ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ: ಬಿಎಸ್‌ವೈ


Team Udayavani, Nov 4, 2019, 8:21 PM IST

BSY-545-A

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇರುವವರೆಗೂ ಆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇರುವವರೆಗೂ ಆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಕಾಯಂ ಆಗಿ ಪ್ರತಿಪಕ್ಷದ ಸ್ಥಾನ ಸಿಗಲಿದೆ. ಇನ್ನೂ ಮೂರೂವರೆ ವರ್ಷ ಪ್ರತಿಪಕ್ಷ ಸ್ಥಾನದಲ್ಲಿ ಕೂರಬೇಕಾಗುತ್ತದೆ ಎಂದು ಹತಾಶೆಯಿಂದ ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಬಿಜೆಪಿ ವಿರುದ್ಧ ಪಕ್ಷದ ವಿರುದ್ಧ ಅಪಪ್ರಚಾರ ಮಾಡುವ ಬದಲು ತಾಕತ್ತಿದ್ದರೆ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ತೋರಿಸಿ ಎಂದು ಪ್ರತಿಪಕ್ಷಗಳಿಗೆ ಸವಾಲು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ, ನೀವು ಏನೇ ಆರೋಪ ಮಾಡಿದರೂ ಜನರು ನಿಮ್ಮ ಸುಳ್ಳುಗಳನ್ನು ನಂಬುವುದಿಲ್ಲ ಎಂದರು.

ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ. ಇಂತಹ ಅಪಪ್ರಚಾರ ಮಾಡುವ ಬದಲು ಉಪಚುನಾವಣೆಯ ಅಖಾಡಕ್ಕೆ ಬನ್ನಿ. ನಿಮ್ಮ ಯೋಗ್ಯತೆ ಏನೆಂಬುದು ಗೊತ್ತಾಗುತ್ತದೆ ಎಂದು ವಾಗ್ಧಾಳಿ ನಡೆಸಿದರು.

ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ ಕಾಂಗ್ರೆಸ್‌ ಪಕ್ಷ ಲೋಕಸಭಾ ಚುನಾವಣೆ ಎದುರಿಸಿದೆ. ಅವರ ಯೋಗ್ಯತೆಗೆ ಒಂದು ಸ್ಥಾನ ಗೆದ್ದಿದ್ದಾರೆ. ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕಿತ್ತು. ಆದರೆ, ಕಾಂಗ್ರೆಸ್‌ ನಿಮ್ಮನ್ನು ಹೇಗೆ ಪ್ರತಿಪಕ್ಷದ ನಾಯಕನಾಗಿ ಮಾಡಿದೇ ಎಂಬುದು ಗೊತ್ತಿಲ್ಲ. ಕಾಂಗ್ರೆಸ್‌ಗೆ ಕೊನೆ ಮೊಳೆ ಹೊಡೆಯುವುದು ನೀವೇ ಎಂದು ಹೇಳಿದರು.

ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ತಮ್ಮದೇ ಆದ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇದನ್ನು ಸುಪ್ರೀಂ ಕೋರ್ಟ್‌ ಗಮನಕ್ಕೂ ತಂದಿದ್ದಾರೆ. ಇನ್ನೇನು ತೀರ್ಪು ಪ್ರಕಟವಾಗಲಿದೆ ಎಂಬ ಸಂದರ್ಭದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುತ್ತದೆಯೇ ಎಂದು ಪ್ರಶ್ನಿಸಿದರು.

