ಅತಂತ್ರ ಕಟ್ಟಡದಲ್ಲಿ ಅನಿವಾರ್ಯ ಓದು!


Team Udayavani, Nov 2, 2019, 10:26 AM IST

bk-tdy-1

ಬೀಳಗಿ: ಪಟ್ಟಣದ ಗಾಂಧಿ ವೃತ್ತದ ಬಳಿಯಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಅತಂತ್ರ ಕಟ್ಟಡದಲ್ಲಿ ಅನಿವಾರ್ಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸುವುದು ಅಗತ್ಯವಿದೆ.

ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿ 10-09-1981ರಲ್ಲಿ ಆರಂಭವಾದ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ 38 ವರ್ಷಗಳಸು ಧೀರ್ಘ‌ ಇತಿಹಾಸವಿದೆ. ಪಟ್ಟಣದ ಗಾಂಧಿ  ವೃತ್ತದ ಬಳಿ ಸ್ವಂತ ಕಟ್ಟಡಕ್ಕೆ ಸ್ಥಳಂತರಗೊಂಡು 20 ವರ್ಷ ಗತಿಸಿದೆ. ಆಗಿನ ಜನಸಂಖ್ಯೆಗೆ ಅನುಗುಣವಾಗಿ ನಿರ್ಮಿಸಲಾದ ಗ್ರಂಥಾಲಯ ಕಟ್ಟಡ, ಪ್ರಸ್ತುತ ಜನಸಂಖ್ಯೆಗೆ ತುಂಬಾ ಚಿಕ್ಕದಾಗಿದೆ.

ಅಲ್ಲದೆ, ಕಟ್ಟಡವೂ ಶಿಥಿಲಾವಸ್ಥೆ ಕಂಡಿದೆ. ಗ್ರಂಥಾಲಯದ ಮೇಲ್ಛಾವಣಿ ಬಿಚ್ಚಿ ಬೀಳುತ್ತಿದೆ. ಮಳೆಗಾಲದಲ್ಲಿ ಸೋರುತ್ತದೆ. ಕಿಟಕಿಗಳ ಗ್ಲಾಸ್‌ ಒಡೆದು ಹೋಗಿ ಅದೆಷ್ಟೋ ವರ್ಷಗಳು ಗತಿಸಿವೆ. ಗ್ರಂಥಾಲಯದ ಕಟ್ಟಡ ಸುತ್ತ ಮುಳ್ಳುಕಂಟಿ, ಕಸ, ಚರಂಡಿ ನೀರು ತುಂಬಿಕೊಂಡು ಗ್ರಂಥಾಲಯದ ಸುತ್ತಲಿನ ಪರಿಸರ ಅವ್ಯಸ್ಥೆಯ ಆಗರವಾಗಿದೆ. ಪರಿಣಾಮ, ಸೊಳ್ಳೆಗಳ ಕಾಟ ಹಾಗೂ ಪರಿಸರ ಅಶುಚಿತ್ವದಿಂದಾಗಿ ಓದುಗರು ಗ್ರಂಥಾಲಯದಲ್ಲಿ ನೆಮ್ಮದಿಯಿಂದ ಪುಸ್ತಕಗಳ ಪುಟ ತಿರುಗಿಸದ ಸ್ಥಿತಿ ನಿರ್ಮಾಣವಾಗಿದೆ.

ಸ್ಪರ್ಧಾತ್ಮಕ ಪುಸ್ತಕಗಳ ಕೊರತೆ: ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸ್ಥಳವಕಾಶವಿಲ್ಲದಂತಾಗಿದೆ. ಇರುವ ಚಿಕ್ಕ ಜಾಗದಲ್ಲಿಯೇ ಪುಸ್ತಕಗಳನ್ನು ಇಡುವುದರ ಜತೆಗೆ ಓದುಗರಿಗೆ ಟೇಬಲ್‌ ಹಾಗೂ ಆಸನ ವ್ಯವಸ್ಥೆ ಮಾಡಲಾಗಿದೆ. ವಿಶಾಲ ಜಾಗೆಯಿಲ್ಲದ ಪರಿಣಾಮ, ಪುಸ್ತಕಗಳನ್ನು ಪೇರಿಸಿಡಲಾಗದೆ ಸಾವಿರಾರು ಪುಸ್ತಕಗಳನ್ನು ಗಂಟುಕಟ್ಟಿ ಕೊಠಡಿಯೊಂದರಲ್ಲಿ ತುಂಬಲಾಗಿದೆ. ಇದರಿಂದ ಹಲವಾರು ಮಹತ್ವದ ಪುಸ್ತಕಗಳು ಓದುಗರ ಕೈ ಸೇರದಂತಾಗಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪುಸ್ತಕಗಳ ಕೊರತೆ ಇಲ್ಲಿ ಎದ್ದು ಕಾಣುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪುಸ್ತಕಗಳ ಪೂರೈಕೆ ಆಗಬೇಕಿರುವುದು ಅಗತ್ಯವಿದೆ ಎನ್ನುವುದು ಹಲವಾರು ವಿದ್ಯಾರ್ಥಿಗಳ ಒತ್ತಾಯವಾಗಿದೆ.

