450 ಮೀ. ಉದ್ದದ ಕನ್ನಡ ಧ್ವಜ ಮೆರವಣಿಗೆ
Team Udayavani, Nov 2, 2019, 12:32 PM IST
ಶಿರಸಿ: ಕನ್ನಡ ರಾಜ್ಯೋತ್ಸವವನ್ನು ನಗರದಲ್ಲಿ ಕನ್ನಡಾಂಬೆ, ವಿವಿಧ ಮಕ್ಕಳ ಸ್ಥಬ್ಧ ಚಿತ್ರಗಳು, 450 ಮೀಟರ್ ಉದ್ದದ ಕನ್ನಡ ಧ್ವಜದ ಮೆರವಣಿಗೆ, ಕನ್ನಡದ ಜಾಗೃತಿ ಘೋಷಣೆಗಳ ಮೂಲಕ ಆಚರಿಸಲಾಯಿತು.
ಮೆರವಣಿಗೆಗೆ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ ಚಾಲನೆ ನೀಡಿದರು. 15 ಸೇವಾದಳ ತಂಡ, 10 ಸ್ಕೌಟ್ಸ್ ಮತ್ತು ಗೈಡ್ಸ್ ತಂಡ ಪಾಲ್ಗೊಂಡಿದ್ದವು. ರೆಡ್ ಆಂಟ್ ಸಂಘಟನೆ ಕನ್ನಡ ಧ್ವಜ ಎಲ್ಲರ ಗಮನ ಸೆಳೆಯಿತು.
ನಂತರ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮಕ್ಕೆ ಸಹಾಯಕ ಆಯುಕ್ತ ಡಾ ಈಶ್ವರ ಚಾಲನೆ ನೀಡಿ, ಆಲೂರ ವೆಂಕಟರಾವ್ 1905 ರಲ್ಲಿ ಕಂಡ ಕರ್ನಾಟಕ ಏಕೀಕರಣದ ಕನಸು 1956 ರಲ್ಲಿ ನನಸಾಯಿತು. 1973 ರಲ್ಲಿ ಕರ್ನಾಟಕ ಎಂದು ನಾಮಕರಣಗೊಂಡಿತು. ಕನ್ನಡದ ನೆಲೆಯನ್ನು ದೃಢಪಡಿಸಬೇಕು. ಕನ್ನಡ ಶಾಲೆಯಲ್ಲಿ ಓದಿದವರೇ ಅತ್ಯುನ್ನತ ಹುದ್ದೆಯಲ್ಲಿದ್ದಾರೆ. ಕನ್ನಡ ಶಾಲೆಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕು ಎಂದರು. ಜಿಪಂ ಸದಸ್ಯರಾದ ಬಸವರಾಜ ದೊಡ್ಮನಿ, ಉಷಾ ಹೆಗಡೆ ಕನ್ನಡಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಮಾತೃಭಾಷೆಗೆ ಮಹತ್ವ ನೀಡಬೇಕು ಎಂದು ಆಶಿಸಿದರು.
ತಾಪಂ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯೆ ವೀಣಾ ಶೆಟ್ಟಿ, ಕಸಾಪ ಮಹಾದೇವ ಚಲವಾದಿ, ಬಿಇಒ ಸದಾನಂದ ಸ್ವಾಮಿ, ಜಿಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಮಚಂದ್ರ ಗಾಂವಕರ್, ತಾಪಂ ಇಒ ಎಫ್.ಜಿ.ಚಿನ್ನಣ್ಣನವರ್ ಉಪಸ್ಥಿತರಿದ್ದರು. ತಹಶೀಲ್ದಾರ ಎಂ.ಆರ್. ಕುಲಕರ್ಣಿ ಸ್ವಾಗತಿಸಿದರು. ವಸಂತ ಭಂಡಾರಿ ನಿರ್ವಹಿಸಿದರು. ರೂಪಕಗಳಲ್ಲಿ ಪಾಲ್ಗೊಂಡ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