ರಮೇಶ್‌ ಭ್ರಷ್ಟಾಚಾರದ ವೀಡಿಯೋ ಶೀಘ್ರ ಬಿಡುಗಡೆ: ಸತೀಶ್‌


Team Udayavani, Nov 2, 2019, 9:05 PM IST

satish-jarkiholi

ಬೆಳಗಾವಿ: ಉಪಚುನಾವಣೆ ಸಮೀಪಿಸುತ್ತಿದ್ದಂತೆ ಜಾರಕಿಹೊಳಿ ಸಹೋದರರ ನಡುವೆ ಮಾತಿನ ಸಮರ ಮತ್ತೆ ತೀವ್ರಗೊಂಡಿದೆ. ಗೋಕಾಕ ತಾ.ಪಂ. ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ ಹಿಡಿತದಲ್ಲಿರುವುದರಿಂದ ಅವರು ತಾ.ಪಂ. ಸದಸ್ಯರ ರಾಜೀನಾಮೆ ಕೊಡಿಸಿರಬಹುದು. ಆದರೆ ಇದರಿಂದ ಗೋಕಾಕದಿಂದ ಕಾಂಗ್ರೆಸ್‌ ಖಾಲಿ ಮಾಡಿಸುವುದು ಅಸಾಧ್ಯ ಎಂದು ಶಾಸಕ ಸತೀಶ್‌ ಜಾರಕಿಹೊಳಿ ನೇರ ಸವಾಲು ಹಾಕಿದ್ದಾರೆ.

ಪತ್ರಕರ್ತರ ಜತೆ ಮಾತನಾಡಿದ ಅವರು, ಗೋಕಾಕ ತಾ.ಪಂ. ಸದಸ್ಯರು ರಾಜೀನಾಮೆ ನೀಡಿರುವ ಬಗ್ಗೆ ಅಚ್ಚರಿ ಪಡಬೇಕಾಗಿಲ್ಲ. ಅದು ದಬ್ಟಾಳಿಕೆಯಿಂದ ಆಗಿರುವ ಬೆಳವಣಿಗೆ. ಆದರೆ ಇದರಿಂದ ಕಾಂಗ್ರೆಸ್‌ ಪಕ್ಷವನ್ನು ಗೋಕಾಕದಿಂದ ಸಂಪೂರ್ಣ ತೆಗೆದುಹಾಕುತ್ತೇವೆ ಎಂದು ತಿಳಿದುಕೊಂಡಿದ್ದರೆ ಆದಕ್ಕಿಂತ ದೊಡ್ಡ ಭ್ರಮೆ ಬೇರೆ ಇಲ್ಲ. ಕಾಂಗ್ರೆಸ್‌ ಪಕ್ಷವನ್ನು ಅಲ್ಲಿಂದ ಖಾಲಿ ಮಾಡಿಸುವುದು ಸಾಧ್ಯವಾಗದ ಮಾತು ಎಂದರು.

ಗೋಕಾಕ ನನ್ನ ಹಿಡಿತದಲ್ಲಿದೆ ಎಂದು ರಮೇಶ್‌ ತಿಳಿದುಕೊಂಡಿದ್ದಾರೆ. ಆದಷ್ಟು ಬೇಗ ಗೋಕಾಕದಲ್ಲಿನ ಭ್ರಷ್ಟಾಚಾರದ ಕುರಿತು ವೀಡಿಯೋ ಬಿಡುಗಡೆ ಮಾಡಲಾಗುವುದು. ನಾವು ಉಪಚುನಾವಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಜಯ ನಮ್ಮದೇ ಎಂದರು.

