ಸಾರಿಗೆ ಸಂಸ್ಥೆ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
Team Udayavani, Nov 5, 2019, 10:58 AM IST
ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಬ್ಬರು ಅಧಿಕಾರಿಗಳು 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ನಗರ ಕೇಂದ್ರ ಬಸ್ ನಿಲ್ದಾಣದ 2ನೇ ವಿಭಾಗೀಯ ಕಚೇರಿ ನಿಯಂತ್ರಕ ಶರಣಬಸಪ್ಪ ಭಾವಿಕಟ್ಟಿ ಮತ್ತು ಸಹಾಯಕ ಸಾರಿಗೆ ವ್ಯವಸ್ಥಾಪಕ (ಎಟಿಎಂ) ಜಯವಂತ ಎಸಿಬಿ ಬಲೆಗೆ ಬಿದ್ದವರು.
ಆಳಂದ ಡಿಪೋ ಮ್ಯಾನೇಜರ್ ಈಶ್ವರ ಪರಿಟ್ ಅವರಿಂದ ಲಂಚ ಸ್ವೀಕರಿಸಿದ್ದರು. ಪ್ರಕರಣವೊಂದರಲ್ಲಿ ಈಶ್ವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದ್ದು, ಇದನ್ನು ಇತರ್ಥ್ಯ ಪಡಿಸಲು ಶರಣಬಸಪ್ಪ ಭಾವಿಕಟ್ಟಿ ಅವರು ಜಯವಂತ ಮೂಲಕ ಒಂದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅದರಂತೆ ಈಶ್ವರ ಅವರಿಂದ ಜಯವಂತ 50 ಸಾವಿರ ರೂ. ಲಂಚ ಸ್ವೀಕರಿಸಿದ್ದರು. ಈ ಲಂಚದ ಹಣವನ್ನು ಸೋಮವಾರ ಸಂಜೆ ಭಾವಿಕಟ್ಟಿ ಅವರಿಗೆ ಜಯವಂತ ನೀಡಲು ಹೋದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಎಸಿಬಿ ಎಸ್ಪಿ ವಿ.ಜಿ. ಜ್ಯೋತಿ ಮಾರ್ಗದರ್ಶನದಲ್ಲಿ ಡಿಎಸ್ಪಿ ಸುಧಾ ಆದಿ, ಇನ್ಸ್ಪೆಕ್ಟರ್ಗಳಾದ ಕೃಷ್ಣಪ್ಪ ಕಲ್ಲದೇವರು, ಮಹಮ್ಮದ್ ಇಸ್ಮಾಯಿಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?