯನ್ನೂ ಸಹ ವೆಂಕಟಾಚಲ ಅವರು ಒತ್ತಿಹೇಳುತ್ತಿದ್ದರು.

24X7 ಚಾನೆಲ್ ಗಳು, ಸಾಮಾಜಿಕ ಜಾಲತಾಣಗಳು ಇಲ್ಲದಿದ್ದ 18 ವರ್ಷಗಳ ಹಿಂದೆಯೇ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ವೆಂಕಟಾಚಲ ಅವರ ಕಾರ್ಯವೈಖರಿ ಕರ್ನಾಟಕದ ಮೂಲೆ ಮೂಲೆಗಳಲ್ಲಿ ಮನೆಮಾತಾಗಿತ್ತು ಎಂದರೆ ಅವರ ಕಾರ್ಯ ಶೈಲಿ ಹೇಗಿದ್ದಿರಬಹುದೆಂದು ನಾವಿಂದು ಊಹಿಸಿಕೊಳ್ಳಬಹುದು.
ಕರ್ನಾಟಕ ಲೋಕಾಯುಕ್ತದಲ್ಲಿ ವೆಂಕಟಾಚಲ ಅವರ ಕಾರ್ಯಶೈಲಿಯಿಂದ ಪ್ರೇರಣೆ ಹೊಂದಿ ‘ಲಂಚ ಸಾಮ್ರಾಜ್ಯ’ ಎಂಬ ಕನ್ನಡ ಚಲನಚಿತ್ರವೂ ಸಹ ತೆರೆಕಂಡಿತ್ತು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.