ಮಾವ-ಅಳಿಯನ ಆಟ ಡಿ.5ರವರೆಗೆ ಮಾತ್ರ: ಲಖನ್‌
ಗೋಕಾಕದಲ್ಲಿ ಲಖನ್‌ ಜಾರಕಿಹೊಳಿ ಮಾತನಾಡಿ, ಸಹೋದರ ರಮೇಶ್‌ ಮತ್ತು ಆಳಿಯ ಅಂಬಿರಾವ್‌ ಪಾಟೀಲ್‌ ಅವರ ಆಟ ಗೋಕಾಕ ಕ್ಷೇತ್ರದಲ್ಲಿ ಡಿ.5ರವರೆಗೆ ಮಾತ್ರ ನಡೆಯಲಿದೆ. ಸ್ಥಳೀಯ ಸಂಸ್ಥೆಗಳಲ್ಲಿರುವ ರಮೇಶ್‌ ಬೆಂಬಲಿತ ಸದಸ್ಯರು ರಾಜೀನಾಮೆ ಕೊಟ್ಟು ಹೋದರೆ ನಮಗೇನೂ ಭಯವಿಲ್ಲ. 22, 42 ಮತ್ತು 52 ಸದಸ್ಯರು ಹೋದರೆ ಹೋಗಲಿ. ನಮ್ಮ ಜತೆ ಕ್ಷೇತ್ರದ 2.40 ಲಕ್ಷ ಮತದಾರರಿದ್ದಾರೆ. ಈ ಬೆಂಬಲದ ಮುಂದೆ ಮಾವ-ಅಳಿಯನ ಆಟ ಏನೂ ನಡೆಯದು ಎಂದರು.

ಸತೀಶ್‌ ಜಾರಕಿಹೊಳಿ ಎಲ್ಲ ಪಂಚಾಯತ್‌ಗಳ ಹಗರಣಗಳನ್ನು ಹೊರತೆಗೆಯುತ್ತಿದ್ದಾರೆ. ಇದರಿಂದ ಅವರ ಬೆಂಬಲಿಗರಿಗೆ ಅಂಜಿಕೆ ಆರಂಭವಾಗಿದೆ. ಮೇಲಾಗಿ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮತ್ತೂಬ್ಬ ಅಳಿಯ ಸೋತಿದ್ದಾರೆ. ಇವೆಲ್ಲದರಿಂದ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ತಮ್ಮ ಬೆಂಬಲಿತ ಸದಸ್ಯರ ರಾಜೀನಾಮೆ ಕೊಡಿಸುವ ನಾಟಕ ಆರಂಭಿಸಿದ್ದಾರೆ. ಚುನಾವಣೆ ಬಂದಿರುವುದರಿಂದ ಬ್ಲ್ಯಾಕ್‌ವೆುàಲ್‌ ಮಾಡಿ ರಾಜೀನಾಮೆ ಕೊಡಿಸುತ್ತಿದ್ದಾರೆ. ಮುಂದೆ ಜಿ.ಪಂ. ಸದಸ್ಯರ ರಾಜೀನಾಮೆಯನ್ನೂ ಕೊಡಿಸುತ್ತಾರೆ. ಇದರಿಂದ ನಮಗೇನೂ ಸಮಸ್ಯೆ ಇಲ್ಲ ಎಂದರು.

ನಾನು 25 ವರ್ಷಗಳಿಂದ ಇವರ ಜತೆ ರಾಜಕಾರಣ ಮಾಡುತ್ತ ಬಂದಿದ್ದೇನೆ. ಇವರ ಆಟವೆಲ್ಲ ಗೊತ್ತು. ಮಾವ-ಅಳಿಯನ ಭ್ರಷ್ಟಾಚಾರ ಮತ್ತು ಬ್ಲ್ಯಾಕ್‌ವೆುàಲ್‌ ಬಂದ್‌ ಮಾಡಲು ನಾನು ಮತ್ತು ಸತೀಶ್‌ ಹೋರಾಟ ಆರಂಭ ಮಾಡಿದ್ದೇವೆ. ಇದರಿಂದ ಹಿಂದೆ ಸರಿಯುವುದಿಲ್ಲ ಎಂದರು.

ಒಮ್ಮೆ ಸತೀಶ್‌ ನಾನು ಸಾವಿರಾರು ಕೋ. ರೂ. ಆಸ್ತಿ ಮಾಡಿದ್ದೇನೆ ಎನ್ನುತ್ತಾನೆ. ಇನ್ನೊಮ್ಮೆ ಸಾಲಗಾರನಾಗಿದ್ದೇನೆ ಎಂದು ಹೇಳುತ್ತಾರೆ. ಹೀಗಾಗಿ ಇಂಥ ಆರೋಪಗಳಿಗೆ ಬಹಿರಂಗ ಸಭೆಯಲ್ಲಿ ಉತ್ತರ ಕೊಡುತ್ತೇನೆ.
– ರಮೇಶ್‌ ಜಾರಕಿಹೊಳಿ, ಅನರ್ಹ ಶಾಸಕ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.