ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಮನವಿ
Team Udayavani, Nov 6, 2019, 2:39 PM IST
ಕೊಪ್ಪಳ: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಇತರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ. ಚಂದ್ರಶೇಖರ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಕೊಪ್ಪಳದಲ್ಲಿ ಮನವಿ ಸಲ್ಲಿಸಿದರು.
ನಗರದ ಹೊರವಲಯದಲ್ಲಿರುವ ಬೆಟ್ಟಗಳ ಸಾಲುಗಳ ಮಧ್ಯದಲ್ಲಿ ಪುರಾಣ ಪ್ರಸಿದ್ಧ ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿದ ಮಳೆಮಲ್ಲೇಶ್ವರ ದೇವಸ್ಥಾನವಿದೆ. ಇದಕ್ಕೆ ಇಂದ್ರಕಿಲ ಪರ್ವತವೆಂದು ಉಲ್ಲೇಖವಿದೆ. ಪರ್ವತದಲ್ಲಿ ಈಶ್ವರ ತಪಸ್ಸುಗೈದು ಅರ್ಜುನನಿಗೆ ಪಾಶುಪಶಾಸ್ತ್ರ ನೀಡಿದ ಸ್ಥಳವೆಂಬ ಪ್ರತೀತಿಯಿದೆ. ದೇವಸ್ಥಾನ ಗರ್ಭಗುಡಿಯ ಸ್ವಾಮಿಯ ಪೀಠದಿಂದ ಹರಿದುಬರುವ ಪವಿತ್ರ ತೀರ್ಥದ ಸಂಗ್ರಹಣೆಗೆ ಪುಷ್ಕರಣಿ ಅವಶ್ಯಕತೆ ಇರುವುದರಿಂದ ಅನುದಾನ ನೀಡಿ ನಿರ್ಮಾಣಕ್ಕೆ ಸಹಕರಿಸಬೇಕು. ಕೋಟೆ ಹಾಗೂ ಹುಲಿಕೆರಿ ಕುರಿತಂತೆ ಮಾಹಿತಿ ತಿಳಿಸಿದರು.
ಮನವಿ ಸ್ವೀಕರಿಸಿದ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಲು ಶ್ರಮಿಸುವುದಾಗಿ ತಿಳಿಸಿದರು. ಬಿಜೆಪಿ ಮುಖಂಡರಾದ ಅಪ್ಪಣ್ಣ ಪದಕಿ, ಸುರೇಶ ದೇಸಾಯಿ, ಹಾಲೇಶ ಕಂದಾರಿ, ದೇವರಾಜ ಹಾಲಸಮುದ್ರ, ರಾಘವೇಂದ್ರ, ರಾಜಕುಮಾರ ಹಾಗೂ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ಬಿ.ಗಿರೀಶಾನಂದ ಜ್ಞಾನಸುಂದರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
MUST WATCH
ಹೊಸ ಸೇರ್ಪಡೆ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”