ಬಿಎಸ್‌ವೈ ಒಳ್ಳೆಯ ಕೆಲಸಕ್ಕೆ ಗೌಡರ ಹೊಗಳಿಕೆ


Team Udayavani, Nov 7, 2019, 3:08 AM IST

bsy-olleya

ಬಾಗಲಕೋಟೆ: ಶತಮಾನದಲ್ಲೇ ಕಂಡರಿಯದ ಭೀಕರ ಪ್ರವಾಹ ನಿಭಾಯಿಸುವಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸ ಮಾಡುತ್ತಿದೆ. ಸಿಎಂ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿರುವುದನ್ನು ಕಂಡು ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲ ಕೊಡುತ್ತೇವೆ ಎಂದು ಬೆನ್ನು ತಟ್ಟಿ ಹೇಳಿದರೆ ನಾವು ಸ್ವಾಗತ ಮಾಡುತ್ತೇವೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಕಮತಗಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ದೇವೇಗೌಡರು ಈ ರಾಜ್ಯದ ಹಿರಿಯ ರಾಜಕಾರಣಿ. ಪ್ರಧಾನಿಯಾಗಿ ಕೆಲಸ ಮಾಡಿದ್ದಾರೆ. ಅದೇ ರೀತಿ, ಕುಮಾರಸ್ವಾಮಿ ಕೂಡ ಎರಡು ಬಾರಿ ಸಿಎಂ ಆಗಿದ್ದವರು. ಉತ್ತಮ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರಿಗೆ ಬೆನ್ನು ತಟ್ಟಿ ಮುನ್ನಡೆಯಿರಿ ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ. ಸಿಎಂ ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿರುವುದನ್ನು ಅವರು ಶ್ಲಾಘನೆ ಮಾಡಿದ್ದಾರೆ ಎಂದರು.

ಜೆಡಿಎಸ್‌ ಬೆಂಬಲಕ್ಕೆ ಸ್ವಾಗತ: ಸಿ.ಪಿ.ಯೋಗೇಶ್ವರ್‌
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದರೆ ಸ್ವಾಗತ. ಆದರೆ, ಅವರು ತಮ್ಮ ಮಾತಿಗೆ ಎಲ್ಲಿಯವರೆಗೆ ಬದ್ಧರಾಗಿರುತ್ತಾರೋ ನೋಡೋಣ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ, ಜೆಡಿಎಸ್‌ನಿಂದ ಬೆಂಬಲ ಕೇಳಿಲ್ಲ. ಆದರೆ, ಅವರಾಗಿಯೇ ಬೆಂಬಲಿಸುವುದಾಗಿ ಹೇಳಿದ್ದಾರೆ. ಇದರ ಹಿಂದೆ ಯಾವ ಲೆಕ್ಕಾಚಾರ ಇದೆಯೋ ಗೊತ್ತಿಲ್ಲ. ಅವರ ಈ ಮಾತು ಎಲ್ಲಿಯ ವರೆಗೆ ಮುಂದುವರಿಯುತ್ತದೆಯೋ ನೋಡಬೇಕು ಎಂದರು.

ಹುಣಸೂರಲ್ಲಿ ಸ್ಪರ್ಧೆಗೆ ಸಿದ್ಧ: ಇದೇ ವೇಳೆ, ತಾವು ಹುಣಸೂರಿನಲ್ಲಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದವಿರುವುದಾಗಿ ಅವರು ತಿಳಿಸಿದರು. ಚುನಾವಣೆಗೆ ಸ್ಪರ್ಧಿಸಲು ಚನ್ನ ಪಟ್ಟಣವಾದರೇನು?, ಹುಣಸೂರಾದರೇನು? ಸ್ಪರ್ಧಿ ಸಲು ನಾನು ಸಿದ್ಧನಿದ್ದೇನೆ. ಸೋಲು, ಗೆಲುವು ಆ ಮೇಲಿನ ಮಾತು. ಎಚ್‌.ವಿಶ್ವನಾಥ್‌ ಅವರೇ ಹುಣಸೂರಿನಲ್ಲಿ ಸ್ಪರ್ಧಿಸಲು ಕರೆದುಕೊಂಡು ಹೋಗಬೇಕು. ಈ ವಿಚಾರದಲ್ಲಿ ಪಕ್ಷದ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು. ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟಿಸಿರುವ ಬಗ್ಗೆ ಮಾಹಿತಿ ಇಲ್ಲ. ಅವರೇ ಪಕ್ಷದಿಂದ ಹೊರ ಹೋಗುವುದಾಗಿ ಹೇಳಿದ್ದರು ಎಂದು ಅವರು ಹೇಳಿದರು.

