ಟಿ20: ತವರಲ್ಲಿ ನ್ಯೂಜಿಲ್ಯಾಂಡ್‌ ಸೋಲಿನ ಆರಂಭ


Team Udayavani, Nov 2, 2019, 12:49 AM IST

AP11_1_2019_000120A

ಕ್ರೈಸ್ಟ್‌ಚರ್ಚ್‌: ವನ್‌ಡೌನ್‌ ಬ್ಯಾಟ್ಸ್‌ ಮನ್‌ ಜೇಮ್ಸ… ವಿನ್ಸ್‌ ಬಾರಿಸಿದ ಚೊಚ್ಚಲ ಅರ್ಧ ಶತಕದ ನೆರವಿನಿಂದ ಪ್ರವಾಸಿ ಇಂಗ್ಲೆಂಡ್‌ ತಂಡ ಆತಿಥೇಯ ನ್ಯೂಜಿಲ್ಯಾಂಡ್‌ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್‌ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಜುಲೈ ತಿಂಗಳಲ್ಲಿ ನಡೆದ ಏಕದಿನ ವಿಶ್ವಕಪ್‌ ಫೈನಲ್‌ ಬಳಿಕ ಇತ್ತಂಡಗಳ ನಡುವಿನ ಮೊದಲ ಮುಖಾಮುಖೀ ಇದಾಗಿತ್ತು. ಟಾಸ್‌ ಸೋತು ಮೊದಲು ಬ್ಯಾಟಿಂಗಿಗೆ ಇಳಿಸಲ್ಪಟ್ಟ ನ್ಯೂಜಿಲ್ಯಾಂಡ್‌ 20 ಓವರ್‌ಗಳಲ್ಲಿ 5 ನಷ್ಟಕ್ಕೆ 153 ರನ್‌ ಗಳಿಸಿತು. ಇಂಗ್ಲೆಂಡ್‌ 18.3 ಓವರ್‌ಗಳಲ್ಲಿ 3 ವಿಕೆಟಿಗೆ 154 ರನ್‌ ಬಾರಿಸಿ ಗೆದ್ದು ಬಂತು.

ಆರಂಭಿಕರಾದ ಮಾರ್ಟಿನ್‌ ಗಪ್ಟಿಲ್‌ (2)- ಕಾಲಿನ್‌ ಮನ್ರೊ (21) ಬೇಗನೆ ಔಟಾದದ್ದು ಕಿವೀಸ್‌ಗೆ ಆಘಾತವಿಕ್ಕಿತು. 3ನೇ ವಿಕೆಟಿಗೆ ಜತೆಯಾದ ವಿಕೆಟ್‌ ಕೀಪರ್‌ ಟಿಮ್‌ ಸೀಫ‌ರ್ಟ್‌ (32) ಮತ್ತು ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌(19) ಸ್ಫೋಟಕ ಬ್ಯಾಟಿಂಗ್‌ ನಡೆಸುವ ಸೂಚನೆ ನೀಡಿದರು. 33 ರನ್‌ ಒಟ್ಟುಗೂಡುವಷ್ಟರಲ್ಲಿ ಆದಿಲ್‌ ರಶೀದ್‌ ಈ ಜೋಡಿಯನ್ನು ಬೇರ್ಪಡಿಸಿದರು. ಕೊನೆಯ ಹಂತದಲ್ಲಿ ರಾಸ್‌ ಟೇಲರ್‌ (44) ಮತ್ತು ಡ್ಯಾರಿಲ್‌ ಮಿಚೆಲ್‌ (ಅಜೇಯ 30) ಬಿರುಸಿನ ಆಟವಾಡಿದ್ದ ರಿಂದ ತಂಡದ ಮೊತ್ತ 150ರ ಗಡಿ ದಾಟಿತು.

