ಗೋ ನೀತಿಗೆ ಸಂಪುಟ ಅಸ್ತು , ರೈತರ ಮನೆ ಬಾಗಿಲಿಗೆ ಮೇವು

ವಿದ್ಯಾರ್ಥಿಗಳಿಗೆ 2 ನೇ ಸೆಟ್‌ ಸಮವಸ್ತ್ರಕ್ಕೂ ಒಪ್ಪಿಗೆ ;100 ತಾಲೂಕುಗಳ ಜಲಾನಯನ ಅಭಿವೃದ್ಧಿ ಯೋಜನೆಗೆ ಅನುಮೋದನೆ

Team Udayavani, Nov 1, 2019, 5:47 AM IST

vidhana-soudha-750

ಬೆಂಗಳೂರು: ರಾಜ್ಯದ ಎಲ್ಲ ತಾಲೂಕುಗಳಲ್ಲಿ ಗೋ ಶಾಲೆ ಮತ್ತು ಮೇವು ಬ್ಯಾಂಕ್‌ ಸ್ಥಾಪನೆ ಹಾಗೂ ನಿರ್ವಹಣೆಗಾಗಿ ಪ್ರತ್ಯೇಕ ಗೋ ನೀತಿ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಹೈಕೋರ್ಟ್‌ ಸೂಚನೆ ಮೇರೆಗೆ ನೂತನ ನೀತಿ ಜಾರಿಯಾಗಲಿದ್ದು ರೈತರ ಮನೆ ಬಾಗಿಲಿಗೆ ದಿನಕ್ಕೆ ಕನಿಷ್ಠ 5 ಕೆಜಿಯಂತೆ ನಿಗದಿತ ಪ್ರಮಾಣದ ಮೇವನ್ನು ಕಾರ್ಡ್‌ ಮೂಲಕ ತಲುಪಿಸುವುದು ಇದರ ಉದ್ದೇಶ.

ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗೋಶಾಲೆ ಮತ್ತು ಮೇವು ಬ್ಯಾಂಕ್‌ ಸ್ಥಾಪನೆಯಾದ ಅನಂತರ ಅದರ ನಿರ್ವಹಣೆ ಹೇಗೆ ಮಾಡಬೇಕು, ಯಾರು ಮಾಡಬೇಕು, ಅವರ ಹೊಣೆಗಾರಿಕೆ ಮತ್ತು ಜವಾಬ್ದಾರಿಗಳೇನು ಎಂಬುದನ್ನು ನೀತಿಯು ಒಳಗೊಂಡಿರುತ್ತದೆ ಎಂದು ತಿಳಿಸಿದರು.

2ನೇ ಜತೆ ಸಮವಸ್ತ್ರ
1 ರಿಂದ 8 ನೇ ತರಗತಿವರೆಗೆ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಎರಡನೇ ಜತೆ ಸಮವಸ್ತ್ರ ನೀಡುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ. 37 ಲಕ್ಷ ವಿದ್ಯಾರ್ಥಿಗಳಿಗೆ ತಲಾ 250 ರೂ. ವೆಚ್ಚದಲ್ಲಿ ಸಮವಸ್ತ್ರ ಪೂರೈಕೆಗೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳಿಗೆ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌, ಟೈ, ಬೆಲ್ಟ್ ನೀಡಲು 11.77 ಕೋ. ರೂ.ಗಳನ್ನು ವ್ಯಯಿಸಲು ಹಾಗೂ ಸರಕಾರಿ ಮತ್ತು ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರಗಳ ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳಿಗೆ ಟೂಲ್‌ಕಿಟ್‌ ವಿತರಿಸಲು 7.86 ಕೋ. ರೂ. ಮಂಜೂರಾತಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಜಲಾನಯನ ಅಭಿವೃದ್ಧಿ
ರಾಜ್ಯದ 100 ತಾಲೂಕುಗಳಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ರೂಪಿಸಲು ಸಂಪುಟ ಒಪ್ಪಿಗೆ ನೀಡಿದೆ. ಅಂತರ್ಜಲ ವೃದ್ಧಿ, ಜಲ ಮರುಪೂರಣ, ಅರಣ್ಯ ಬೆಳೆಸುವುದು, ಭೂ ರಹಿತರಿಗೆ ಹಸು, ಕುರಿ, ಕೋಳಿ ವಿತರಣೆ ಈ ಯೋಜನೆ ಒಳಗೊಂಡಿರುತ್ತದೆ ಎಂದು ತಿಳಿಸಿದರು.

ಕರ್ನಾಟಕ ವಸತಿ ಮಂಡಳಿಯ ಭೂ ಸ್ವಾಧೀನ ನೀತಿಗೆ ಕೆಲವು ತಿದ್ದುಪಡಿಗಳನ್ನು ತರಲಾಗಿದ್ದು, ಭೂಮಿ ನೀಡುವವರಿಂದ 50-50, 45-55 ಮತ್ತು 60-40 ಆಧಾರದಲ್ಲಿ ಪಡೆಯುವುದು ಸಹಿತ ಹಲವು ಅಂಶಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.