ಸಮಾಜ ಮುಖ್ಯ ಹೊರತು ವ್ಯಕ್ತಿ-ಪಕ್ಷವಲ್ಲ

ಪೂರ್ವಭಾವಿ ಸಭೆಸಚಿವ ಸ್ಥಾನದ ಒತ್ತಡದ ನಡುವೆಯೂ ಜಾತ್ರಾ ಮಹೋತ್ಸವ ಯಶಸ್ಸಿಗೆ ಶ್ರಮ: ಶ್ರೀರಾಮುಲು

Team Udayavani, Nov 4, 2019, 11:43 AM IST

4-November-4

ಹರಿಹರ: ಶ್ರೀಗಳಿಗಾಲಿ, ನಮಗಾಗಲಿ ಸಮಾಜ ಮುಖ್ಯವೇ ಹೊರತು ರಾಜಕೀಯ ಪಕ್ಷವಲ್ಲ ಎಂದು ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ಫೆ. 8, 9ರಂದು ನಡೆಯುವ 2ನೇ ವಾಲ್ಮೀಕಿ ಜಾತ್ರಾ ಮಹೋತ್ಸವ, ಮಠದ 22ನೇ ವಾರ್ಷಿಕೋತ್ಸವ, ಲಿಂ|
ಪುಣ್ಯಾನಂದಪುರಿ ಶ್ರೀಗಳ 12ನೇ ಪುಣ್ಯಾರಾಧನೆ, ಪ್ರಸನ್ನಾನಂದ ಶ್ರೀಗಳ 12ನೇ ವರ್ಷದ ಪಟ್ಟಾಧಿಕಾರ ಕಾರ್ಯಕ್ರಮದ ನಿಮಿತ್ತ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಬಾರಿ ಕಾಂಗ್ರೆಸ್‌ ಸರ್ಕಾರ ಇದ್ದುದ್ದರಿಂದ ಆಗಿನ ಸಚಿವರು ಹಾಗೂ ಸಮಾಜದ ಮುಖಂಡರಾದ ಸತೀಶ್‌ ಜಾರಕಿಹೊಳಿ ಉತ್ಸವ ಸಮಿತಿ ಅಧ್ಯಕ್ಷರಾದರು. ಈ ಬಾರಿ ಬಿಜೆಪಿ ಸರ್ಕಾರವಿದ್ದು ನನ್ನನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಆಯಾ ಸರಕಾರದಿಂದ ಅಗತ್ಯ ಸಹಕಾರ ಪಡೆಯುವುದು ಇದರ ಉದ್ದೇಶವಾಗಿದೆ.

ಇಲ್ಲಿ ಸಮಾಜ ಮುಖ್ಯವೇ ಹೊರತು ರಾಜಕೀಯ ಪಕ್ಷವಲ್ಲ ಎಂದರು. ಕಳೆದ ವರ್ಷ ನಡೆದ ಪ್ರಥಮ ವರ್ಷದ ಜಾತ್ರಾ ಮಹೋತ್ಸವ ಸಮಾಜ ಸಂಘಟನೆಯಲ್ಲಿ ಸಂಚಲನ ಮೂಡಿಸಿತ್ತು. ಶ್ರೀಗಳು ರಾಜ್ಯಾದ್ಯಂತ ಪಾದರಸದಂತೆ ಸಂಚರಿಸಿದ ಫಲವಾಗಿ ಎಲ್ಲೆಡೆಯಿಂದ ಜನ ಹಾಗೂ ದೇಣಿಗೆ ಮಠಕ್ಕೆ ಹರಿದು ಬಂತು. ನಾನು ದೇಣಿಗೆ ನೀಡಲು ಮುಂದಾದರೂ ಶ್ರೀಗಳು ಈಗ ಬೇಡ, ಬೇಡ ಎಂದರು.

ಇದು ಸಮಾಜದ ಜನರಿಂದ ಹರಿದು ಬಂದ ದೇಣಿಗೆ ಪ್ರಮಾಣವನ್ನು ಸೂಚಿಸುತ್ತದೆ. ಆಗ ಶ್ರೀಗಳ ಜೋಳಿಗೆ ದೇಣಿಗೆಯಿಂದ ತುಂಬಿತ್ತು ಎಂದರು. ಸಚಿವ ಸ್ಥಾನದ ಒತ್ತಡದ ನಡುವೆಯೂ ರಾಜ್ಯಾದ್ಯಂತ ಸಂಚರಿಸಿ ಜಾತ್ರಾ ಮಹೋತ್ಸವದ ಯಶಸ್ಸಿಗೆ ಶ್ರಮಿಸುತ್ತೇನೆ. ಈ ಉತ್ಸವವು ವಾಲ್ಮೀಕಿ ಸಮಾಜದ ಸಂಘಟನೆಯ ದಿಕ್ಸೂಚಿಯಾಗಿ ಬೆಳೆಯಲಿದ್ದು ನಿರಂತರವಾಗಿ ಆಚರಿಸಲಾಗುವುದು.