35 ಎಸೆತಗಳನ್ನು ಎದುರಿಸಿದ ಟೇಲರ್‌ 3 ಬೌಂಡರಿ, ಒಂದು ಸಿಕ್ಸರ್‌ ನೆರವಿನಿಂದ ಸರ್ವಾಧಿಕ 44 ರನ್‌ ಹೊಡೆದರು. ಮಿಚೆಲ್‌ ಕೇವಲ 17 ಎಸೆತ ಗಳಲ್ಲಿ 30 ರನ್‌ ಬಾರಿಸಿ ಮಿಂಚಿದರು. ಇಂಗ್ಲೆಂಡ್‌ ಪರ ಕ್ರಿಸ್‌ ಜೋರ್ಡನ್‌ 2 ವಿಕೆಟ್‌ ಕಿತ್ತರು.

ವಿನ್ಸ್‌ ಮಿಂಚಿನ ಬ್ಯಾಟಿಂಗ್‌
ಚೇಸಿಂಗ್‌ ವೇಳೆ ಇಂಗ್ಲೆಂಡ್‌ ಮಾಲನ್‌ (11) ಅವರನ್ನು ಅಗ್ಗಕ್ಕೆ ಕಳೆದು ಕೊಂಡಿತು. ಆದರೆ ಮತ್ತೂಬ್ಬ ಆರಂಭ ಕಾರ ಜಾನಿ ಬೇರ್‌ಸ್ಟೊ (35) ಮತ್ತು ಡೇವಿಡ್‌ ವಿನ್ಸ್‌ ಕಿವೀಸ್‌ ದಾಳಿಗೆ ತಕ್ಕ ಉತ್ತರ ನೀಡಿದರು. ಬೇರ್‌ಸ್ಟೊ 28 ಎಸೆತಗಳಿಂದ 35 ರನ್‌ ಹೊಡೆದರೆ (5 ಬೌಂಡರಿ, 1 ಸಿಕ್ಸರ್‌), ವಿನ್ಸ್‌ ಚೊಚ್ಚಲ ಅರ್ಧಶತಕ ಸಿಡಿಸಿ ಮೆರೆದರು. ವಿನ್ಸ್‌ ಗಳಿಕೆ 38 ಎಸೆತಗಳಿಂದ 59 ರನ್‌. ಸಿಡಿಸಿದ್ದು 7 ಬೌಂಡರಿ ಮತ್ತು 2 ಸಿಕ್ಸರ್‌.

ಇಯಾನ್‌ಮಾರ್ಗನ್‌ ಅಜೇಯ 34 ರನ್‌ ಬಾರಿಸಿ ನಾಯಕನ ಆಟವಾಡಿ ದರು. 21 ಎಸೆತಗಳ ಈ ಇನ್ನಿಂಗ್ಸ್‌ ನಲ್ಲಿ 4 ಬೌಂಡರಿ, ಒಂದು ಸಿಕ್ಸರ್‌ ಒಳಗೊಂಡಿತ್ತು. ಉರುಳಿದ ಮೂರೂ ವಿಕೆಟ್‌ ಮಿಚೆಲ್‌ ಸ್ಯಾಂಟ್ನರ್‌ ಪಾಲಾಯಿತು. ಆದರೆ ಟಿಮ್‌ ಸೌಥಿ, ಐಶ್‌ ಸೋಧಿ ದುಬಾರಿಯಾದರು.2ನೇ ಪಂದ್ಯ ರವಿವಾರ ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌
ಕಿವೀಸ್‌-20 ಓವರ್‌ಗಳಲ್ಲಿ 5 ವಿಕೆಟಿಗೆ 153 (ಟೇಲರ್‌ 44, ಮಿಚೆಲ್‌ ಔಟಾಗದೆ 30, ಡಿ ಗ್ರ್ಯಾಂಡ್‌ಹೋಮ್‌ 32, ಜೋರ್ಡನ್‌ 28ಕ್ಕೆ 2). ಇಂಗ್ಲೆಂಡ್‌- 18.3 ಓವರ್‌ಗಳಲ್ಲಿ 3 ವಿಕೆಟಿಗೆ 154 (ವಿನ್ಸ್‌ 59, ಬೇರ್‌ಸ್ಟೊ 35, ಮಾರ್ಗನ್‌ ಔಟಾಗದೆ 34, ಸ್ಯಾಂಟ್ನರ್‌ 23ಕ್ಕೆ 3). ಪಂದ್ಯಶ್ರೇಷ್ಠ: ಜೇಮ್ಸ್‌ ವಿನ್ಸ್‌.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.