ಮೆಟ್ರೋ 2ನೇ ಹಂತ; 684 ಮರಗಳ ತೆರವು


Team Udayavani, Nov 6, 2019, 10:07 AM IST

bng-tdy-2

ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತದಲ್ಲಿ ಒಟ್ಟಾರೆ 684 ಮರಗಳನ್ನು ತೆರವುಗೊಳಿಸಲು ಉದ್ದೇಶಿಸಿದ್ದು, ಈ ಪೈಕಿ 107 ಮರಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಸ್ಪಷ್ಟಪಡಿಸಿದೆ.

ಮಂಗಳವಾರ ತನ್ನ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್‌ ಮಾಸಿಕ ಪತ್ರ ಹೊರಡಿಸಿರುವ ಬಿಎಂಆರ್‌ಸಿಎಲ್‌, ಮೆಟ್ರೋ ನಿರ್ಮಾಣಕ್ಕಾಗಿ 684 ಮರಗಳ ತೆರವುಗೊಳಿಸಬೇಕಾಗುತ್ತದೆ. ಈ ಪೈಕಿ 222 ಮರಗಳ ತೆರವಿಗೆ ಯಾವುದೇ ಅನುಮತಿ ಅವಶ್ಯಕತೆ ಇಲ್ಲ. ಇನ್ನು 107 ಮರಗಳನ್ನು ಈಗಾಗಲೇ ಕಡಿಯಲಾಗಿದ್ದು, ಉಳಿದ 355 ತೆರವುಗೊಳಿಸುವ ಕಾರ್ಯ ನಡೆದಿದೆ. ಇದಕ್ಕೆ ಪ್ರತಿಯಾಗಿ ಬಿಎಂಆರ್‌ಸಿಎಲ್‌, ಬಿಬಿಎಂಪಿ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಎಂಟು ಸಾವಿರ ಸಸಿಗಳನ್ನು ನೆಡಲು ಉದ್ದೇಶಿಸಿದ್ದು, ಈ ಸಂಬಂಧ ನಿಗಮವು 63.37 ಲಕ್ಷ ರೂ. ಪಾಲಿಕೆಯಲ್ಲಿ ಠೇವಣಿ ಇಟ್ಟಿದೆ.

ಇನ್ನು ಮರಗಳ ತೆರವಿಗೆ ಹೈಕೋರ್ಟ್‌ ಸೂಚನೆಯಂತೆ ಮರಗಳ ತಜ್ಞರ ಸಮಿತಿ ರಚಿಸಲಾಗಿದ್ದು, ಅವರ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಅದೇ ರೀತಿ, ಹೊರವರ್ತುಲ ರಸ್ತೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗವೂ ಸೇರಿದಂತೆ ಎರಡನೇ ಹಂತದಲ್ಲಿ ಸರ್ಕಾರ ಮತ್ತು ಖಾಸಗಿ ಒಳಗೊಂಡಂತೆ 3,224 ಸ್ಥಿರಾಸ್ತಿಗಳ ತೆರವುಗೊಳಿಸುವ ಅವಶ್ಯಕತೆ ಇದೆ. ಈ ಪೈಕಿ 2,735 ಆಸ್ತಿಗಳ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇದರಲ್ಲಿ 2,462 ಸಂಬಂಧಪಟ್ಟ ಎಂಜಿನಿಯರ್‌ ಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ 767 ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಳ್ಳಬೇಕಿದೆ.ಇದರಲ್ಲಿ 686 ಖಾಸಗಿ ಆಸ್ತಿಗಳಾಗಿವೆ.

ಮೆಟ್ರೋ ಪ್ರಯಾಣ: ಹೆಚ್ಚಿದ ಆದಾಯ: ಇಡೀ ಸೆಪ್ಟೆಂಬರ್‌ನಲ್ಲಿ ಒಟ್ಟಾರೆ 1,19,16,426 ಜನ ಮೆಟ್ರೋದಲ್ಲಿ ಪ್ರಯಾಣಿಸಿದ್ದು, ಇದರಿಂದ 31,53,30,704 ರೂ. ಆದಾಯ ಹರಿದುಬಂದಿದೆ ಎಂದು ಮಾಸಿಕ ಪತ್ರದಲ್ಲಿ ಬಿಎಂಆರ್‌ಸಿಎಲ್‌ ತಿಳಿಸಿದೆ. ಆ ತಿಂಗಳಲ್ಲಿ ಶೇ. 62.12 ಸ್ಮಾರ್ಟ್‌ ಕಾರ್ಡ್‌ನಿಂದ ಹಾಗೂ ಶೇ. 37.80 ಟೋಕನ್‌ ಮೂಲಕ ಆದಾಯ ಬಂದಿದೆ. ಶೇ. 0.08 ಮಾತ್ರ ಗುಂಪು ಟಿಕೆಟ್‌ ಖರೀದಿಯಾಗಿದೆ. ಕಾರ್ಯಾಚರಣೆ ದಕ್ಷತೆ ಶೇ. 99.98ರಷ್ಟಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.