ಗ್ರಾಮದ ರಸ್ತೆ ಸರಿಪಡಿಸಿ
Team Udayavani, Nov 1, 2019, 5:52 PM IST
ತುಮಕೂರು: ತುರುವೇಕೆರೆ ತಾಲೂಕಿನ ದಬ್ಬೆಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಕಲ್ ಗ್ರಾಮದಲ್ಲಿ ಮಳೆಯಿಂದ ರಸ್ತೆ ಕೆಸರುಮಯವಾಗಿದ್ದು, ಓಡಾಡಲು ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆ ಅಭಿವೃದ್ಧಿ ಕಂಡು ಹಲವು ವರ್ಷಗಳೇ ಕಳೆದಿದ್ದು, ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚುನಾವಣೆ ವೇಳೆ ರಸ್ತೆ ಆಶ್ವಾಸನೆ ನೀಡುವ ರಾಜಕಾರಣಿಗಳು ಬಳಿಕ ಇತ್ತ ತಲೆ ಹಾಕುವುದಿಲ್ಲ. ರಸ್ತೆ ಸಮಸ್ಯೆಯಿಂದ ಬೇಸತ್ತು ಹಲವು ಬಾರಿ ಹುಲಿಕಲ್ ಗ್ರಾಮ ಪಂಚಾಯಿತಿಗೆ ಮನವಿ ನೀಡಿದರೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಲಿ ಸದಸ್ಯರಾಗಲಿ ಯಾವುದೇ ಕ್ರಮಗಳು ಕೈಗೊಂಡಿಲ್ಲ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ರಸ್ತೆ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಹುಲಿಕಲ್ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ್ ಮಾತನಾಡಿ, ಹುಲಿಕಲ್ ಗ್ರಾಮದ ರಸ್ತೆಗೆ ಹಿಂದೆ ಕಾಂಕ್ರಿಟ್ ಹಾಕಿ ಅಭಿವೃದ್ಧಿಪಡಿಸಲಾಗಿತ್ತು. ಗ್ರಾಮದ ಕೆಂಪಮ್ಮ ದೇವಿ ರಥ ಈ ರಸ್ತೆಯಲ್ಲಿ ಸಾಗುವುದರಿಂದ ರಸ್ತೆ ಬೇಗನೇ ಹಾಳಾಗುತ್ತದೆ. ರಸ್ತೆ ಹಾಳಾಗದಂತೆ ಯಾವ ರೀತಿಯಲ್ಲಿ ಅಭಿವೃದ್ಧಿಪಡಿಸಬಹುದು ಎಂಬುದನ್ನು ಗ್ರಾಮದ ಮುಖಂಡರ ಜೊತೆ ಚರ್ಚಿಸಲಾಗುವುದು. ಅಲ್ಲದೇ ಪಿಡಿಒ, ಶಾಸಕರ ಗಮನಕ್ಕೂ ತಂದು ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup: ಇಂದು ಭಾರತ ತಂಡ ಪ್ರಕಟ?
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್