ಸಿದ್ದರಾಮಯ್ಯಗೆ ಸಾಮಾನ್ಯ ಜ್ಞಾನವೂ ಇಲ್ಲ
Team Udayavani, Nov 5, 2019, 3:00 AM IST
ಬೆಂಗಳೂರು: ಯಾವುದೇ ಪ್ರಕರಣದಲ್ಲಿ ಅನಾಥ ಸಿಡಿ ಅಥವಾ ಸ್ಟಿಂಗ್ ಆಪರೇಷನ್ ಮೂಲಕ ಮಾಡಿದ ಸಿ.ಡಿಗಳನ್ನು ನ್ಯಾಯಾಲಯ ಸ್ಯಾಕ್ಷ್ಯವಾಗಿ ಪರಿಗಣಿಸುವುದಿಲ್ಲ ಎಂಬ ಸಾಮಾನ್ಯ ಜ್ಞಾನ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಲ್ಲದಿರುವುದು ದುರದೃಷ್ಟಕರ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಆರೋಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಆಂತರಿಕ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಡಿರುವ ಮಾತುಗಳ ಸಿಡಿಯನ್ನೇ ಮುಂದಿಟ್ಟುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯನವರು ಸುಪ್ರೀಂ ಕೋರ್ಟ್ಗೆ ಹೋಗಿರುವುದು ಹಾಸ್ಯಾಸ್ಪದ.
ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಬೆಂಬಲಿಗರೊಂದಿಗೆ ಅನೌಪಚಾರಿಕವಾಗಿ ಮಾತನಾಡುವಾಗ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡಿರುವ ಸಿಡಿ ಬಿಡುಗಡೆಯಾಗಿತ್ತು. ತಾವು ಒಬ್ಬ ವಕೀಲರಾಗಿ, ಕಾನೂನು ತಿಳಿದುಕೊಂಡಿದ್ದು, ಎವಿಡೆನ್ಸ್ ಆಕ್ಟ್ ಸೆಕ್ಷನ್ 65ರ ಪ್ರಕಾರ ಯಾವುದೇ ಪ್ರಕರಣದಲ್ಲಿ ಅನಾಥ ಸಿಡಿ ಅಥವಾ ಸ್ಟಿಂಗ್ ಆಪರೇಷನ್ ಮೂಲಕ ಮಾಡಿದ ಸಿ.ಡಿಗಳನ್ನು ನ್ಯಾಯಾಲಯ ಸ್ಯಾಕ್ಷ್ಯವಾಗಿ ಪರಿಗಣಿಸುವುದಿಲ್ಲ ಎಂಬ ಸಾಮಾನ್ಯ ಜ್ಞಾನ ನಿಮಗೆ ಇಲ್ಲವೇ? ಎಂದು ಪ್ರಶ್ನಿಸಿದರು.
ಸಿಡಿ ಸಿದ್ದರಾಮಯ್ಯ ಅವರ ಪುರಾಣ ತುಂಬಾ ಇದೆ. ಈ ಹಿಂದೆ ದಿವಂಗತ ಅನಂತಕುಮಾರ್ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ನಕಲಿ ಸಿಡಿ ಬಿಡುಗಡೆ ಮಾಡಿದ್ದರು. ಡಿ.ಕೆ.ಶಿವಕುಮಾರ್, ಜೆಡಿಎಸ್ ಧ್ವಜ ಹಿಡಿದಿದ್ದ ಸಿಡಿ ಹೀಗೆ ಹಲವು ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ಗೆ ಅಪಮಾನ ಮಾಡಿದ್ದಾರೆ. ಬಿಜೆಪಿಯನ್ನು ಹೆದರಿಸಲು ನಕಲಿ ಸಿಡಿ ಮಾಡಿದ್ದಾರೆ. ಇದಕ್ಕೆಲ್ಲ ಬಿಜೆಪಿ ಹೆದರುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
MUST WATCH
ಹೊಸ ಸೇರ್ಪಡೆ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