ಸತ್ಯ ಶೋಧನೆ ಮಾಡಿ
ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಶಾಸಕರು ಏಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಅವರು ನಿಯಮಬದ್ಧವಾಗಿ ರಾಜೀನಾಮೆ ಕೊಟ್ಟಿದ್ದನ್ನು ನೀವು ಅಂಗೀಕರಿಸಿದ್ದರೆ ಈ ಗೊಂದಲ ಸೃಷ್ಟಿಯಾಗುತ್ತಿರಲಿಲ್ಲ. ಅಂದಿನ ವಿಧಾನಸಭೆ ಸ್ಪೀಕರ್‌ ರಮೇಶ್‌ ಕುಮಾರ್‌ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಿತೂರಿ ನಡೆಸಿ ರಾಜೀನಾಮೆ ಪತ್ರವನ್ನೇ ಅಂಗೀಕರಿಸಲಿಲ್ಲ. ಪುನಃ ರಾಜೀನಾಮೆ ಕೊಟ್ಟರೂ ನಿಯಮಬದ್ದವಾಗಿ ನೀಡಿಲ್ಲ ಎಂದು ಆಕ್ಷೇಪಿಸಿದ್ದೀರಿ. 17 ಮಂದಿ ಶಾಸಕರನ್ನು ಮಾತನಾಡಿಸಿ, ಅವರ ಬಾಯಿದಂಲೇ ಕೇಳಿ ಏಕಾಗಿ ರಾಜೀನಾಮೆ ನೀಡಿದ್ದಾರೆ ಎಂಬುದನ್ನು ಹೇಳುತ್ತಾರೆ ಎಂದು ವಾಗ್ಧಾಳಿ ನಡೆಸಿದರು.

ಉಪಚುನಾವಣೆಗೂ ಮುನ್ನ ಜನತೆಯಲ್ಲಿ ಗೊಂದಲ ಸೃಷ್ಟಿಸಿ ಅದರ ಲಾಭ ಪಡೆಯಬಹುದೆಂಬ ಸಿದ್ದರಾಮಯ್ಯನವರ ಲೆಕ್ಕಾಚಾರ ಎಂದಿಗೂ ಯಶ ಕಾಣುವುದಿಲ್ಲ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಕನಸನ್ನು ಕೈ ಬಿಡಲಿ ಎಂದರು.

ನಾನು ವಿಡಿಯೋದಲ್ಲಿ ಏನು ಮಾತನಾಡಿದ್ದೇನೆ ಎಂಬುದು ನನಗೆ ಗೊತ್ತಿದೆ. ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿರುವುದನ್ನು ಯಾರೂ ಚಿತ್ರೀಕಿಸಿದರೂ ಎಂಬುದು ಗೊತ್ತಿಲ್ಲ. ನನ್ನ ಹೇಳಿಕೆಯಿಂದ ನ್ಯಾಯಾಲಯದಲ್ಲಿ ಅನರ್ಹರಿಗೆ ಯಾವುದೇ ರೀತಿಯ ಹಿನ್ನಡೆ ಉಂಟಾಗುವುದಿಲ್ಲ. ಖಂಡಿತ ಅವರಿಗೆ ನ್ಯಾಯ ಸಿಗಲಿದೆ. ನ್ಯಾಯಾಲಯದ ತೀರ್ಪು ಬಂದ ಬಳಿಕ ಅವರು ಕಾಂಗ್ರೆಸ್‌, ಜೆಡಿಎಸ್‌ ಅಥವಾ ಸ್ವತಂತ್ರವಾಗಿ ಸ್ಪರ್ಧಿಸುತ್ತಾರೆ. ಅದು ಅವರಿಗೆ ಸಂಬಂಧಿಸಿದ ವಿಷಯ. ಇದರಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದರು.

ಗೊಂದಲ ಸೃಷ್ಟಿಸಬೇಡಿ:
ನೆರೆ ಸಂತ್ರಸ್ತರಿಗೆ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯವನ್ನು ಜಾಹೀರಾತಿನಲ್ಲಿ ನೀಡಿದರೆ, ಅದಕ್ಕೂ ಟೀಕೆ ಮಾಡುತ್ತೀರಿ. ನಾವು ನೀಡಿರುವ ಲೆಕ್ಕ ಸರಿಯಿಲ್ಲ ಎಂದಾದರೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಬಹುದು. ಅದನ್ನು ಬಿಟ್ಟು ಸಂತ್ರಸ್ತರಲ್ಲಿ ಏಕೆ ಗೊಂದಲ ಸೃಷ್ಟಿಸುತ್ತಿದ್ದೀರಿ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.