ಬಾಗ್ದಾದಿ ಹತ್ಯೆಗೆ ಸಹಕರಿಸಿದವನಿಗೆ 177 ಕೋಟಿ ರೂ.!

ಬಾಗ್ದಾದಿ ತಲೆಗೆ ವಿಧಿಸಿದ್ದ ಬಹುಮಾನ ಮೊತ್ತ ಪೂರ್ತಿ ಆತನಿಗೆ ಸಂದಾಯವಾಗುವ ಸಾಧ್ಯತೆ

Team Udayavani, Oct 30, 2019, 10:04 PM IST

Baghdadi

ವಾಷಿಂಗ್ಟನ್‌: ಐಸಿಸ್‌ ಉಗ್ರ ಸಂಘಟನೆಯ ಸಂಸ್ಥಾಪಕ ಹಾಗೂ ಜಾಗತಿಕ ಉಗ್ರ ಅಬು ಬಕರ್ ಅಲ್ ಬಾಗ್ದಾದಿಯ ಬಗ್ಗೆ ಖಚಿತ ಸುಳಿವನ್ನು ನೀಡಿ ಆತನ ವಿರುದ್ಧ ಕಾರ್ಯಾಚರಣೆ ನಡೆಸಲು ಅಮೆರಿಕ ಸೇನೆಗೆ ಸಹಕರಿಸಿದ ವ್ಯಕ್ತಿಗೆ ಅಂದಾಜು 177 ಕೋಟಿ ರೂ. ಬಹುಮಾನ ಸಿಗಲಿದೆ ಎಂದು ಅಮೆರಿಕ ಸರ್ಕಾರದ ಮೂಲಗಳು ತಿಳಿಸಿವೆ.

ಬಾಗ್ದಾದಿಯನ್ನು ಹಿಡಿದುಕೊಟ್ಟವರಿಗೆ 177 ಕೋಟಿ ರೂ. ಬಹುಮಾನವನ್ನು ನೀಡುವುದಾಗಿ ಅಮೆರಿಕ ಈ ಹಿಂದೆಯೇ ಘೋಷಿಸಿತ್ತು. ಆ ಹಣವನ್ನೇ ಬಾಗ್ದಾದಿ ಬಗ್ಗೆ ಸುಳಿವನ್ನು ನೀಡಿದ ವ್ಯಕ್ತಿಗೆ ನೀಡಲಾಗುತ್ತದೆ. ಮಾಹಿತಿ ನೀಡಿದಾತನ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಅಮೆರಿಕ, ಸಿರಿಯಾದಲ್ಲಿದ್ದ ಆತನನ್ನು ಹಾಗೂ ಆತನ ಕುಟುಂಬವನ್ನು ಅಮೆರಿಕಕ್ಕೆ ಸ್ಥಳಾಂತರಿಸಿದೆ ಎಂದು ಹೇಳಲಾಗಿದೆ.

ಯಾರು ಆ ವ್ಯಕ್ತಿ?
ಆ ವ್ಯಕ್ತಿಯ ಗುಟ್ಟನ್ನು ಅಮೆರಿಕ ಸರ್ಕಾರ ಬಹಿರಂಗಗೊಳಿಸಿಲ್ಲ. ಆದರೆ, ತಮ್ಮ ಗುರುತನ್ನು ಗೌಪ್ಯವಾಗಿಡುವ ಷರತ್ತಿನ ಮೇರೆಗೆ ಕೆಲವು ಅಧಿಕಾರಿಗಳು ಹಾಗೂ ಒಂದಿಬ್ಬರು ಮಾಜಿ ಅಧಿಕಾರಿಗಳು ಆತನ ಬಗ್ಗೆ ಪರೋಕ್ಷ ಮಾಹಿತಿ ನೀಡಿದ್ದಾರೆ.

ಆ ವ್ಯಕ್ತಿ ಐಸಿಸ್‌ ಸಂಘಟನೆಯಲ್ಲಿ ಹಿಂದೊಮ್ಮೆ ಸಕ್ರಿಯನಾಗಿದ್ದಾತ. ತನ್ನ ಸಂಬಂಧಿಯೊಬ್ಬನ್ನು ಕೊಂದಿದ್ದಕ್ಕೆ ಐಸಿಸ್‌ ವಿರುದ್ಧ ಆಂತರ್ಯದಲ್ಲೇ ತಿರುಗಿಬಿದ್ದಿದ್ದ. ಅ. 26ರಂದು ಬಾಗ್ದಾದಿ ಹತನಾದ ಬಂಗಲೆಯ ನಿರ್ಮಾಣದ ಮೇಲುಸ್ತುವಾರಿ ವಹಿಸಿಕೊಂಡಿದ್ದವರಲ್ಲಿ ಆತನೂ ಒಬ್ಬ. ಅಷ್ಟೇ ಅಲ್ಲ, ಬಾಗ್ದಾದಿಯ ಪತ್ನಿಯರು, ಮಕ್ಕಳು ಅಸ್ವಸ್ಥಗೊಂಡಾಗ ಅವರಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ. ಬಾಗ್ದಾದಿಯಿದ್ದ ಬಂಗಲೆ ನಿರ್ಮಾಣದ ಮೇಲುಸ್ತುವಾರಿ ವಹಿಸಿದ್ದರಿಂದ ಆತನಿಗೆ ಆ ಬಂಗಲೆಯ ಕೋಣೆ ಕೋಣೆಗಳೂ ಗೊತ್ತಿದ್ದವು. ಆತ ನೀಡಿದ ಮಾಹಿತಿಯಾಧಾರದಲ್ಲಿ ಅಮೆರಿಕ ಸೇನೆಯು ಆ ಬಂಗಲೆಯ ಪೂರ್ಣ ಚಿತ್ರಣ ಪಡೆದಿತ್ತು. ಬಂಗಲೆ ಮೇಲೆ ದಾಳಿ ನಡೆದಾಗ ಆ ವ್ಯಕ್ತಿಯೂ ಸೇನೆಯ ಜತೆಗಿದ್ದ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಈಜಿಪ್ಟ್ ನ ಅತೀ ಪ್ರಾಚೀನ, ಶ್ರೀಮಂತ ದೊರೆ ಚಿತ್ರ ಸಿದ್ಧ!

1

Abu Dhabi: ಅಬುಧಾಬಿಯಲ್ಲಿ ಬಿಯರ್‌ ಅಂಗಡಿ!

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.