ವಕೀಲರ ಮೇಲೆ ಹಲ್ಲೆಗೆ ಖಂಡನೆ
Team Udayavani, Nov 5, 2019, 6:16 PM IST
ಮಾಲೂರು: ಪೊಲೀಸರು ಪದೇಪದೆ ವಕೀಲರ ಮೇಲೆ ಹಲ್ಲೆ ನಡೆಸುತ್ತಿರುವ ಜೊತೆಗೆ ನ್ಯಾಯಾಂಗ ಇಲಾಖೆಯ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ದೂರಿದರು.
ಪಟ್ಟಣದ ಕೋರ್ಟ್ ಸಂಕೀರ್ಣದಲ್ಲಿನ ವಕೀಲರ ಸಂಘದ ಕಚೇರಿಯಲ್ಲಿ ಸಭೆ ನಡೆಸಿದ ನಂತರ ನವದೆಹಲಿ ಪೊಲೀಸರು ವಕೀಲರ ಮೇಲೆ ನಡೆಸಿರುವ ಹಲ್ಲೆ ಖಂಡಿಸಿ, ಸೋಮವಾರದ ಕೋರ್ಟ್ ಕಲಾಪ ಬಷ್ಕರಿಸಿ, ಆವರಣದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದರು. ಮಹಾನಗರ ಬೆಂಗಳೂರು ಸೇರಿ ದೇಶದ ಹಲವು ಕಡೆಗಳಲ್ಲಿ ಪೊಲೀಸರು ವಕೀಲರ ಮೇಲೆ ವಿನಾಕಾರಣ ಹಲ್ಲೆ ನಡೆಸುತ್ತಿದ್ದು, ಇಂತಹ ಘಟನೆಗಳಿಂದ ಪೊಲೀಸ್ ಮತ್ತು ನ್ಯಾಯಾಂಗ ಇಲಾಖೆಗಳ ಮೇಲೆ ವಿಶ್ವಾಸ ಕಡಿಮೆಯಾಗುವಸಾಧ್ಯತೆ ಹೆಚ್ಚಿದೆ.
ಹಲ್ಲೆ ಪ್ರಕರಣಗಳು ಮತ್ತೆ ನಡೆಯದಂತೆ ಎಚ್ಚರವಹಿಸ ಬೇಕಾಗಿದೆ ಎಂದು ಹೇಳಿದರು. ಕಾನೂನು ಪಾಲಿಸುವ ಪೊಲೀಸರು ಮತ್ತು ವಕೀಲರು ಜಗಳ ಮಾಡುವುದರಿಂದ ಸಾರ್ವಜನಿಕರಲ್ಲಿ ಕಾನೂನಿನ ಮೇಲಿರುವ ಗೌರವ ಕಡಿಮೆಯಾಗಲಿದೆ. ಇಂತಹ ಘಟನೆಗಳನ್ನು ಖಂಡಿಸಿ ಮಾಲೂರು ತಾಲೂಕು ವಕೀಲರ ಸಂಘ ಇಂದಿನ ಕೋರ್ಟ್ ಕಲಾಪ ಬಹಿಷ್ಕರಿಸುತ್ತಿದೆ ಎಂದರು. ವಕೀಲರ ಸಂಘದ ಉಪಾಧ್ಯಕ್ಷ ಅಮರನಾರಾಯಣ್, ಕಾರ್ಯದರ್ಶಿ ಅಶ್ವತ್ಥ್ನಾರಾಯಣ್, ಸಾಗರ್ಗೌಡ, ಜಗನ್ನಾಥ್ ಮತ್ತಿತರರು ಇದೇವೇಳೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
MUST WATCH
ಹೊಸ ಸೇರ್ಪಡೆ
India-born ಸುನೀತಾ ವಿಲಿಯಮ್ಸ್ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!
Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್
China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ ನಲ್ಲಿ 6 ಬೆಡ್ ಮೀಸಲು