ಭೈರವನದುರ್ಗದ ಬೆಟ್ಟದ ತುದಿಯಲ್ಲಿ 157 ಅಡಿ ಕನ್ನಡ ಧ್ವಜ


Team Udayavani, Nov 1, 2019, 4:58 PM IST

rn-tdy-2

ಕುದೂರು: ಕನ್ನಡಕ್ಕಾಗಿ ದುಡಿದು ಮಡಿದು ಅಮರರಾದವರನ್ನು ನಾವುಗಳು ಆದರ್ಶವಾಗಿಸಿ ಕೊಳ್ಳಬೇಕು. ನಾಡಿನ ನೆಲ-ಜಲ ಭಾಷೆಯ ಅಭಿಮಾನಕ್ಕೆ ಕೊಂಚವೂ ದಕ್ಕೆಯಾಗದಂತೆ ಸ್ವಾಭಿಮಾನಿ ಬದುಕನ್ನುರೂಢಿಸಿಕೊಳ್ಳ ಬೇಕಿದೆ ಎಂದು ಡಾ.ರಾಜ್‌ಕುಮಾರ್‌ ಅಭಿಮಾನಿ ಸಂಘದ ಅಧ್ಯಕ್ಷ ನಾಗೇಶ್‌ ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಭೈರವನದುರ್ಗದ ಬೆಟ್ಟದ ತುದಿಯ ಮೇಲೆ 157 ಅಡಿ ಅಗಲದ ಭಾವುಟವನ್ನು 20 ಅಡಿ ಎತ್ತರದ ಧ್ವಜಸ್ತಂಭದ ಮೇಲೆ ಆರೋಹಣ ಮಾಡಿ ಮಾತನಾಡಿದರು. ಬೈರವನದುರ್ಗ ಐತಿಹಾಸಿಕ ತಾಣವಾಗಿದೆ. ರಾಜ್ಯೋತ್ಸವ ಎಂದರೆ ಬರೀ ಭಾವುಟ ಹಾರಿಸುವುದು ಮಾತ್ರವಲ್ಲ. ಇಲ್ಲಿನ ನೆಲ-ಜಲ, ಭಾಷೆ, ಸಂಸ್ಕೃತಿ , ಬೆಟ್ಟ -ಗುಡ್ಡಗಳನ್ನು ಕಾಪಾಡಿಕೊಳ್ಳಬೇಕು. ಇದೊಂದು ಪ್ರವಾಸಿ ತಾಣವಾಗಬೇಕು. ಭೈರವನದುರ್ಗ ಕುದೂರು ಗ್ರಾಮದ ಅತಿದೊಡ್ಡ ಸಂಪತ್ತಾಗಿದೆ. ಆದರೆ ಅದರ ಮಹತ್ವ ಗೊತ್ತಿಲ್ಲದೆ ಇಂದು ದುರ್ಗದಲ್ಲಿ ಮರಗಳ ಮಾರಣ ಹೋಮ ನೆಡೆಯುತ್ತಿದೆ. ಹಾಡುಹಗಲೇ ಅಲ್ಲಿನ ಮರಗಳ್ಳತನ ಯಾರ ಭಯವಿಲ್ಲದೆ ನೆಡೆಯುತ್ತಿದೆ. ಇಂತಹ ಬೆಟ್ಟವನ್ನು ಉಳಿಸಿಕೊಳ್ಳಬೇಕು. ಅದಕ್ಕಾಗಿ ಪ್ರಯೋಗಿಕವಾಗಿ ಬೆಟ್ಟದ ತುದಿಯಲ್ಲಿ ಕನ್ನಡದ ಭಾವುಟವನ್ನು ಹಾರಿಸಿ. ದುರ್ಗವನ್ನು ಉಳಿಸಿ ಎಂಬ ಸಂದೇಶವನ್ನು ಜಿಲ್ಲಾ ಆಡಳಿತಕ್ಕೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಸಂಘದ ಸದಸ್ಯ ಜಗದೀಶ್‌ ಮಾತನಾಡಿ. ಕನ್ನಡದ ಕೀರ್ತಿ ಜಗತ್ತಿನ ಎಲ್ಲಾ ಕಡೆಗಳಲ್ಲಿ ಹಬ್ಬಬೇಕು. ಎತ್ತರದಲ್ಲಿ ಧ್ವಜ ಹಾರಿಸಿ ಎತ್ತರದ ಭಾವನೆಗಳನ್ನು ಎದೆಯಲ್ಲಿಟ್ಟುಕೊಂಡು ಕರುನಾಡಿನ ಜನರು ನಮ್ಮವರು ಎಂದು ಇಂದಿನ ತಲೆಮಾರಿನ ಜನರಲ್ಲಿ ಭಾವನೆಗಳನ್ನು ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

ಕರ್ನಾಟಕ ರಾಜ್ಯೋತ್ಸವದ ಹಿಂದಿನ ದಿನ ಬೆಟ್ಟದ ಮೇಲೆ ಹಾಜರಿದ್ದು ಮುಂಜಾನೆಯ ಸೂರ್ಯನ ಕಿರಣಗಳೊಂದಿಗೆ ಕನ್ನಡ ಭಾವುಟ ಕಂಗೊಳಿಸುವ ಕೆಲಸವನ್ನು ಸುಮಾರು 13 ವರ್ಷಗಳಿಂದ ಡಾ.ರಾಜ್‌ ಕುಮಾರ್‌ ಅಭಿಮಾನಿಗಳ ಸಂಘದ ಸದಸ್ಯರುಗಳು ಮಾಡುತ್ತಿರುವುದಕ್ಕೆ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಈ ಭಾವುಟ ಸುತ್ತಮುತ್ತ ಹದಿನೈದು ಕೀಮಿ ದೂರದವರೆಗೂ ಕಾಣಬಹುದು ಎಂದು ಹೇಳಿದರು.

ಸಂಘದ ಸದಸ್ಯರುಗಳಾದ ಬೆಳ್ಳಿ ಕೃಷ್ಣ, ಜಗದೀಶ್‌, ಕೆಂಪ, ಸುರೇಶ್‌, ರೋಹಿತ್‌ , ಸಿದ್ದರಾಜು, ಚಂದ್ರುಶೇಖರ್‌, ಮಹೇಶ್‌ ಬಾಬು, ಲೋಕೇಶ್‌, ದೀಲೀಪ್‌, ಶಶಿಕುಮಾರ್‌, ದೇವರಾಜ, ಲಕ್ಷ್ಮೀಕಾಂತ, ಮಂಜುನಾಥ, ಮೂರ್ತಪ್ಪ ಇತರರು ಇದ್ದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.