ರಾಷ್ಟ್ರೀಯ ಹೆದ್ದಾರಿ 75 ಪರಿಶೀಲಿಸಿದ ಅಧಿಕಾರಿಗಳು


Team Udayavani, Nov 3, 2019, 3:00 AM IST

rashtriya-heddari

ಸಕಲೇಶಪುರ: ಹಾಸನದಿಂದ ಮಾರನಹಳ್ಳಿಯವರೆಗೆ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ 75ನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು ಶನಿವಾರ ಪರಿಶೀಲನೆ ಮಾಡಿದರು. ಹಾಸನದಿಂದ ಮಾರನಹಳ್ಳಿಯವರೆಗೆ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ 75 ಸಂಪೂರ್ಣವಾಗಿ ಹದಗೆಟ್ಟಿದ್ದು ಹೆದ್ದಾರಿಯನ್ನು ದುರಸ್ತಿ ಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ವತಿಯಿಂದ ಕಳೆದ ವಾರ ಪರಿಶೀಲನೆ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಹೆದ್ದಾರಿಯನ್ನು ವಿವಿಧೆಡೆ ಪರಿಶೀಲಿಸಿದ ನಂತರ ಪಟ್ಟಣದ ಹೇಮಾವತಿ ಸೇತುವೆಯನ್ನು ವೀಕ್ಷಣೆ ಮಾಡಲು ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಲಯ ಅಧಿಕಾರಿ ಸೂರ್ಯವಂಶಿ ಅವರನ್ನು ವಿವಿಧ ಸಂಘಟನೆಗಳ ಮುಖಂಡರು ಮುತ್ತಿಗೆ ಹಾಕಿ ಇಲ್ಲಿ ದುರಸ್ತಿ ಮಾಡುವುದು ಬೇಡ, ಸಂಪೂರ್ಣವಾಗಿ ರಸ್ತೆ ಹದಗೆಟ್ಟಿರುವುದರಿಂದ ಮರು ಡಾಂಬರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಲಯ ಅಧಿಕಾರಿ ಸೂರ್ಯವಂಶಿ ನಾನು ಇಲ್ಲಿಗೆ ಕೇವಲ ಹೆದ್ದಾರಿಯ ಅವಸ್ಥೆಯನ್ನು ಪರಿಶೀಲನೆ ಮಾಡಲು ಬಂದಿದ್ದೇನೆ. ಮರುಡಾಂಬರೀಕರಣ ಕುರಿತು ಉನ್ನತ ಅಧಿಕಾರಿಗಳ ಜೊತೆಗೆ ಶೀಘ್ರವಾಗಿ ಚರ್ಚಿಸಲಾಗುವುದು ಎಂದರು.

ಅಧಿಕಾರಿಗಳ ಭೇಟಿಗೆ ಶ್ಲಾಘನೆ: ಈ ಸಂದರ್ಭದಲ್ಲಿ ಹೋರಾಟಗಾರರದ ತಾಪಂ ಸದಸ್ಯ ಯಡೇಹಳ್ಳಿ ಮಂಜುನಾಥ್‌ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75ನ್ನು ದುರಸ್ತಿ ಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಈಗಾಗಲೇ ಪ್ರತಿಭಟನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ಶನಿವಾರದಿಂದಲೇ ದುರಸ್ತಿ ಕಾರ್ಯ ಆರಂಭಿಸುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ಇಂದು ಸಾಂಕೇತಿಕವಾಗಿ ಆರಂಭಿಸಲಾಗಿದ್ದು ಉನ್ನತ ಅಧಿಕಾರಿಗಳು ಸ್ಥಳ ಪರಿಶೀಲಿಸಿರುವುದು ಶ್ಲಾಘನೀಯ ಎಂದರು.

ಜಲ್ಲಿಗಾಗಿ ಕೋರೆ ಪಡೆಯಲು ಅನುಮತಿ ನೀಡಿ: ರಾಜ್‌ಕಮಲ್‌ಕಂಪನಿಯ ವ್ಯವಸ್ಥಾಪಕ ಸುರಾನ ಮಾತನಾಡಿ, ಗುಣಮಟ್ಟದ ರಸ್ತೆಯಾಗಬೇಕಾದಲ್ಲಿ ಗುಣಮಟ್ಟದ ವಸ್ತುಗಳು ಸಿಗಬೇಕು. ಕಳಪೆ ಗುಣಮಟ್ಟದ ವಸ್ತುಗಳನ್ನು ಹಾಕುವುದರಿಂದ ರಸ್ತೆ ಕಾಮಗಾರಿಯ ಗುಣಮಟ್ಟ ಕುಸಿಯುತ್ತದೆ. ಕಾಮಗಾರಿಗೆ ಬೇಕಾದ ಜಲ್ಲಿಗಾಗಿ ಕೋರೆ ಪಡೆಯಲು ಅನುಮತಿ ನೀಡುವಂತೆ ಬೆಂಗಳೂರಿನ ಕಚೇರಿಗೆ ನೀಡಲಾಗಿದೆ.

ಆದರೆ ಇಲ್ಲಿಯವರೆಗೆ ಕಡತವನ್ನು ಅಲ್ಲಿಯ ಅಧಿಕಾರಿಗಳು ವಿಲೇವಾರಿ ಮಾಡದಿರುವುದರಿಂದ ಚತುಷ್ಪಥ ರಸ್ತೆಯ ಕಾಮಗಾರಿ ವಿಳಂಬವಾಗಿದೆ. ಕಲ್ಲಿನ ಕೋರೆಯ ಕಡತ ಶೀಘ್ರವಾಗಿ ವಿಲೇವಾರಿವಾದಲ್ಲಿ ನಾಳೆಯಿಂದಲೆ ಕಾಮಗಾರಿ ಆರಂಭಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಹೋರಾಟಗಾರರಾದ ಫಾರೂಕ್‌, ಮಲ್ಲೇಶ್‌, ಉಮೇಶ್‌, ಸಾಗರ್‌ ಜಾನೆಕೆರೆ, ಅಜಿತ್‌, ಮುಂತಾದವರು ಹಾಜರಿದ್ದರು.

ಈ ಹಿಂದೆ ಕಾಮಗಾರಿ ನಡೆಸಿರುವ ಐಸೊಲೆಕ್ಸ್‌ ಕಂಪನಿಯವರಿಗೆ ಚತುಷ್ಪಥ ರಸ್ತೆ ಕಾಮಗಾರಿ ನಡೆಸಲು ಮತ್ತೂಂದು ಅವಕಾಶ ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ದುರಸ್ತಿ ಕಾರ್ಯವನ್ನು ಇಂದಿನಿಂದಲೇ ನಡೆಸುವಂತೆ ಗುತ್ತಿಗೆದಾರರಿಗೆ ಆದೇಶಿಸಲಾಗಿದೆ.
-ಸೂರ್ಯವಂಶಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಲಯ ಅಧಿಕಾರಿ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.