ಶಿಥಿಲಾವಸ್ಥೆಗೆ ಸವಣೂರು ಗ್ರಂಥಾಲಯ


Team Udayavani, Nov 3, 2019, 4:05 PM IST

hv-tdy-1

ಸವಣೂರು: ಪಟ್ಟಣದ ಓದಾಸಕ್ತರು ಹಾಗೂ ಶಿಕ್ಷಣಪ್ರಿಯರಾದ ಡಾ| ಎಮ್‌.ಆರ್‌.ರಿಸಾಲ್ದಾರ, ಎಸ್‌.ವಾಯ್‌.ಕಲಾಲ, ಶ್ರೀಕಾಂತ ಪಡಸಲಗಿ, ಎ.ಎ.ಕೊಯ್ತೆವಾಲೆ, ಜಯತೀರ್ಥ ದೇಶಪಾಂಡೆ ಮುಂತಾದವರ ಹೋರಾಟ ಫಲವಾಗಿ 1986ರಲ್ಲಿ ಪುರಸಭೆಗೆ ಸೇರಿದ ಜನತಾ ಬಜಾರ ಕಟ್ಟಡದಲ್ಲಿ ಆರಂಭಿಸಿದ ಗ್ರಂಥಾಲಯ, ನಂತರ 1990ರಲ್ಲಿ ಮಿನಿ ವಿಧಾನಸೌಧದ ಹೊಸ ಕಟ್ಟಡ ನಿರ್ಮಿಸಿ ಸ್ಥಳಾಂತರಗೊಂಡಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಈ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಓದುಗರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪುಸ್ತಕಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜತೆಗೆ ಓದುಗರ ಸಂಖ್ಯೆಯೂ ವೃದ್ಧಿಯಾಗುತ್ತಿದೆ. ಅನೇಕ ಪ್ರಸಿದ್ಧ ಸಾಹಿತಿಗಳ, ಲೇಖಕರ ಕಥಾ ಸಂಗ್ರಹಗಳು, ಕವನ ಸಂಕಲನಗಳು, ವಿಶ್ಲೇಷಣಾತ್ಮಕ, ವಿಮಶಾತ್ಮಕ ಗ್ರಂಥಗಳು, ಕಥೆ-ಕಾದಂಬರಿಗಳು, ಧಾರ್ಮಿಕ ಗ್ರಂಥಗಳು ಸೇರಿದಂತೆ ಕನ್ನಡ, ಹಿಂದಿ, ಇಂಗ್ಲಿಷ್‌, ಉರ್ದು ಸೇರಿ ಸುಮಾರು 16,000 ಪುಸ್ತಕಗಳ ಸಂಗ್ರಹ ಗ್ರಂಥಾಲಯದಲ್ಲಿದೆ.

ನೆಲದ ಮೇಲೆಯೇ ಇಡಲಾಗುತ್ತಿದೆ ಪುಸ್ತಕ: ಪ್ರತಿ ವರ್ಷವೂ ಜಿಲ್ಲಾ ಗ್ರಂಥಾಲಯ ಇಲಾಖೆಯಿಂದ ಹೊಸ ಪುಸ್ತಕಗಳು ಬರುತ್ತವೆ. ಗ್ರಂಥಾಲಯದಲ್ಲಿ ಓದುಗರಿಗೆ ಕುರ್ಚಿ ಮೇಜುಗಳ ಸೌಲಭ್ಯ ಚೆನ್ನಾಗಿದೆ. ಆದರೆ, ಪುಸ್ತಕಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಟ್ಟಡದಲ್ಲಿ ಸ್ಥಳಾವಕಾಶ ಕೊರತೆಯಾಗುತ್ತಿದೆ. ಜೋಡಣೆಗೆ ಸ್ಥಳವಿಲ್ಲದೇ ನೂರಾರು ಪುಸ್ತಕಗಳನ್ನು ನೆಲದ ಮೇಲೆಯೇ ಇಡಲಾಗಿದೆ. ಪುಸ್ತಕಗಳನ್ನು ಜೋಡಿಸಿಟ್ಟ ಕೊಠಡಿ ಇಕ್ಕಟ್ಟಾಗಿದ್ದು, ಪುಸ್ತಕಗಳನ್ನು ಆಯ್ಕೆ ಮಾಡಿಕೊಳ್ಳಲು ಓದುಗರಿಗೆ ಕಷ್ಟ ಪಡುವಂತಾಗಿದೆ.