ಈ ಮಠ ಹಾಗೂ ಸಮಾಜ ಅಭಿವೃದ್ಧಿಯ ಹಾದಿಯಲ್ಲಿದ್ದು ಎಲ್ಲರ ಸಹಕಾರ ಬೇಕು. ಕುಟಂಬ ಸಮೇತ ಈ ಮಠದ ದರ್ಶನಕ್ಕೆ ಬಂದು ಇದನ್ನು ತೀರ್ಥ ಕ್ಷೇತ್ರವಾಗಿ ರೂಪಿಸುವ ಜವಾಬ್ದಾರಿ ಸಮಾಜ ಬಾಂಧವರ ಮೇಲಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಪ್ರಸನ್ನಾನಂದ ಶ್ರೀಗಳು ಮಾತನಾಡಿ, ಈಗಾಗಲೇ ಅನೇಕ ಸಮಾಜದವರು ಅವರವರ ಸಾಂಸ್ಕೃತಿಕ ನಾಯಕರ ಹೆಸರಲ್ಲಿ ಸಂಘಟಿತರಾಗುತ್ತಿದ್ದಾರೆ. ದೇಶದಲ್ಲಿ ವಾಲ್ಮೀಕಿ ಸಮಾಜವು ವಿವಿಧ ಹೆಸರುಗಳಲ್ಲಿ ಕರೆಯಲ್ಪಡುತ್ತಿದೆ. ಇವನ್ನೆಲ್ಲಾ ಸಮೀಕರಿಸಿ ಒಂದು ವೇದಿಕೆಗೆ ತರುವ ಸವಾಲು ನಮ್ಮ ಮುಂದಿದೆ. ಆ ದಿಸೆಯಲ್ಲಿ ಜಾತ್ರಾ ಮಹೋತ್ಸವ ಆಯೋಜಿಸಲಾಗಿದೆ ಎಂದರು.

1998ರ ಫೆ.8ರಂದು ಈ ಮಠ ಸ್ಥಾಪನೆಯಾಯಿತು. ಪ್ರಥಮ ಪೀಠಾಧಿ ಪತಿ ಪುಣ್ಯಾನಂದಪುರಿ ಶ್ರೀಗಳಿಗೆ ರಾಜ್ಯಾದ್ಯಂತ 8 ವರ್ಷಗಳ ಕಾಲ ನಿರಂತರವಾಗಿ ಸಂಚರಿಸಿ ಸಮಾಜ ಸಂಘಟನೆ ಮಾಡಿದ ಕೀರ್ತಿ ಸಲ್ಲುತ್ತದೆ ಎಂದು ಸ್ಮರಿಸಿದರು.

ತಾವು ಪೀಠಾ ಧಿಪತಿಯಾದ ನಂತರ ಸಮಾಜಕ್ಕೆ ಸಾಮಾಜಿಕ, ರಾಜಕೀಯ ಶಕ್ತಿ ತುಂಬುವ, ಮೀಸಲಾತಿ ಹೋರಾಟ, ಮಠದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಹಿಂದುಳಿದ ವಾಲ್ಮೀಕಿ ಸಮಾಜವನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಆಶಯವಾಗಿದೆ ಎಂದರು.

ಸಮಾಜದ ಮುಖಂಡ ಟಿ.ಈಶ್ವರ್‌ ಮಾತನಾಡಿ, ಜಾತ್ರಾ ಮಹೋತ್ಸವಕ್ಕಾಗಿ ಒಂದೂವರೆ ಕೋಟಿ ರೂ. ಗಳ ತೇರನ್ನು ಯಲ್ಲಾಪುರದಲ್ಲಿ ಸಿದ್ಧಗೊಳಿಸಲಾಗುತ್ತಿದೆ. ಇದು ದೇಶದಲ್ಲೇ ವಿಶಿಷ್ಠ ಎನಿಸಲಿದ್ದು ಇದರಲ್ಲಿ ಶ್ರೀ ವಾಲ್ಮೀಕಿ ಹಾಗೂ ಶ್ರೀರಾಮನ ಚಿತ್ರಗಳಿವೆ. ಕಳೆದ ವರ್ಷದ ಉತ್ಸವದ ಆಯವ್ಯಯವನ್ನು ಶ್ರೀಗಳು ಜಿಲ್ಲಾವಾರು ಸಂಚರಿಸಿ ಸಮಾಜದವರ ಗಮನಕ್ಕೆ ತಂದಿದ್ದಾರೆ ಎಂದರು.

ಸಭೆಯಲ್ಲಿ ವೀರೇಂದ್ರಸಿಂಹ, ವಾಲ್ಮೀಕಿ ನೌಕರರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಡಾ| ಬಿ.ರಂಗಯ್ಯ, ಡಾ| ಪಾಟೀಲ್‌, ಪ್ರೊ| ಪೊನ್ನದ್‌, ಶಾಂತಲಾ ರಾಜಣ್ಣ, ಮಠದ ಆಡಳಿತಾ ಧಿಕಾರಿ ಟಿ.ಓಬಳಪ್ಪ, ಕೆ.ಬಿ. ಮಂಜಣ್ಣ, ಮಹಾಲಕ್ಷ್ಮೀ, ವಿಜಯಶ್ರೀ, ಆನಂದಪ್ಪ, ರಂಗಪ್ಪ ಕೆ., ಕೊಕ್ಕನೂರು ಸೋಮಣ್ಣ ಇತರರಿದ್ದರು.

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.