ಕಣ್ಣೀರು ತರಿಸಿದ ಉಳ್ಳಾಗಡ್ಡಿ


Team Udayavani, Nov 5, 2019, 10:37 AM IST

huballi-tdy-3

ಹುಬ್ಬಳ್ಳಿ: ಇಲ್ಲಿನ ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಉಳ್ಳಾಗಡ್ಡಿ ದರ ಏಕಾಏಕಿ ಕುಸಿದಿದ್ದನ್ನು ಖಂಡಿಸಿ ರೈತರು ಹುಬ್ಬಳ್ಳಿ-ಧಾರವಾಡ ರಸ್ತೆ ಒಂದು ಗಂಟೆ ಬಂದ್‌ ಮಾಡಿದ ಘಟನೆ ಸೋಮವಾರ ನಡೆಯಿತು.

ಬೆಳಗ್ಗೆ 11 ಗಂಟೆಗೆ ಟೆಂಡರ್‌ ಆರಂಭವಾಗುತ್ತಿದ್ದಂತೆಯೇ ಉಳ್ಳಾಗಡ್ಡಿ ದರ ಕ್ವಿಂಟಲ್‌ಗೆ 1500ರೂ.ದಿಂದ 2000ರೂ. ವರೆಗೆ ನಿಗದಿಯಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೈತರು, ಶನಿವಾರದ ದರ ನೀಡಬೇಕೆಂದು ಒತ್ತಾಯಿಸಿದರು. ವ್ಯಾಪಾರಸ್ಥರಿಂದ ಸ್ಪಂದನೆ ದೊರೆಯದಿದ್ದಾಗ, ರೈತರು ರಸ್ತೆ ತಡೆಗೆ ಮುಂದಾದರು.

ಸುಮಾರು 70-80 ರೈತರು ಹು-ಧಾ ರಸ್ತೆಯ ಮಧ್ಯೆ ಕಲ್ಲುಗಳನ್ನಿಟ್ಟು ರಸ್ತೆ ಬಂದ್‌ ಮಾಡಿದರು. ಪರ್ಯಾಯ ಮಾರ್ಗದಲ್ಲಿ ಸಂಚಾರ ಕಲ್ಪಿಸಲಾಗಿತ್ತು. ಬಿಆರ್‌ಟಿಎಸ್‌ ಬಸ್‌ಗಳಿಗೆ ಸಂಚಾರಕ್ಕೆ ಅವಕಾಶ ಇಲ್ಲದೆ ಸಾಲುಗಟ್ಟಿ ನಿಂತಿದ್ದವು. ಪೊಲೀಸರು ಆಗಮಿಸಿ ರೈತರ ಮನವೊಲಿಕೆಗೆ ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಎಪಿಎಂಸಿ ಅಧ್ಯಕ್ಷರು ಬರಬೇಕೆಂದು ರೈತರು ಪಟ್ಟು ಹಿಡಿದರು. ಎಪಿಎಂಸಿ ಅಧ್ಯಕ್ಷ ಜಗನ್ನಾಥಗೌಡ ಸಿದ್ದನಗೌಡರ ಆಗಮಿಸಿ, ರೈತರು ಹಾಗೂ ವ್ಯಾಪಾರಸ್ಥರ ಸಭೆ ಕರೆಯುವುದಾಗಿ ಭರವಸೆ ನೀಡಿದ್ದರಿಂದ ರೈತರು ರಸ್ತೆ ತಡೆ ಹಿಂತೆ‌ಗೆದುಕೊಂಡರು.

