ಎಲ್ಲ ಅನರ್ಹ ಶಾಸಕರಿಗೂ ಬಿಜೆಪಿ ಟಿಕೆಟ್ ಖಚಿತ : ರಮೇಶ ಜಾರಕಿಹೊಳಿ
Team Udayavani, Nov 2, 2019, 5:17 PM IST
ಬೆಳಗಾವಿ: ಉಪ ಚುನಾವಣೆಯಲ್ಲಿ ಎಲ್ಲ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗುವದು ಖಚಿತ ಎಂದು ಗೋಕಾಕದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅಥಣಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿಜೆಪಿ ಸರಕಾರ ರಚನೆಯಾಗಲಿ ಎಂದು ನಾವು ರಾಜೀನಾಮೆ ನೀಡಿರಲಿಲ್ಲ. ದೋಸ್ತಿ ಸರಕಾರದ ನಿಲುವು ಸರಿ ಇರಲಿಲ್ಲ ಎಂಬ ಕಾರಣಕ್ಕಾಗಿ ನಾವು ಸರಕಾರ ಹಾಗೂ ಪಕ್ಷದಿಂದ ಹೊರಗೆ ಬಂದಿದ್ದೇವೆ ಎಂದರು. ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧ ಇಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಸವದಿ ಅವರು ದೊಡ್ಡ ಮನುಷ್ಯ. ನಮಗೂ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ತಿರುಗೇಟು ನೀಡಿದರು.
ಅಥಣಿಯಲ್ಲಿ ಮಹೇಶ ಕುಮಟಳ್ಳಿಗೆ ಟಿಕೆಟ್ ಖಚಿತ, ಇದೇ ಕಾರಣದಿಂದ ಅವರ ತಯಾರಿ ಮಾಡಲಾಗುತ್ತಿದೆ. ಎಲ್ಲ ಅನರ್ಹ ಶಾಸಕರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿರುವ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ನಮಗೆ ವಿಶ್ವಾಸ ಇದೆ ಎಂದರು. ರಾಜಕಾರಣ ಎಂಬುದು ಒಂದು ಉದ್ಯಮ ಇದ್ದಂತೆ. ಬದಲಾವಣೆಗಳು ಆಗುತ್ತಲೇ ಇರುತ್ತವೆ. ಅದೇ ರೀತಿ ರಾಜಕಾರಣ ಎಂದು ಹೇಳುವ ಮೂಲಕ ರಮೇಶ ಜಾರಕಿಹೊಳಿ ಬಿಜೆಪಿ ಗೆ ಸೇರ್ಪಡೆ ಯಾಗುವ ಸುಳಿವು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