ಬಾಹ್ಯ ಬೆಂಬಲ ಬೇಡ ಎನ್ನಲ್ಲ
ದಾವಣಗೆರೆ: ಬಿಜೆಪಿಗೆ ಬಹುಮತ ಇದೆ. ಆದರೂ, ಜೆಡಿಎಸ್‌ ಬಾಹ್ಯ ಬೆಂಬಲ ನೀಡಿದರೆ ಬೇಡ ಎನ್ನಲಾಗದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಬುಧವಾರ ಹೊನ್ನಾಳಿ ತಾಲೂಕಿನ ಸರಟೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಗೆ ಸಂಪೂರ್ಣ ಬಹುಮತ ಇದೆ. ಅದೇ ರೀತಿ ಶಾಸಕರ ಬೆಂಬಲವೂ ಇದೆ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತವಿದ್ದರೂ ಅನೇಕ ಪಕ್ಷಗಳು ಬೆಂಬಲ ನೀಡಿವೆ. ಹಾಗೆಯೇ ಇಲ್ಲಿಯೂ ಬೆಂಬಲ ನೀಡಿದರೆ ಬೇಡ ಎನ್ನಲಾಗದು ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬೀಳಲು ಅವಕಾಶ ನೀಡುವುದಿಲ್ಲ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಹೀಗಾಗಿ, ಬೆಂಬಲದ ಮಾತು ಬಂದರೆ ಬೇಡ ಎನ್ನಲಾಗದು. ಕಾಂಗ್ರೆಸ್‌-ಜೆಡಿಎಸ್‌ ಮಿತ್ರತ್ವ ಉಳಿಯಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅದರ ಫಲ ಅನುಭವಿಸಿದರು. ಪೂರ್ಣ ಬಹುಮತ ಬರದಿದ್ದರೂ ಬಿಜೆಪಿಯೇ ಆಡಳಿತ ನಡೆಸಬೇಕು ಎನ್ನುವ ವಾತಾವರಣ ಸೃಷ್ಟಿಯಾಗಿದೆ. ಚುನಾವಣೆ ಬರುತ್ತದೆ ಎಂಬುದಾಗಿ ಕಾಯುತ್ತಿದ್ದಾರೆ. ಚುನಾವಣೆ ನಡೆದರೆ ಸದೃಢವಾಗಿರುವ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದರು.

ಉಪ್ಪು-ಹುಳಿ- ಖಾರ ಹಾಕಬೇಡಿ
ಬಾಗಲಕೋಟೆ: ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರೂ ಅಲ್ಲ. ಯಡಿಯೂರಪ್ಪ ಅನುಭವಿ ರಾಜಕಾರಣಿ. ದೂರದೃಷ್ಟಿಯ ಚಿಂತಕ. ವಿರೋಧಿಗಳನ್ನೂ ಸ್ವೀಕಾರ ಮಾಡುವ ದೊಡ್ಡತನ ಬೆಳೆಸಿಕೊಂಡಿದ್ದಾರೆ. ಹೀಗಾಗಿಯೇ ದೇವೇಗೌಡರು, ಯಡಿಯೂರಪ್ಪ ಕುರಿತು ಮೃದು ಧೋರಣೆಯಿಂದ ಮಾತನಾಡಿದ್ದಾರೆ. ಇದಕ್ಕೆ ಉಪ್ಪು-ಹುಳಿ-ಖಾರ ಹಾಕುವುದು ಬೇಡ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಕಮತಗಿಯಲ್ಲಿ ಪ್ರವಾಹ ಪೀಡಿದ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪ ನಿಭಾಯಿಸುವ ಶಕ್ತಿ ಯಡಿಯೂರಪ್ಪ ಅವರಿಗೆ ಮಾತ್ರವಿದೆ. ನಾನು, ಗೋವಿಂದ ಕಾರಜೊಳ, ಸಿದ್ದರಾಮಯ್ಯ ಒಟ್ಟಿಗೆ ಸಚಿವರಾಗಿದ್ದೆವು. ಅಂದಿನ ಸಿದ್ದರಾಮಯ್ಯ ಈಗ ಕಳೆದು ಹೋಗಿದ್ದಾರೆ. ಅವರ ಕ್ಷೇತ್ರ ಬಾದಾಮಿಗೆ ಹೋಗದೇ ಇರಲು ಬೇರೆ ಕಾರಣಗಳಿಲ್ಲ. ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಸಿದ್ದರಾಮಯ್ಯ ನನಗೆ ಹೊಸಬರೇನಲ್ಲ. ಮೊನ್ನೆ ವರುಣಾ ಕ್ಷೇತ್ರಕ್ಕೆ ಹೋಗಿದ್ದೆ. ಮತ್ತೆ ಹೋಗುತ್ತೇನೆ ಎಂದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.