ಗೊಂದಲ: ತಮ್ಮ ಬೇಡಿಕೆಗಳಿಗೆ ಆಗ್ರಹಿಸಿ ಹಮಾಲಿ ಕಾರ್ಮಿಕರು ಇದೇ ವೇಳೆ ಧರಣಿಗೆ ಮುಂದಾಗಿದ್ದರಿಂದ ಗೊಂದಲ ಸೃಷ್ಟಿಯಾಯಿತು. ವ್ಯಾಪಾರಸ್ಥರು ಉದ್ದೇಶಪೂರ್ವಕವಾಗಿ ಹಮಾಲಿ ಕಾರ್ಮಿಕರ ಮೂಲಕ ಹೋರಾಟ ಮಾಡಿಸುತ್ತಿದ್ದಾರೆಂದು ರೈತರು ಆರೋಪಿಸಿದರು. ಈ ವೇಳೆ ರೈತರು-ಹಮಾಲರಮಧ್ಯ ಮಾತಿನ ಚಕಮಕಿ ನಡೆಯಿತು. ವ್ಯಾಪಾರಸ್ಥರು ಹಮಾಲರಿಗೆ ಬೆಂಬಲ ನೀಡಿದ್ದು ರೈತರ ಆಕ್ರೋಶ ಇನ್ನಷ್ಟು ಹೆಚ್ಚುವಂತೆ ಮಾಡಿತು.

ಅಸಮಾಧಾನ ಸ್ಫೋಟ: ಎಪಿಎಂಸಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಭಾಗಗಳಿಂದ ರೈತರು ಇಲ್ಲಿನ ಎಪಿಎಂಸಿಗೆ ಈರುಳ್ಳಿ ಮಾರಾಟಕ್ಕೆ ಬಂದಿದ್ದಾರೆ. ಶನಿವಾರ ಉತ್ತಮ ಗುಣಮಟ್ಟದ ಈರುಳ್ಳಿ ಕ್ವಿಂಟಲ್‌ಗೆ 5000ರೂ.ವರೆಗೂ ಮಾರಾಟವಾಗಿದೆ. ಆದರೆ ಸೋಮವಾರ ಆವಕ ಹೆಚ್ಚಾಗಿದೆ ಎಂದು ವ್ಯಾಪಾರಸ್ಥರು ಏಕಾಏಕಿ ದರ ಇಳಿಸಿದ್ದಾರೆ. ಅತಿವೃಷ್ಟಿಯಿಂದಾಗಿ ರೈತರು ಆತಂಕದಲ್ಲಿದ್ದಾರೆ. ಉಳ್ಳಾಗಡ್ಡಿಗೆ ಕ್ವಿಂಟಲ್‌ಗೆ 1500ರಿಂದ 2000ರೂ.ವರೆಗೆ ದರ ನಿಗದಿ ಮಾಡಿದರೆ ನಾವು ರೈತರು ಬದುಕುವುದು ಹೇಗೆ? ಎಂಬುದು ರೈತರ ಪ್ರಶ್ನೆಯಾಗಿತ್ತು. ಎಪಿಎಂಸಿ ಅಧ್ಯಕ್ಷ ಜಗನ್ನಾಥಗೌಡ ಸಿದ್ದನಗೌಡರ, ರೈತರ ಹಿತ ಕಾಪಾಡುವುದು ಎಪಿಎಂಸಿ ಕರ್ತವ್ಯ.

ಟೆಂಡರ್‌ ಪ್ರಕ್ರಿಯೆಗೆ ಸಹಕರಿಸುವಂತೆ ರೈತರಿಗೆ ಮನವಿ ಮಾಡಿದರಲ್ಲದೆ, ಉತ್ತಮ ಗುಣಮಟ್ಟದ ಉಳ್ಳಾಗಡ್ಡಿಗೆ ಒಳ್ಳೆಯ ದರ ನೀಡಿ ಎಂದು ವ್ಯಾಪಾರಸ್ಥರಿಗೆ ತಿಳಿಸಿದರು. ನಂತರ ಟೆಂಡರ್‌ ಆರಂಭಗೊಂಡಿತು. ಉತ್ತಮ ಗುಣಮಟ್ಟದ ಉಳ್ಳಾಗಡ್ಡಿಗೆ ಪ್ರತಿ ಕ್ವಿಂಟಲ್‌ಗೆ 4000ರೂ. ವರೆಗೂ ದರ ಲಭಿಸಿತು.

ಟಾಪ್ ನ್ಯೂಸ್

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.