ದಲಿತರನ್ನು ಮಂತ್ರಿ ಮಾಡದ ಬಿಜೆಪಿ ವಿರೋಧಿಸಿ


Team Udayavani, Oct 31, 2019, 3:00 AM IST

dalitarannu

ಹುಣಸೂರು: ಬಿಜೆಪಿ ಎಂದಿಗೂ ದಲಿತರಿಗೆ ಆದ್ಯತೆ ನೀಡಲ್ಲ. ಆರು ಬಾರಿ ಸಂಸದರಾಗಿರುವ ವಿ.ಶ್ರೀನಿವಾಸಪ್ರಸಾದ್‌, ರಮೇಶ್‌ಜಿಗಜಿಣಗಿ ಹಾಗೂ ರಾಜ್ಯದಲ್ಲಿ ಪಕ್ಷೇತರರೊಬ್ಬರನ್ನು ಹೊರತುಪಡಿಸಿ ದಲಿತ ಶಾಸಕ‌ರನ್ನು ಮಂತ್ರಿ ಮಾಡಲಿಲ್ಲ ಎಂದು ಮಾಜಿ ಸಂಸದ ಆರ್‌.ಧ್ರುವನಾರಾಯಣ ದೂರಿದರು.

ನಗರದ ಸಲೀಂ ಪ್ಯಾಲೆಸ್‌ನಲ್ಲಿ ಆಯೋಜಿಸಿದ್ದ ದಲಿತ ಸಮುದಾಯದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ದಲಿತರಿಗೆ ಕಾಂಗ್ರೆಸ್‌ ಹೆಚ್ಚಿನ ಆದ್ಯತೆ ನೀಡಿತ್ತು. ಸಾಕಷ್ಟು ಕಾರ್ಯಕ್ರಮ ರೂಪಿಸಿತ್ತು. ಬಿಎಸ್‌ಪಿ ಇಂದಿನ ಯುವಕರಲ್ಲಿ ಕಾಂಗ್ರೆಸ್‌ ವಿರೋಧಿ  ಭಾವನೆ ಮೂಡಿಸಿ, ದಲಿತರ ಮತಗಳನ್ನು ಒಡೆಯುತ್ತಿದೆ. ಈ ಬಗ್ಗೆ ಯುವಕರು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದರು.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಮಾಜಿ ಮಂತ್ರಿ ಪ್ರಿಯಾಂಕ ಖರ್ಗೆ, ಮತದಾರರು ಆಶೀರ್ವದಿಸಿದ್ದ ಅನರ್ಹ ಶಾಸಕರು ಜನರ ಆಶೀರ್ವಾದವನ್ನೇ ಮಾರಾಟ ಮಾಡಿಕೊಂಡು, ಸಂವಿಧಾನ, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ ಮತ್ತೆ ಆಶೀರ್ವಾದ ಕೇಳುವುದು ನಾಚಿಕೆಗೇಡು ಎಂದು ಕಿಡಿಕಾರಿದರು.

ಉಪಚುನಾವಣೆಯ ಉಸ್ತುವಾರಿ, ಮಾಜಿಮಂತ್ರಿ ಎಚ್‌.ಸಿ.ಮಹದೇವಪ್ಪ ಮಾತನಾಡಿ, ಯಾವ ಪಕ್ಷಕ್ಕೂ ಬಹುಮತ ಬಾರದಂತೆ ಆಶಿಸುವ ಜೆಡಿಎಸ್‌ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದು, ಇಲ್ಲಿನ ಅಭ್ಯರ್ಥಿಯಾಗಿರುವ ಮಂಜುನಾಥ್‌ ಒಳ್ಳೆ ಆಡಳಿತಗಾರನಾಗಿದ್ದು, ಅವರನ್ನು ಬೆಂಬಲಿಸಬೇಕು. “ಮತ ಸಂತೆ ಪುಸ್ತಕ’ ಬರೆದಿದ್ದ ವಿಶ್ವನಾಥ್‌ ಅವರೇ ಬಾಲಿಶ‌ ರಾಜಕಾರಣ ಮಾಡಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ್‌ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಸರಕಾರ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದೆ. ಕ್ಷೇತ್ರದ ಎಲ್ಲರನ್ನು ಸಮಾನವಾಗಿ ಕಂಡಿದ್ದೇನೆ. ಮನೆಮಗನೆಂದು ತಮ್ಮನ್ನು ಬೆಂಬಲಿಸಿರಿ, ಸದಾ ನಿಮ್ಮ ಕಷ್ಟ-ಸುಖಗಳಿಗೆ ಭಾಗಿಯಾಗುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ವಿಚಾರಗಳು ಹರಡುತ್ತಿದ್ದು, ಯಾರೂ ಕಿವಿಗೊಡಬಾರದು ಎಂದು ಕೋರಿದರು.

ಸಭೆಯಲ್ಲಿ ಮಾಜಿ ಶಾಸಕ ನರೇಂದ್ರಸ್ವಾಮಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್‌, ಜಿಲ್ಲಾಧ್ಯಕ್ಷ ಡಾ.ವಿಜಯಕುಮಾರ್‌, ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ನಾರಾಯಣ್‌ ಮಾತನಾಡಿದರು. ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸುಮತಿ, ತಾಪಂ ಅಧ್ಯಕ್ಷೆ ಪದ್ಮಮ್ಮ, ಬಿಳಿಕೆರೆ ಬಸವರಾಜು, ಸ್ವಾಮಿ, ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.