ಮೂಲ ಸೌಕರ್ಯವಿಲ್ಲ: ಗ್ರಂಥಾಲಯದಲ್ಲಿ ಸುಮಾರು 20 ಸಾವಿರದಷ್ಟು ಪುಸ್ತಕಗಳಿವೆ. ಹಲವಾರು ಮ್ಯಾಗಝಿನ್‌ ಮತ್ತು ಎಲ್ಲ ವೃತ್ತ ಪತ್ರಿಕೆಗಳು ಬರುತ್ತವೆ. ಆದರೆ, ಕುಳಿತು ಓದಲು ವಿಫುಲ ಸ್ಥಳಾವಕಾಶವಿಲ್ಲದ ಕಾರಣ, ಗ್ರಂಥಾಲಯದ ಕಡೆಗೆ ಮುಖ ಮಾಡುವವರ ಸಂಖ್ಯೆ ತೀರಾ ಕಡಿಮೆಯಿದೆ. ನಿತ್ಯ, ಸುಮಾರು 20 ಓದುಗರ ಸಂಖ್ಯೆ ದಾಟಲಾರದು. ಬೆಳಗ್ಗೆ 8.30ರಿಂದ 11 ಹಾಗೂ ಸಂಜೆ 4ರಿಂದ ರಾತ್ರಿ 8ರ ವರೆಗೆ ಮಾತ್ರ ಗ್ರಂಥಾಲಯ ತೆರೆದಿರುತ್ತದೆ. ಬೆಳಗ್ಗೆ 8.30ರಿಂದ ಸಂಜೆ 8ರ ವರೆಗೆ ನಿರಂತರ ಗ್ರಂಥಾಲಯ ಕಾರ್ಯನಿರ್ವಹಿಸಬೇಕು. ಅದಕ್ಕೆ ಬೇಕಾದ ಎಲ್ಲ ಮೂಲ ಸೌಕರ್ಯ ಒದಗಿಸಬೇಕೆನ್ನುವುದು ಸ್ಥಳೀಯ ನಾಗರಿಕರ ಒತ್ತಾಯವಾಗಿದೆ. ಅಲ್ಲದೆ, ಇಲ್ಲಿ ಕುಡಿವ ನೀರಿನ ವ್ಯವಸ್ಥೆಯೇ ಇಲ್ಲ. ಶೌಚಾಲಯವಿಲ್ಲ ಹಾಗೂ ಸಿಬ್ಬಂದಿ ಕೊರತೆಯಿದ್ದು, ಈ ಎಲ್ಲ ಸೌಕರ್ಯ ಕಲ್ಪಿಸುವ ಅಗತ್ಯತೆ ಬಹಳಷ್ಟಿದೆ.

ಪಪಂ ಸೆಸ್‌ ಮರೀಚಿಕೆ: ಪಟ್ಟಣ 17,792 ಜನಸಂಖ್ಯೆ ಹೊಂದಿದೆ. ಜನರಿಂದ ಪಪಂ ತೆರಿಗೆ ರೂಪದಲ್ಲಿ ವಸೂಲಿ ಮಾಡುವ ಹಣದಲ್ಲಿ ಗ್ರಂಥಾಲಯ ಸೆಸ್‌ ಶೇ.6ರಷ್ಟಿದೆ. ಪ್ರತಿವರ್ಷವೂ ಗ್ರಂಥಾಲಯ ಸೆಸ್‌ 1.50 ಲಕ್ಷಕ್ಕೂ ಹೆಚ್ಚು ಪಪಂಗೆ ಸಂದಾಯವಾಗುತ್ತದೆ. ಆದರೆ, ಪಪಂನವರು ಗ್ರಂಥಾಲಯಕ್ಕೆ ತಲುಪಿಸಬೇಕಾದ ಸೆಸ್‌ ಹಣ ಸರಿಯಾಗಿ ತಲುಪಿಸುತ್ತಿಲ್ಲ. ಗ್ರಂಥಾಲಯ ಸೆಸ್‌ ಹಣ ಪಪಂ ಸಕಾಲಕ್ಕೆ ಸಂದಾಯ ಮಾಡಿದರೆ, ಗ್ರಂಥಾಲಯದ ನಿರೀಕ್ಷಿತ ಅಭಿವೃದ್ಧಿ ಕಾಣಲು ಸಾಧ್ಯವಿದೆ.

ಗ್ರಂಥಾಲಯದಲ್ಲಿ ತುಂಬಾ ಸ್ಥಳ ಅಭಾವವಿದೆ. ಪುಸ್ತಕಗಳನ್ನಿಡಲೂ ಜಾಗವಿಲ್ಲ. ಎಲ್ಲ ಪುಸ್ತಕಗಳನ್ನಿಟ್ಟರೆ ಓದುಗರಿಗೆ ಕೂಡಿಸಲು ಜಾಗ ಸಾಲದು. ಸ್ಪರ್ಧಾತ್ಮಕ ಪುಸ್ತಕ ಕೊರತೆಯಿದೆ. ಸುಸಜ್ಜಿತ ಕಟ್ಟಡ ನಿರ್ಮಾಣ ಶೀಘ್ರವಾಗಬೇಕಿದೆ. ಇ-ಗ್ರಂಥಾಲಯ ಮಾಡಲು ಸಿದ್ಧತೆ ನಡೆದಿದೆ. ಕಾರಣ, ಮೊದಲು ಸುಸಜ್ಜಿತ ಕಟ್ಟಡ ಮಾಡಬೇಕಿರುವುದು ಹಾಗೂ ಸಿಬ್ಬಂದಿ ಒದಗಿಸುವುದು ಅವಶ್ಯವಿದೆ. ವೈ.ಎಂ. ತಳವಾರ, ಗ್ರಂಥಪಾಲಕ

 

-ರವೀಂದ್ರ ಕಣವಿ

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.