ಸಕಲ ಸೌಲಭ್ಯವಿದ್ದರೂ ಓದುಗರೇ ಇಲ್ಲ


Team Udayavani, Nov 5, 2019, 3:39 PM IST

uk-tdy-1

ಭಟ್ಕಳ: ನಗರದ ಮಧ್ಯ ಭಾಗದಲ್ಲಿ ಗ್ರಂಥಾಲಯವು ಹೊಸ ಸ್ವಂತ ಕಟ್ಟಡದೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು 28 ಸಾವಿರದಷ್ಟು ಪುಸ್ತಕಗಳಿವೆ, ಕನ್ನಡ, ಇಂಗ್ಲೀಷ್‌, ಹಿಂದಿ, ಉರ್ದು, ಮರಾಠಿ ಸೇರಿದಂತೆ 20ಕ್ಕೂ ಹೆಚ್ಚು ದಿನ ಪತ್ರಿಕೆಗಳು, ನಿಯತಕಾಲಿಕೆಗಳು ಬರುತ್ತಿದ್ದರೂ ಸಹ ಓದುಗರ ನಿರುತ್ಸಾಹ ಎದ್ದು ಕಾಣುತ್ತಿದೆ.

ನಗರದ ಗ್ರಂಥಾಲಯದಲ್ಲಿ ಸುಮಾರು 1000 ಸದಸ್ಯರು ತಮ್ಮ ನೋಂದಣಿಯನ್ನು ಮಾಡಿಕೊಂಡಿದ್ದಾರೆ. ಈ ಹಿಂದೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಥೆ ಪುಸ್ತಕ, ಕಾದಂಬರಿ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಿ ಓದಿ ತಂದು ಕೊಡುತ್ತಿದ್ದರೆ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಲೈಬ್ರರಿಯತ್ತ ಮುಖ ಮಾಡುವುದೇ ಕಡಿಮೆಯಾಗಿದೆ. 28 ಸಾವಿರ ಪುಸ್ತಕಗಳಿದ್ದರೂ ದಿನವೊಂದಕ್ಕೆ ಕನಿಷ್ಠ ಐವರೂ

ಕೂಡಾ ಪುಸ್ತಕಗಳನ್ನು ತೆಗೆದುಕೊಂಡು ಹೋಗಲು ಬರುವುದು ಕಷ್ಟ ಸಾಧ್ಯ ಎನ್ನುವಂತಾಗಿದ್ದರೆ, ದಿನ ನಿತ್ಯ ಪತ್ರಿಕೆಗಳನ್ನು ಓದಲು ಕನಿಷ್ಠ 50 ರಿಂದ 100 ಜನರು ಬರುತ್ತಾರೆ ಎನ್ನುವುದೇ ಸಮಾಧಾನ. ಲೈಬ್ರರಿಯಲ್ಲಿ ಕೇವಲ ಕಥೆ, ಕಾದಂಬರಿ ಪುಸ್ತಕಗಳು ಮಾತ್ರವಲ್ಲ ಅನೇಕ ಇತರೆ ಪುಸ್ತಕಗಳೂ ಕೂಡಾ ಇದ್ದು ಅವುಗಳಲ್ಲಿ ಜನರಲ್‌ ನ್ಯಾಲೆಡ್ಜ್ ರೈಲ್ವೇ, ಎಫ್‌ಸಿಡಿ, ಎಸ್‌ಡಿಸಿ, ಬ್ಯಾಂಕಿಂಗ್‌ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳೂ ಕೂಡಾ ಲಭ್ಯವಾಗುವುದರಿಂದ ಪರೀಕ್ಷೆಗಳು ಇದ್ದಾಗ ಯುವಕರು ಅನೇಕರು ಬಂದು ಸದಸ್ಯತ್ವ ಪಡೆದು ಇಂತಹ ಪುಸ್ತಕಗಳನ್ನು ತೆಗೆದುಕೊಂಡು ಹೋಗುವುದು ಬಿಟ್ಟರೆ ಇನ್ನಿತರ ಸಮಯದಲ್ಲಿ ಯುವಕರು ಗ್ರಂಥಾಲಯದ ಬಳಿಯಲ್ಲಿಯೂ ಸುಳಿಯುವುದಿಲ್ಲ.

