ಶಾಸಕ ಶಿವನಗೌಡ ನಾಯಕ ವಿರುದ್ಧ ಹರಿಹಾಯ್ದು ಮಾವ ರಾಜಶೇಖರ ನಾಯಕ
Team Udayavani, Nov 2, 2019, 11:41 AM IST
ರಾಯಚೂರು: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಬಳ್ಳಾರಿ ಗಣಿಧಣಿಗಳ ರೀತಿ ದರ್ಪ ತೋರುತ್ತಿದ್ದಾರೆ ಎಂದು ಆರ್ ಡಿಸಿಸಿ ಮಾಜಿ ಅಧ್ಯಕ್ಷ ರಾಜಶೇಖರ ನಾಯಕ ಟೀಕಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾಲಹಳ್ಳಿಯಿಂದ ಮುಷ್ಟೂರು ರಸ್ತೆ ಕಾಮಗಾರಿ ನನೆಗುದಿದೆ ಬಿದ್ದಿದೆ. ಇದನ್ನು ಪ್ರಶ್ನಿಸಿ ಶಾಂತಿಯುತವಾಗಿ ಪಾದಯಾತ್ರೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸುವ ಮೂಲಕ ಪ್ರಶ್ನಿಸುವ ಹಕ್ಕು ದಮನ ಮಾಡಿದ್ದಾರೆ. ನಾಲ್ಕು ಬಾರಿ ಶಾಸಕರಾದ ಶಿವನಗೌಡರಿಂದ ಕ್ಷೇತ್ರದ ಅಭಿವೃದ್ಧಿ ಆಗಿಲ್ಲ. ಗುತ್ತಿಗೆದಾರರಿಗೆ ಅನಗತ್ಯ ಕಿರುಕುಳ ನೀಡಿದ ಕಾರಣ ಅವರು ಕಾಮಗಾರಿ ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ ಎಂದು ದೂರಿದರು.
ಶಾಸಕರು ಗುತ್ತಿಗೆದಾರರಂತೆ, ಮದ್ಯ ದೊರೆಗಳಂತೆ, ಇಸ್ಪೀಟ್ ದಂಧೆ ನಡೆಸುವ ಮಧ್ಯವರ್ತಿಗಳಂತಾಗಿದ್ದಾರೆ. ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ದೂರಿದರು.
ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯನ್ನೇ ಈಡೇರಿಸಿಲ್ಲ. ಅದನ್ನು ಕೇಳಿದ್ದಕ್ಕೆ ಇಂಥ ಹೋರಾಟಕ್ಕೆ ಮುಂದಾಗಿದ್ದಾರೆ. ಶೀಘ್ರದಲ್ಲಿ ರಸ್ತೆ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳದಿದ್ದಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್