ಮೂರುವರೆ ವರ್ಷ ನಾನೇ ಮುಖ್ಯಮಂತ್ರಿ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ
Team Udayavani, Oct 30, 2019, 1:01 PM IST
ಬೆಂಗಳೂರು: ಬರ ನಿರ್ವಹಣೆ, ನೆರೆ ಪರಿಹಾರದ ಜತೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಪಕ್ಷದ ವರಿಷ್ಠರು ನನಗೆ ಮುಕ್ತ ಅವಕಾಶ ನೀಡಿದ್ದು, ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ವರಿಷ್ಠರು ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲ ವಿಚಾರದಲ್ಲೂ ನನಗೆ ಮುಕ್ತ ಅವಕಾಶ ನೀಡಿದ್ದಾರೆ .
ಶಾಲಾ ಪಠ್ಯದಲ್ಲಿ ಟಿಪ್ಪುವಿಗೆ ಸಂಬಂಧಪಟ್ಟ ವಿಷಯವನ್ನು ಪರಿಶೀಲಿಸಿ ಆ ಬಳಿಕ ಕ್ರಮ ಕೈಗೊಳ್ಳಲಾಗುವುದು. ವಿಧಾನಸಭೆ ಕಲಾಪ ಪ್ರಸಾರಕ್ಕೆ ಖಾಸಗಿ ಸುದ್ದಿವಾಹಿನಿ ಕ್ಯಾಮೆರಾ, ಪತ್ರಿಕಾ ಛಾಯಾಗ್ರಾಹಕರಿಗೆ ವಿಧಿಸಿರುವ ನಿರ್ಬಂಧ ಕುರಿತಂತೆ ವಿಧಾನಸಭಾಧ್ಯಕ್ಷರೊಂದಿಗೆ ಚರ್ಚಿಸಲಾಗುವುದು. ಮುಂದಿನ ಅಧಿವೇಶನದ ವೇಳೆಗೆ ಮೊದಲಿನ ವ್ಯವಸ್ಥೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳನ್ನು ಗೆಲ್ಲುವ ಸವಾಲು ಇದೆ. ಗೆದ್ದೇ ಗೆಲ್ಲುತ್ತೇವೆ ಎಂಭ ವಿಶ್ವಾಸವಿದೆ. ಜೆಡಿಎಸ್ ಬೆಂಬಲದ ಪರಿಸ್ಥಿತಿ ಉದ್ಭವಿಸಿದರೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?