ನೋಟಿಸ್‌ ನೀಡಿದ್ರೂ ಅಧಿಕಾರ ಹಸ್ತಾಂತರಿಸಿಲ್ಲ


Team Udayavani, Oct 30, 2019, 3:46 PM IST

kolar-tdy-2

ಬಂಗಾರಪೇಟೆ: ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೊಬ್ಬರನ್ನು ಸಹಕಾರ ಇಲಾಖೆ ವರ್ಗಾವಣೆಗೊಳಿಸಿ, ಹುದ್ದೆಯಿಂದ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ನೋಟಿಸ್‌ ನೀಡಿ ಒಂದೂವರೆ ತಿಂಗಳು ಕಳೆದರೂ ಅಧಿಕಾರ ಬಿಟ್ಟುಕೊಡದೇ ಕಾಲಹರಣ ಮಾಡುತ್ತಿದ್ದಾರೆ ಎಂಬ ದೂರು ತಾಲೂಕಿನ ಬೋಡಗುರ್ಕಿ ವಿಎಸ್‌ ಎಸ್‌ಎನ್‌ನಿಂದ ಕೇಳಿ ಬಂದಿದೆ.

ಸಹಕಾರ ಸಂಘದಲ್ಲಿ ಆಡಳಿತ ಹಾಗೂ ಲೆಕ್ಕಪತ್ರಗಳ ಬಗ್ಗೆಸಮಗ್ರವಾಗಿ ಮಾಹಿತಿ ಕೇಳಿದ್ದ ವಿಎಸ್‌ಎಸ್‌ಎನ್‌ ಅಧ್ಯಕ್ಷರ ವಿರುದ್ಧವೇ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಘದ ನಿರ್ದೇಶಕರನ್ನು ಎತ್ತಿಕಟ್ಟಿ, ರಾಜೀನಾಮೆ ಕೊಡಿಸಿ ಸಂಘವನ್ನು ಸೂಪರ್‌ಸೆಡ್‌ ಮಾಡಿಸಿರುವ ಆರೋಪವನ್ನು ಪ್ರಭಾರ ಸಿಇಒ ಎನ್‌.ಶ್ರೀರಾಮರೆಡ್ಡಿ ಎದುರಿಸುತ್ತಿದ್ದು, ಇವರನ್ನು ವರ್ಗಾವಣೆ ಮಾಡಿ ಮೂರು ತಿಂಗಳೇ ಕಳೆದರೂ ಇದುವರೆಗೂ ಬಿಡುಗಡೆ ಹೊಂದಿಲ್ಲ ಎಂದು ಆರೋಪಿಸಲಾಗುತ್ತಿದೆ. ಸ್ಥಳೀಯ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಶಿಫಾರಸು ಮೇರೆಗೆ ಪ್ರಭಾರಿ ಸಿಇಒ ಆಗಿದ್ದ ಎನ್‌. ಶ್ರೀರಾಮರೆಡ್ಡಿರನ್ನು ಆ.22 ರಂದು ಬೋಡಗುರ್ಕಿವಿಎಸ್‌ ಎಸ್‌ಎನ್‌ನಿಂದ ಪ್ರಭಾರ ವಹಿಸಿದ್ದನ್ನು ವಾಪಸ್‌ ಪಡೆದು, ಹುಲಿಬೆಲೆ ವಿಎಸ್‌ಎಸ್‌ಎನ್‌ ಸಿಇಒ ಜಿ.ಆರ್‌. ಮಂಜುನಾಥ್‌ಗೌಡ ಅವರನ್ನು ನಿಯೋಜನೆ ಮಾಡಿ, ಆದೇಶಿಸಿದ್ದರೂ ಇದುವರೆಗೆ ಎನ್‌.ಶ್ರೀರಾಮರೆಡ್ಡಿರಿಂದ ಅಧಿಕಾರ ಹಸ್ತಾಂತರ ಮಾಡಿಕೊಳ್ಳಲು ಆಗಿಲ್ಲ.

ಬೋಡಗುರ್ಕಿ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ನಡೆದು ಇನ್ನೂ ಆರು ತಿಂಗಳು ಮುಗಿಯುವುದರೊಳಗೆ 11 ಸದಸ್ಯರ ಪೈಕಿ 7 ಮಂದಿ ಅಧ್ಯಕ್ಷರ ವಿರುದ್ಧವೇ ತಿರುಗಿಬಿದ್ದು ರಾಜೀನಾಮೆ ನೀಡಿದ್ದರಿಂದ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಆಡಳಿತಾಧಿಕಾರಿಯನ್ನು ನೇಮಿಸಿ, ಸಂಘವನ್ನು ಸೂಪರ್‌ಸೀಡ್‌ ಮಾಡಿದರು.

