ದೀಪಾವಳಿ ಕಳೆದರೂ ಅತಿಥಿ ಶಿಕ್ಷಕರಿಗಿಲ್ಲ ವೇತನ

ಜೂನ್‌ನಲ್ಲಿ ನೇಮಕ; ಬಳಿಕ ಶಿಕ್ಷಣ ಇಲಾಖೆ ಸಂಬಳ ನೀಡಿಲ್ಲ

Team Udayavani, Nov 2, 2019, 5:27 AM IST

nov-40

ಸಾಂದರ್ಭಿಕ ಚಿತ್ರ

ಸುಬ್ರಹ್ಮಣ್ಯ: ರಾಜ್ಯದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಂಸ್ಥೆಗಳಲ್ಲಿ ಕರ್ತವ್ಯ ನಿರತರಾಗಿರುವ ಸುಮಾರು 25 ಸಾವಿರ ಅತಿಥಿ ಶಿಕ್ಷಕರ ಪಾಲಿಗೆ ಈ ಬಾರಿ ದಸರಾ ಬಿಡಿ, ದೀಪಾವಳಿ ಹಬ್ಬದ ಸಂಭ್ರಮವೂ ಇರಲಿಲ್ಲ. ಇವರಿಗೆ ಐದು ತಿಂಗಳಿಂದ ಸರಕಾರ ಮಾಸಿಕ ಗೌರವಧನ ವೇತನ ನೀಡದಿರುವುದು ಇದಕ್ಕೆ ಕಾರಣ.

ಅತಿಥಿ ಶಿಕ್ಷಕರ ನೇಮಕ
2019-20ನೇ ಸಾಲಿಗೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಸರಕಾರವು ಆ ಜೂನ್‌ ತಿಂಗಳಲ್ಲಿ ನೇಮಸಿಕೊಂಡಿತ್ತು. ರಾಜ್ಯದಲ್ಲಿ ಸುಮಾರು 25 ಸಾವಿರ ಅತಿಥಿ ಶಿಕ್ಷಕರಿದ್ದು, ದ.ಕ. ಜಿಲ್ಲೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ 633 ಮತ್ತು ಪ್ರೌಡಶಾಲೆಯಲ್ಲಿ 111 ಮಂದಿಯನ್ನು ನೇಮಿಸಿಕೊಳ್ಳಲಾಗಿದೆ. ಗೌರವ ಧನವಾಗಿ ಪ್ರಾಥಮಿಕ ಶಾಲೆಗೆ ಮಾಸಿಕ 10,500 ಮತ್ತು ಪ್ರೌಢಶಾಲೆಗೆ 12,500 ರೂ. ನಿಗದಿಪಡಿಸಲಾಗಿತ್ತು. ಹಿಂದಿನ ವರ್ಷ 7,500 ರೂ. ನೀಡಲಾಗಿತ್ತು.

ತಾರತಮ್ಯ ಧೋರಣೆ
ಸರಕಾರಿ ಶಿಕ್ಷಕರಿಗೆ ಪ್ರತಿ ತಿಂಗಳ ಒಂದರಂದು ವೇತನ ನೀಡುವ ಸರಕಾರ ಅತಿಥಿ ಶಿಕ್ಷಕರತ್ತ ಮಾತ್ರ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಸರಕಾರಿ ಶಿಕ್ಷಕರಿಗಿಂತ ಕಡಿಮೆ ವೇತನ ಪಡೆಯು ತ್ತಿದ್ದರೂ ಜೂನ್‌ ತಿಂಗಳಿಂದ ನಮಗೆ ವೇತನ ನೀಡಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

ತಾಂತ್ರಿಕ ತೊಂದರೆ
ತಾಂತ್ರಿಕ ತೊಂದರೆಯಿಂದ ವೇತನ ವಿಳಂಬವಾಗಿದೆ ಎನ್ನುವುದು ಇಲಾಖೆ ನೀಡುವ ಸಬೂಬು. ಆದರೆ ನೈಜ ಕಾರಣ ಆರ್ಥಿಕ ಮುಗ್ಗಟ್ಟು ಕಾರಣ ಎನ್ನಲಾಗುತ್ತಿದೆ. ಇಲಾಖೆ ಅಧಿಕಾರಿಗಳ ಬಳಿ ವಿಚಾರಿಸಿದರೆ ವೇತನ ಶೀಘ್ರ ಬರಲಿದೆ ಎನ್ನುತ್ತಾರೆ. ಬಳ್ಳಾರಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ವರ್ಷದ ವೇತನವೇ ಇನ್ನೂ ಪಾವತಿ ಆಗಿಲ್ಲ.

ದಿನಗೂಲಿಗಿಂತ ಕಳಪೆ
ಸರಕಾರಿ ರಜೆ ವೇತನದಲ್ಲಿ ಕಡಿತ ಮಾತ್ರವಲ್ಲದೆ ದಸರಾ ರಜೆಯಲ್ಲಿ 12 ದಿನ ಮಾತ್ರ ಗಣನೆಗೆ ತೆಗೆದು ಕೊಳ್ಳಲಾಗುತ್ತಿದೆ. ಮಾಸಿಕ 1ರಂತೆ ವಾರ್ಷಿಕ ಗಳಿಕೆ ರಜೆ ನೀಡಲಾಗುತ್ತಿದೆ. ಇದರಿಂದ ಮಹಿಳಾ ಶಿಕ್ಷಕಿಯರು ಹೆಚ್ಚು ತೊಂದರೆಗೆ ಒಳಗಾಗುತ್ತಿದ್ದಾರೆ. ನಮ್ಮನ್ನು ದಿನಗೂಲಿಗಳಿಗಿಂತಲೂ ಕಡೆಯಾಗಿ ದುಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಅತಿಥಿ ಶಿಕ್ಷಕಿಯೊಬ್ಬರ ಅಳಲು.

ಅತಿಥಿ ಶಿಕ್ಷಕರ ವೇತನ ವಿಳಂಬಕ್ಕೆ ಕಾರಣ ಕುರಿತು ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು
-ಸುರೇಶ್‌ ಕುಮಾರ್‌
ಶಿಕ್ಷಣ ಸಚಿವರು

ಅತಿಥಿ ಶಿಕ್ಷಕರ ನೇಮಕ ಮತ್ತು ವೇತನ ಇತ್ಯಾದಿ ಜಿಲ್ಲೆಗೆ ಒಂದರಂತೆ ನಿಯಮವಿದೆ. ಸೇವಾಭದ್ರತೆ, ಸಾಮಾಜಿಕ ಭದ್ರತೆ ಯಾವುದೂ ಇಲ್ಲ. ಅತಿಥಿ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಒಗ್ಗಟ್ಟಿನ ಕೊರತೆ ಕೂಡ ಸವಲತ್ತು ಪಡೆಯುವಲ್ಲಿ ವಿಫಲವಾಗಲು ಕಾರಣ.
– ರಾಜೇಶ್‌ ಎಂ.ಡಿ. ಮೈಸೂರು
ಪ್ರಧಾನ ಕಾರ್ಯದರ್ಶಿ, ರಾಜ್ಯ ಪ್ರಾ., ಪ್ರೌ. ಅತಿಥಿ ಶಿಕ್ಷಕರ ಸಂಘ, ಬೆಂಗಳೂರು

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.