“ಉಡುಪಿ ಜಿಲ್ಲೆ: 3 ಸಾವಿರ ಮಂದಿಗೆ ಕೌಶಲ ತರಬೇತಿ ಗುರಿ’


Team Udayavani, Nov 5, 2019, 5:03 AM IST

Shobha-Karandlaje-750-14

ಉಡುಪಿ: ತಾಂತ್ರಿಕ ಸುಧಾರಣೆಗಳಿಂದಾಗಿ ಮುಂದಿನ ದಿನಗಳಲ್ಲಿ ಉದ್ಯೋಗ ಕಡಿತಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ನಾನಾ ವೃತ್ತಿ ಕೌಶಲಗಳನ್ನು ಹೆಚ್ಚಿಸಬೇಕಾಗಿದೆ. ಈ ದೃಷ್ಟಿಯಿಂದ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 3,000 ಯುವಕ/ಯುವತಿಯರಿಗೆ ಕೌಶಲ ತರಬೇತಿ ನೀಡಿ ಅವರನ್ನು ಉದ್ಯೋಗಕ್ಕೆ ಅರ್ಹರನ್ನಾಗಿಸುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017-18ನೇ ಸಾಲಿನಲ್ಲಿ ಯೋಜನೆ ಆರಂಭಗೊಂಡಿತು. ಲಕ್ಷ್ಮೀಂದ್ರನಗರದಲ್ಲಿ ಇದರ ಕಚೇರಿಯನ್ನು ಉದ್ಘಾಟಿಸಲಾಯಿತು. 2018ರ ಫೆಬ್ರವರಿಯಿಂದ 700 ಜನರಿಗೆ ತರಬೇತಿ ನೀಡುವ ಗುರಿ ಇರಿಸಿಕೊಳ್ಳಲಾಗಿತ್ತು. 644 ಜನರಿಗೆ ತರಬೇತಿ ನೀಡಲಾಗಿದೆ.

ಇವರಲ್ಲಿ 12 ಮಂದಿ ಅನುತ್ತೀರ್ಣ ರಾದರು. 632 ಮಂದಿಗೂ ಉದ್ಯೋಗ ದೊರಕಿದೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ. ಟೈಲರಿಂಗ್‌, ಬ್ಯೂಟಿಶಿ ಯನ್‌, ಜೂನಿಯರ್‌ ಸಾಫ್ಟ್ವೇರ್‌ ಡೆವಲಪರ್, ಹಾರ್ಡ್‌ವೇರ್‌ ಇತ್ಯಾದಿ ಕ್ಷೇತ್ರಗಳಲ್ಲಿ ತರಬೇತಿ ಕೊಡಲಾಯಿತು ಎಂದರು.

ಎಲ್ಲರಿಗೂ ತರಬೇತಿ
ಶಾಲೆಯನ್ನು ಮಧ್ಯದಲ್ಲಿ ಬಿಟ್ಟವರಿಂದ ಹಿಡಿದು ಎಂಜಿನಿಯರಿಂಗ್‌ ಕಲಿತವರ ವರೆಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆಯುವವರಿಗೆ ತಿಂಗಳಿಗೆ 1,000 ರೂ.ನಂತೆ ಹೋಗಿ ಬರುವ ಖರ್ಚನ್ನು ನೀಡಲಾಗುತ್ತದೆ ಎಂದರು.

ಏನು ಕಲಿತಿದ್ದಾರೋ ಅವರಿಗೆ ಉದ್ಯೋಗ ದೊರಕುವಂತಾಗಲು 2-3 ತಿಂಗಳ ಮುಂದುವರಿದ ತರಬೇತಿ ನೀಡಲಾಗುತ್ತಿದೆ. ಗ್ರಾ.ಪಂ.ನಿಂದ ಹಿಡಿದು ವಿವಿಧ ಸ್ತರದ ಜನಪ್ರತಿನಿಧಿಗಳು, ಅಧಿಕಾರಿಗಳು ತಮ್ಮ ವ್ಯಾಪ್ತಿಯ ಯುವಕ/ಯುವತಿಯರನ್ನು ಗುರುತಿಸಿ ತರಬೇತಿಗೆ ಕಳುಹಿಸುವಂತೆ ಮಾಡಬೇಕು ಎಂದು ತಿಳಿಸಿದರು.

ಪ್ರಸ್ತುತ ಲೋಕಸಭಾ ಕ್ಷೇತ್ರಕ್ಕೆ ಒಂದರಂತೆ ಕೇಂದ್ರವನ್ನು ತೆರೆಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಗೂ ಕೇಂದ್ರವನ್ನು ತೆರೆಯಲು ಬೇಡಿಕೆ ಇರಿಸಿದ್ದೇನೆ. ಚಿಕ್ಕಮಗಳೂರು ಜಿಲ್ಲೆಯವರು ಸಮೀಪದ ಹಾಸನ ಅಥವಾ ಶಿವಮೊಗ್ಗ ಜಿಲ್ಲೆಗೆ ತರಬೇತಿಗಾಗಿ ತೆರಳಬಹುದು. ರೂಮನ್‌ ಸಂಸ್ಥೆ ತರಬೇತಿಯನ್ನು ನೀಡಲಿದೆ ಎಂದರು.

ಶಾಸಕ ಕೆ. ರಘುಪತಿ ಭಟ್‌, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ರೇಷ್ಮಾ ಉದಯ ಶೆಟ್ಟಿ, ಕೇಂದ್ರದ ಮುಖ್ಯಸ್ಥ ರಾಘವೇಂದ್ರ ರಾವ್‌ ಉಪಸ್ಥಿತರಿದ್ದರು.

ಕೇಂದ್ರದ ವಿವರ:
ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ, ಪ್ರಗತಿ ಬಿಸಿನೆಸ್‌ ಡಿಸ್ಟ್ರಿಕ್ಟ್, ಲಕ್ಷ್ಮೀಂದ್ರನಗರ, ಉಡುಪಿ. ದೂ: 9535040711, ಎಸ್‌ಎಂಎಸ್‌ ಸಂದೇಶ: PMKVY” to ” to 56161.ವೆಬ್‌ಸೈಟ್‌: www.rooman.com, ಇಮೇಲ್‌: [email protected]

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.