ಓದುಗರ ಸಂಖ್ಯೆ ಹೆಚ್ಚುತ್ತಿದೆ: ಪತ್ರಿಕೆ, ಮ್ಯಾಗಜಿನ್‌ ಹಾಗೂ ಪುಸ್ತಕಗಳನ್ನು ಓದಲು ನಿತ್ಯವೂ ಸುಮಾರು 80ಕ್ಕೂ ಹೆಚ್ಚು ಓದುಗರು ಭೇಟಿ ನಿಡುತ್ತಾರೆ. ಸದಸ್ಯತ್ವ ಪಡೆದ ಓದುಗರಿಗೆ 15 ದಿನಗಳವರೆಗೆ ಪುಸ್ತಕಗಳನ್ನು ಮನೆಗೆ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಯುವಕರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ನೀರು-ಶೌಚಾಲಯ ವ್ಯವಸ್ಥೆಯಾಗಬೇಕು:

ಗ್ರಂಥಾಲಯಕ್ಕೆ ಬರುವ ಸದಸ್ಯತ್ವ ಹೊಂದಿದ ಓದುಗರಿಗೆ ಶೌಚಾಲಯ ಹಾಗೂ ನೀರಿನ ಸೌಕರ್ಯ ಕಲ್ಪಿಸುವ ವ್ಯವಸ್ಥೆ ಕೈಗೊಳ್ಳಬೇಕಾಗಿದೆ. ಓದುಗರ ಸಂಖ್ಯೆ ಶೇ.15 ಹೆಚ್ಚಿದ್ದು,ಗ್ರಂಥಾಲಯಕ್ಕೆ ಒಟ್ಟು ನಾಲ್ಕು ಜನರ ಅವಶ್ಯಕತೆಯಿದೆ. ಸದ್ಯ ಗ್ರಂಥಾಲಯದ ಸಹವರ್ತಿ ಜಿಲಾರಿಸಾಬ ಕಳಸದ ಹಾಗೂ ಶುಚಿಗಾರ ಚಂದ್ರಶೇಖರ ರಾಶಿನಕರ ಇಬ್ಬರೇ ಕೆಲಸ ನಿರ್ವಹಿಸುತ್ತಿದ್ದಾರೆ.

ಶಿಥಿಲಗೊಂಡ ಕಟ್ಟಡ ನೆಲಸಮಗೊಳಿಸಿ ವಿಶಾಲವಾದ ನೂತನ ಕಟ್ಟಡ ನಿರ್ಮಿಸಿ ಗ್ರಂಥಾಲಯಕ್ಕೆ ಬರುವ ಸದಸ್ಯತ್ವ ಹೊಂದಿದ ಓದುಗರಿಗೆ ಕುಡಿಯುವ ನೀರು ಹಾಗೂ ಶೌಚಾಲಯದಂತಹ ಸೌಕರ್ಯ ಕಲ್ಪಿಸಿಕೊಡಬೇಕೆಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.

1996ರಿಂದ 98ರವರೆಗೆ ನನ್ನ ಅಧ್ಯಕ್ಷತೆಯಲ್ಲಿ ಹಜರೆಸಾಬ ನದಾಫ, ಮಂಜುನಾಥ ವೇರ್ಣೆಕರ, ಬಾಹುದ್ದೀನ ಇನಾಮದಾರ, ಬಸವರಾಜ ಮಠಪತಿ ಸೇರಿದಂತೆ ಸಾಹಿತ್ಯಾಸಕ್ತ ಓದುಗರು, ಯುವಕರು ಗೆಳೆಯರ ಬಳಗ ಎನ್ನುವ ಸಂಘ ಕಟ್ಟಿ ಪ್ರತಿ ಸೋಮವಾರ ಕವಿಗೋಷ್ಠಿ ನಡೆಸುವ ಮೂಲಕ ಓದುಗರಲ್ಲಿ ಆಸಕ್ತಿ ಮೂಡಿಸುತ್ತಿದ್ದೆವು. ಆದರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಪುಸ್ತಕಗಳ ಕುರಿತು ಆಸಕ್ತಿ ಕಡಿಮೆಯಾಗುತ್ತಿದ್ದು, ಓದುಗರಿಲ್ಲದೇ ಗ್ರಂಥಾಲವು ಸೊರಗುತ್ತಿದೆ. ಅನೇಕ ಸಾಹಿತ್ಯಿಕ,ಆಧ್ಯಾತ್ಮಿಕ ಪುಸ್ತಕಗಳು ಮೂಲೆಸೇರುವಂತಾಗಿರುವುದು ವಿಷಾದನೀಯ.  –ಜಯತೀರ್ಥ ದೇಶಪಾಂಡೆ, ಹಿರಿಯ ಪರ್ತಕರ್ತ

 

-ರಾಜಶೇಖರ ಗುರುಸ್ವಾಮಿಮಠ

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.