ಯುವ ಸಮೂಹ ಇ-ಲೈಬ್ರರಿಯನ್ನು ನಂಬಿಕೊಂಡಿದ್ದಾರೆಯೇ ಎನ್ನುವ ಪ್ರಶ್ನೆ ಮುಡುವುದು ಸಹಜ. ಸರಕಾರ ಗ್ರಾಮೀಣ ಭಾಗದ ಜನತೆಗೆ ಅನುಕೂಲವಾಗುವಂತೆ ಪ್ರತಿ ಗ್ರಾಪಂ ಮಟ್ಟದಲ್ಲಿ ಗ್ರಾಮೀಣ ಗ್ರಂಥಾಲಯಗಳನ್ನು ತೆರೆದು ಗ್ರಾಂಥಾಲಯ ಸಹಾಯಕರನ್ನು ತಾತ್ಕಾಲಿಕ ನೆಲೆಯಲ್ಲಿ ನೇಮಕ ಮಾಡಿಕೊಂಡು ಅವರಿಗೆ ನಿಗದಿತ ಸಂಬಳ ಕೊಡಲು ಆರಂಭಿಸಿತು. ತಾಲೂಕಿನಲ್ಲಿ 16 ಗ್ರಾಪಂಗಳಿದ್ದು ಪ್ರತಿ ಗ್ರಾಪಂ ಮಟ್ಟದಲ್ಲಿಯೂ 3 ರಿಂದ 10 ಸಾವಿರ ಪುಸ್ತಕಗಳಿವೆ. ದಿನ ನಿತ್ಯ 2 ರಿಂದ 5 ದಿನ ಪತ್ರಿಕೆಗಳು, ನಿಯತಕಾಲಿಕೆಗಳು ಬರುತ್ತವೆ. ಆದರೆ ಓದುಗರೇ ಇಲ್ಲ. ಪ್ರತಿ ಗ್ರಾಪಂ ಮಟ್ಟದಲ್ಲಿ ಸರಾಸರಿ 5 ರಿಂದ 10 ಜನರು ಓದುಗರು ಭೇಟಿ ನೀಡುತ್ತಾರೆ.

ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಸರಿಯಾಗಿ ಸಂಬಳ ಪಾವತಿಯಾಗುತ್ತಿಲ್ಲ ಎನ್ನುವ ಕೊರಗು ಒಂದೆಡೆಯಾದರೆ, ಗ್ರಾಪಂ ಮಟ್ಟದಲ್ಲಿರುವ ಗ್ರಂಥಾಲಯಗಳನ್ನು ಇನ್ನು ಮುಂದೆ ಗ್ರಾಪಂ ನಿರ್ವಹಿಸುವುದು ಎನ್ನುವುದು ಇನ್ನೊಂದು ವಿಷಯ. ಇಲ್ಲಿ ಕಳೆದ ಹಲವಾರು ವರ್ಷಗಳಿಂದ ಅಲ್ಪ ಸಂಬಳಕ್ಕೆ ದುಡಿದು ಇದು ನಮ್ಮ ಗ್ರಂಥಾಲಯ ಎಂದು ತಿಳಿದು ಕೊಂಡಿರುವವರಿಗೆ ಮುಂದೇನು ಎನ್ನುವಂತಾಗಿದೆ.

ಸರಕಾರ ಗ್ರಾಂಥಾಲಯ ಇಲಾಖೆಯಿಂದ ಗ್ರಾಮ ಪಂಚಾಯತಕ್ಕೆ ಹಸ್ತಾಂತರಿಸಿದ್ದೇ ಆದಲ್ಲಿ ಈಗಿರುವ ಗ್ರಾಂಥಾಲಯ ಸಹಾಯಕರು ಎಲ್ಲಿಗೆ ಹೋಗಬೇಕು. ಗ್ರಾಮ ಪಂಚಾಯತ್‌ ಇವರನ್ನೇ ಮುಂದುವರಿಸುತ್ತದೆ ಎನ್ನುವ ಖಾತ್ರಿ ಇದೆಯೇ ಎನ್ನುವ ಪ್ರಶ್ನೆ ಕಾಡುತ್ತಿರುವುದು ಮಾತ್ರ ಸತ್ಯ

 

-ಆರ್ಕೆ, ಭಟ್ಕಳ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.