ರಾಜ್ಯ ಸರಕಾರ‌ದಿಂದ ಕೊಡಗು ಸಂತ್ರಸ್ತರ ಅವಗಣನೆ: ಜೆಡಿಎಸ್‌


Team Udayavani, Nov 3, 2019, 2:53 AM IST

nn-23

ಮಡಿಕೇರಿ: ಕೊಡಗಿನ ಪ್ರವಾಹ ಸಂತ್ರಸ್ತರ ಸಂಕಷ್ಟಗಳಿಗೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿರುವ ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್‌.ಕೆ.ಕುಮಾರಸ್ವಾಮಿ ಅವರು ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಜೆಡಿಎಸ್‌ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಸದಸ್ಯತ್ವ ಅಭಿಯಾನ ಮತ್ತು ರಾಜ್ಯ ಸರಕಾರದ ನಿರ್ಲಕ್ಷ್ಯದ ವಿರುದ್ಧ ಕೊಡಗು ಜೆಡಿಎಸ್‌ ಹಮ್ಮಿಕೊಂಡಿರುವ ಅಭಿಯಾನದ ಪಾದಯಾತ್ರೆಗೆ ಕೊಡ್ಲಿಪೇಟೆಯ ಶ್ರೀಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಹಿಂದೆ ರಾಜ್ಯದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸರಕಾರವಿದ್ದಾಗ ಕೊಡಗಿನ ಮಳೆಹಾನಿ ಸಂತ್ರಸ್ತರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸಿ ಅಗತ್ಯ ಪರಿಹಾರವನ್ನು ನೀಡಲಾಗಿತ್ತು. ನಿರಾಶ್ರಿತರಿಗೆ ಸುಮಾರು 800 ಮನೆಗಳನ್ನು ನಿರ್ಮಿಸಿಕೊಡುವ ಯೋಜನೆಯನ್ನು ರೂಪಿಸಲಾಯಿತು. ಆದರೆ ಈಗಿನ ಸರಕಾರ ಸಂತ್ರಸ್ತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಮತ್ತು ಇಲ್ಲಿಯವರೆಗೆ ಸೂಕ್ತ ರೀತಿಯ ಪರಿಹಾರವನ್ನು ವಿತರಿಸಿಲ್ಲವೆಂದು ಆರೋಪಿಸಿದರು.

ಎನ್‌ಡಿಆರ್‌ಎಫ್ ನಿಯಮದಂತೆ ಪರಿಹಾರ ವಿತರಿಸಲಾಗಿದೆಯೇ ಹೊರತು ಕೊಡಗಿನ ಸಂತ್ರಸ್ತರಿಗೆ ಪ್ರತ್ಯೇಕ ಅನುದಾನವನ್ನೇನು ಮೀಸಲಿಟ್ಟಿಲ್ಲ. ಆದರೆ ಹಿಂದಿನ ಮೈತ್ರಿ ಸರಕಾರ ವಿಶೇಷ ಅನುದಾನವನ್ನು ನೀಡಿತ್ತು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಸಂತ್ರಸ್ತರನ್ನು ಕಡೆಗಣಿಸಿರುವ ಸರಕಾರದ ವಿರುದ್ಧ ಕೊಡ್ಲಿಪೇಟೆಯಿಂದ ಶನಿವಾರಸಂತೆಯವರೆಗೆ ಸಾಂಕೇತಿಕವಾಗಿ ಪ್ರತಿಭಟನಾ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಸೂಕ್ತ ರೀತಿಯ ಸ್ಪಂದನೆ ದೊರೆಯದಿದ್ದಲ್ಲಿ ನಿರಂತರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ಮಾತನಾಡಿದರು. ಕಾರ್ಯಕರ್ತರ ಸಹಕಾರದೊಂದಿಗೆ ಪ್ರತೀ ಬೂತ್‌ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ನಡೆಸಿ ಜಿಲ್ಲೆಯಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲಾಗುವುದು ಎಂದು ಹೇಳಿದರು. ಜಿಲ್ಲಾಧ್ಯಕ್ಷ ಅಧ್ಯಕ್ಷ ಸಂಕೇತ್‌ ಪೂವಯ್ಯ ರಾಜ್ಯ ಪ್ರಧಾನ ಕಾರ್ಯದರ್ಶಿ ತಮ್ಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೀಲಾಶೇಷಮ್ಮ, ಮಹಿಳಾ ಘಟಕದ ಅಧ್ಯಕ್ಷೆ ಶಾಂತಿ ಅಚ್ಚಪ್ಪ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್‌ಖಾನ್‌, ಪ್ರಧಾನ ಕಾರ್ಯದರ್ಶಿ ಆದಿಲ್‌ ಪಾಷ, ಖಜಾಂಚಿ ಡೆನ್ನಿ ಬರೋಸ್‌, ಪ್ರಧಾನ ಕಾರ್ಯದರ್ಶಿ ಸುನೀಲ್‌, ಕೊಡ್ಲಿಪೇಟೆ ಹೋಬಳಿ ಅಧ್ಯಕ್ಷ ಶೇಖರ್‌, ಹಾಗೂ ಎಲ್ಲಾ ಬೂತ್‌ ಮಟ್ಟದ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕೊಡ್ಲಿಪೇಟೆಯಲ್ಲಿ ಆರಂಭವಾದ ಪಾದಯಾತ್ರೆ ಶನಿವಾರಸಂತೆಯ ನಂದೀಶ್ವರ ಮಂಟಪದಲ್ಲಿ ಸಮಾರೋಪಗೊಂಡಿತು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.