ತಾಲೂಕಿನ ಬೋಡಗುರ್ಕಿ ವಿಎಸ್‌ಎಸ್‌ಎನ್‌ನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿಗರು ತನ್ನ ಪ್ರಾಬಲ್ಯವನ್ನು ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ನಿರ್ದೇಶಕರು ಹೆಚ್ಚಾಗಿ ಗೆದ್ದಿದ್ದರೂ ಶಾಸಕ ಎಸ್‌.ಎನ್‌ .ನಾರಾಯಣಸ್ವಾಮಿ ಪ್ರಭಾವದಿಂದ ಕಾಂಗ್ರೆಸ್‌ ಬೆಂಬಲಿತ ಲಕ್ಷ್ಮೀನಾರಾಯಣ ಅವರನ್ನು ಅಧ್ಯಕ್ಷರಾಗಿ ಮಾಡಲಾಗಿತ್ತು. ಆಗ ಅಧ್ಯಕ್ಷರು ಸಿಇಒ ಅವರನ್ನು ಲೆಕ್ಕಪತ್ರಗಳ ವಿಚಾರದಲ್ಲಿ ಪ್ರಶ್ನಿಸಿದ್ದರು. ಆಗ ಸಂಘದ ಕೆಲವು ನಿರ್ದೇಶಕರೊಂದಿಗೆ ತನ್ನ ಹಿಡಿತ ಸಾಧಿಸಿರುವ ಸಿಇಒ ಎನ್‌.ಶ್ರೀರಾಮರೆಡ್ಡಿ, ಸಂಘವನ್ನು ಸೂಪರ್‌ ಸೀಡ್‌ ಮಾಡಿಸಿರುವ ದೂರು ಕೇಳಿಬಂದಿದೆ.

ಬೋಡಗುರ್ಕಿವಿಎಸ್‌ಎಸ್‌ಎನ್‌ ಪ್ರಭಾರಿ ಸಿಇಒ ಆಗಿರುವ ಎನ್‌.ಶ್ರೀರಾಮರೆಡ್ಡಿ, ಕೆಜಿಎಫ್ ತಾಲೂಕಿನ ಕೆಂಪಾಪುರ ವಿಎಸ್‌ಎಸ್‌ಎನ್‌ ಸಿಇಒ ಆಗಿದ್ದುಕೊಂಡು, ಇದರ ಜೊತೆಗೆ ಮಾಲೂರು ತಾಲೂಕಿನ ದೊಡ್ಡಶಿವಾರ ವಿಎಸ್‌ಎಸ್‌ಎನ್‌ ಪ್ರಭಾರ ಸಿಇಒ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಆಡಳಿತ ಮಂಡಳಿ ಮೊದಲು ಕಾಂಗ್ರೆಸ್‌ ಬೆಂಬಲಿತ ನಿರ್ದೇಶಕರ ವಶದಲ್ಲಿತ್ತು. ಪ್ರಸಕ್ತ ರಾಜಕೀಯ ಬದಲಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಸಿಇಒ ಎನ್‌. ಶ್ರೀರಾಮರೆಡ್ಡಿ, ಬಿಜೆಪಿ ಮುಖಂಡರೊಂದಿಗೆ ಸಂಸದ ಎಸ್‌.ಮುನಿಸ್ವಾಮಿ ಭೇಟಿ ಮಾಡಿ, ಬೋಡಗುರ್ಕಿವಿಎಸ್‌ಎಸ್‌ಎನ್‌ ಪ್ರಭಾರ ಸಿಇಒ ಆಗಿ ಮುಂದುವರಿಯಲು ಕಸರತ್ತು ನಡೆಸುತ್ತಿದ್ದಾರೆ. ಇತ್ತ ಲಕ್ಷ್ಮಿನಾರಾಯಣ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜ್‌ ಸೇರಿ ಶಾಸಕ ಎಸ್‌.ಎನ್‌ .ನಾರಾಯಣಸ್ವಾಮಿ ಮೂಲಕ ಎನ್‌.ಶ್ರೀರಾಮರೆಡ್ಡಿ ಅವರನ್ನು ಇಲ್ಲಿಂದ ಬಿಡುಗಡೆ ಮಾಡಿಸಲು ತೀವ್ರ ಕಸರತ್ತು ಮಾಡುತ್ತಿದ್ದಾರೆ.

ಸದ್ಯಕ್ಕೆ ತಾಲೂಕಿನ ಬೋಡಗುರ್ಕಿವಿಎಸ್‌ಎಸ್‌ ಎನ್‌ನಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಬೆಂಬಲಿಗರ ಬಲಾಬಲ ಪೈಪೋಟಿ ಹೆಚ್ಚಾಗಿದೆ. ಪ್ರಭಾರ ಸಿಇಒ ಎನ್‌.ಶ್ರೀರಾಮರೆಡ್ಡಿ ಸಂಘದ ಆಡಿಟ್‌ ಮಾಡಿಸಬೇಕು, ಅಲ್ಲಿಯವರೆಗೂ ಅಧಿಕಾರವನ್ನು ಯಾರಿಗೂ ಹಸ್ತಾಂತರ ಮಾಡದೇ ತಾವೇ ಮುಂದುವರಿ ಯುವುದಾಗಿ ಹೇಳುತ್ತಿದ್ದಾರೆ.

 

-ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.