ಕೆಪಿಎಲ್ ಫಿಕ್ಸಿಂಗ್: ಇಬ್ಬರು ರಣಜಿ ಆಟಗಾರರ ಬಂಧನ
Team Udayavani, Nov 7, 2019, 9:37 AM IST
ಬೆಂಗಳೂರು: ಕರ್ನಾಟಕ ಕ್ರೀಡಾ ಲೋಕದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಆಟಗಾರರನ್ನು ಬಂಧಿಸಿಲಾಗಿದೆ. ಅವರಿಬ್ಬರೂ ಕರ್ನಾಟಕದ ಪರ ರಣಜಿ ಆಡಿದ ಆಟಗಾರರು ಎನ್ನುವುದು ವಿಶೇಷ.
ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿ ಎಂ ಗೌತಮ್ ಮತ್ತು ಅಬ್ರಾರ್ ಖಾಜಿ ಬಂಧಿತ ಆಟಗಾರರು.
ಈ ಇಬ್ಬರು ಆಟಗಾರರು ಈ ಬಾರಿಯ ಕೆಪಿಎಲ್ ಕೂಟದ ಫೈನಲ್ ಪಂದ್ಯದಲ್ಲಿ ಸ್ಟಾಟ್ ಫಿಕ್ಸಿಂಗ್ ನಡೆಸಿದ್ದರು ಎಂದು ವರದಿಯಾಗಿದೆ. ಹುಬ್ಬಳ್ಳಿ ಟೈಗರ್ಸ್ ಮತ್ತು ಬಳ್ಳಾರಿ ಟಸ್ಕರ್ಸ್ ನಡುವಿನ ಪಂದ್ಯದಲ್ಲಿ ಈ ಸ್ಪಾಟ್ ಫಿಕ್ಸಿಂಗ್ ನಡೆದಿತ್ತು.
ಈ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಗಾಗಿ 20 ಲಕ್ಷ ಪಡೆದಿದ್ದರು ಮತ್ತು ಬೆಂಗಳೂರು ವಿರುದ್ಧದ ಪಂದ್ಯದಲ್ಲೂ ಫಿಕ್ಸಿಂಗ್ ಮಾಡಿದ್ದರು ಎಂದು ವರದಿಯಾಗಿದೆ.
ಫೈನಲ್ ಪಂದ್ಯದಲ್ಲಿ ಬೆಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ 37 ಎಸೆತ ಎದುರಿಸಿ 29 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಬೆಳ್ಳಾರಿ ತಂಡ ಎಂಟು ರನ್ ಗಳಿಂದ ಸೋಲನುಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!